ಶಕ್ತಿ ಯೋಜನೆ | ಮತ್ತಷ್ಟು ‘ಸ್ವಾತಂತ್ರ್ಯ’ದತ್ತ ಮಹಿಳೆಯರ ಸವಾರಿ

Date:

ಕಾಂಗ್ರೆಸ್‌ ಸರ್ಕಾರ ತನ್ನ ಐದು ಮಹತ್ವಾಕಾಂಕ್ಷೆಯ ಭರವಸೆಗಳಲ್ಲಿ ಒಂದನ್ನು ಜಾರಿಗೊಳಿಸಿದೆ. ಭಾನುವಾರದಿಂದ (ಜೂನ್‌ 11) ಶಕ್ತಿ ಯೋಜನೆ ಅನುಷ್ಠಾನಗೊಂಡಿದ್ದು, ರಾಜ್ಯದ ಮಹಿಳೆಯರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದೊಂದಿಗೆ ಹರ್ಷಿಸುತ್ತಿದ್ದಾರೆ. ಪರ-ವಿರೋಧಗಳ ಚರ್ಚೆಯ ನಡುವೆಯೂ ಈ ಯೋಜನೆಯು ಮಹಿಳೆಯರು ಮತ್ತಷ್ಟು ‘ಸ್ವಾತಂತ್ರ್ಯ’ದತ್ತ ಹೆಜ್ಜೆ ಹಾಕುತ್ತಿದ್ದಾರೆ.

ಮುಖ್ಯಮಂತ್ತಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿ, ಮಹಿಳೆಯರಿಗೆ ಉಚಿತ ಟಿಕೆಟ್‌ ವಿತರಿಸಿದ್ದಾರೆ. ಹಲವೆಡೆ ಕಂಡಕ್ಟರ್‌ಗಳು ಮಹಿಳೆಯರನ್ನು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಈಗ ಮಹಿಳೆಯರು ತಾವು ಕೆಲಸ ಮಾಡುವ ಕಚೇರಿಗಳಿಗೆ, ಆಸ್ಪತ್ರೆಗೆ ಸೇರಿದಂತೆ ರಾಜ್ಯದಲ್ಲಿ ಯಾವ ಭಾಗಕ್ಕಾದರೂ ಪ್ರಯಾಣಿಸಬಹುದು. ಇದು ಕೇವಲ ಮಹಿಳಾ ಸಬಲೀಕರಣದ ದಿನ ಮಾತ್ರವಲ್ಲ, ಹೆಣ್ಣು ಮಕ್ಕಳ ಸ್ವಾಭಿಮಾನದ ಬದುಕಿಗೊಂದು ಮೆಟ್ಟಿಲಾಗಿದೆ. ಅವರು ಆರ್ಥಿಕವಾಗಿ ಸಬಲರಾಗಲು ಪ್ರಮುಖ ಪಾತ್ರವಹಿಸಿದೆ.

ಸಾಮಾನ್ಯವಾಗಿ ಮಹಿಳೆಯರು, ಅದರಲ್ಲೂ ಗೃಹಿಣಿಯರು ಎಲ್ಲಿಯೇ ಹೋಗಬೇಕೆಂದರೂ ಅವರ ಗಂಡನಿಂದ ಹಣ ಕೇಳಬೇಕಾಗುತ್ತದೆ. ಈಗ, ಅವರು ಕೇವಲ ಬಸ್ ಹತ್ತಿ ತಮ್ಮ ಗಮ್ಯಸ್ಥಾನವನ್ನು ತಲುಪಬಹುದು. ಇದು ಮಹಿಳೆಯರು ಗಂಡನ ಹಂಗಿನ ಬದುಕಿನಿಂತ ಕೊಂಚ ಸ್ವತಂತ್ರರನ್ನಾಗಿ ಮಾಡುತ್ತದೆ ಎಂದು ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ ಮಂಡ್ಯದ ಮಹಿಳೆಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮಗಳು ಉಚಿತವಾಗಿ ಕಾಲೇಜಿಗೆ ಪ್ರಯಾಣಿಸಬಹುದು. ಹಲವು ಸಂದರ್ಭಗಳಲ್ಲಿ ಆಕೆಗೆ ಬಸ್‌ ಪಾಸ್‌ ಕೊಡಿಸುವುದೇ ಸವಾಲಾಗಿತ್ತು. ಬಸ್‌ಗೆ ಅಗತ್ಯವಿದ್ದ ಹಣ ಭರಸಲಾಗದೆ, ಪಾಸ್‌ ಪಡೆಯುವುದು ತಡವಾಗುತ್ತಿತ್ತು. ಎಷ್ಟೋ ದಿನಗಳ ಕಾಲ ಪ್ರಯಾಣ ದರ ನೀಡಿ ಪ್ರಯಾಣಿಸುತ್ತಿದ್ದಳು. ಈಗ ಆಕೆ ಬಸ್‌ ಚಾರ್ಜ್, ಪಾಸ್‌ನ ಚಿಂತೆಯಿಲ್ಲದೆ ಪ್ರಯಾಣಿಸಬಹುದು” ಎಂದು ಕೆ.ಆರ್‌ ಪೇಟೆ ತಾಲೂಕಿನ ವಿದ್ಯಾರ್ಥಿನಿಯೊಬ್ಬರ ಒಂಟಿ ಪೋಷಕಿ ಇಂದ್ರಮ್ಮ ಹೇಳಿದ್ದಾರೆ.

“ಗಾರ್ಮೆಂಟ್‌ಗಳಲ್ಲಿ ದುಡಿಯುವವರಿಗೆ ಕಡಿಮೆ ವೇತನ ಸಿಗುತ್ತದೆ. ಆ ಹಣದಲ್ಲಿಯೇ ಪ್ರಯಾಣ, ಮನೆ ಖರ್ಚು, ಮಕ್ಕಳ ವಿದ್ಯಾಭ್ಯಾಸ ಖರ್ಚು ಎಲ್ಲವನ್ನೂ ಭರಿಸಬೇಕಿತ್ತು. ದುಡಿದ ಹಣದಲ್ಲಿ ಉಳಿತಾಯ ಮಾಡುವುದೇ ಕಷ್ಟವಾಗಿತ್ತು. ಈಗ, ಉಚಿತ ಪ್ರಯಾಣದ ಅವಕಾಶ ದೊರೆತಿರುವುದು ನಾನು ಮತ್ತು ನನ್ನ ಮಗಳ ಪ್ರಯಾಣದ ಹಣ ಉಳಿಯುತ್ತದೆ. ಮತ್ತೆನಾನ್ನಾದರೂ ಕೊಳ್ಳಲು ನೆರವಾಗುತ್ತದೆ” ಎಂದು ಮೈಸೂರಿನ ಗಾರ್ಮೆಂಟ್‌ವೊಂದರಲ್ಲಿ ದುಡಿಯುವ ಮಹಿಳೆ ಗಾಯತ್ರಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ʼನಮಸ್ಕಾರ ಬುದ್ಧಿ.. ಏನ್ಲಾ ಹೆಂಗಿದಿ..ʼ ಎನ್ನುವುದು ಗುಲಾಮಗಿರಿ ಮನಸ್ಥಿತಿ ಸಂಕೇತ: ಸಿಎಂ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...