ಮಹಾರಾಷ್ಟ್ರ | ಹಿಂದಿ ಹೇರಿಕೆ ವಿರುದ್ಧ ಜುಲೈ 5ರ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ಎನ್‌ಸಿಪಿ

Date:

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ ವ್ಯಕ್ತಪಡಿಸಿದೆ.

ಎನ್‌ಸಿಪಿ ಅಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದು, 1ನೇ ತರಗತಿಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿದೆ. ಈ ರೀತಿ ಹಿಂದಿ ಹೇರಿಕೆ ಮಾಡುವುದನ್ನು ವಿಪಕ್ಷಗಳು ತೀವ್ರವಾಗಿ ವಿರೋಧಿಸಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರದ ಹಿತಾಸಕ್ತಿ ಅಪಾಯದಲ್ಲಿದೆ, ಹಾಗಾಗಿ ನಾವು ಮಹಾರಾಷ್ಟ್ರದೊಂದಿಗೆ ನಿಲ್ಲುತ್ತೇವೆ. ರಾಷ್ಟ್ರದ ಹಿತಾಸಕ್ತಿ ಅಪಾಯದಲ್ಲಿರುವಾಗ, ನಾವು ರಾಜಕೀಯ ಮಾರ್ಗಗಳನ್ನು ಬದಿಗಿಟ್ಟು ರಾಷ್ಟ್ರದೊಂದಿಗೆ ನಿಲ್ಲುತ್ತೇವೆ. ಅದು ಎನ್‌ಸಿಪಿಯ ಮೂಲ ನೀತಿಯಾಗಿದೆ” ಎಂದು ಎನ್‌ಸಿಪಿ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಹೇಳಿದ್ದಾರೆ.

“ಮಗುವಿನ ಮಾತೃಭಾಷೆಯಲ್ಲಿ ಆರಂಭಿಕ ಶಿಕ್ಷಣ ನಡೆಯಬೇಕೆಂದು ವಾದಿಸುವ ಶಿಕ್ಷಣ ತಜ್ಞರು, ಪೋಷಕರು, ಭಾಷಾಶಾಸ್ತ್ರಜ್ಞರು ಮತ್ತು ಕಾರ್ಯಕರ್ತರು ಈ ಕ್ರಮವನ್ನು ವಿರೋಧಿಸಿದ್ದಾರೆ” ಎಂದೂ ಈ ಸಂದರ್ಭದಲ್ಲೇ ಪಾಟೀಲ್ ತಿಳಿಸಿದರು.

“ಮರಾಠಿ ಜನರು ಹಿಂದಿ ಸೇರಿದಂತೆ ಬೇರೆ ಯಾವುದೇ ಭಾಷೆಗಳನ್ನು ಕಲಿಯುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಪ್ರಾಥಮಿಕ ಹಂತದಲ್ಲಿ ಮಕ್ಕಳ ಮೇಲೆ ಹಿಂದಿಯನ್ನು ಕಡ್ಡಾಯವಾಗಿ ಹೇರಿಕೆ ಮಾಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಎನ್‌ಸಿಪಿ ಹೇಳಿದೆ.

ಇದನ್ನು ಓದಿದ್ದೀರಾ? ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗದು: ಹಿಂದಿ ಹೇರಿಕೆ ವಿರುದ್ಧ ಸುಪ್ರಿಯಾ ಸುಳೆ ಆಕ್ರೋಶ

“ತ್ರಿಭಾಷಾ ನೀತಿಯನ್ನು ಮಾತೃಭಾಷೆಯನ್ನು ಬದಿಗಿಡಲು ಒಂದು ಸಾಧನವಾಗಿ ಬಳಸುತ್ತಿದ್ದರೆ, ಮರಾಠಿ ಮಾತನಾಡುವ ಸಮುದಾಯವು ಅಂತಹ ಕ್ರಮಗಳನ್ನು ಒಗ್ಗಟ್ಟಿನಿಂದ ವಿರೋಧಿಸುತ್ತದೆ” ಎಂದು ಪಾಟೀಲ್ ತಿಳಿಸಿದ್ದಾರೆ.

ಹಿಂದಿ ಹೇರಿಕೆ ವಿರುದ್ಧವಾಗಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈಗಾಗಲೇ ಹಿಂದಿ ಹೇರಿಕೆ ವಿರುದ್ಧ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಜೊತೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...