ಕೇರಳ ಚುನಾವಣೆ | ಪ್ರಚಾರ ಸಮಿತಿಯಲ್ಲಿ ಶಶಿ ತರೂರ್‌ಗೆ ಪ್ರಮುಖ ಸ್ಥಾನ; ಭಿನ್ನಮತ ಬದಿಗೊತ್ತಿದ ಕಾಂಗ್ರೆಸ್ ತಂತ್ರವೇನು?

Date:

ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ತರೂರ್ "ಎಲ್ಲವೂ ಚೆನ್ನಾಗಿದೆ, ನಾವೆಲ್ಲರೂ ಒಂದೇ" ಎಂದು ಹೇಳಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ತರೂರ್‌ಗೆ ಪ್ರಚಾರ ಸಮಿತಿಯಲ್ಲಿ ಪ್ರಮುಖ ಸ್ಥಾನ ದಕ್ಕಿದೆ.

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದವರು ಹಿರಿಯ ರಾಜಕಾರಣಿ ಶಶಿ ತರೂರ್. ಯಾವ ವಿಚಾರದಲ್ಲಿ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಾ ಬಂದಿದೆಯೋ ಅದೇ ವಿಚಾರದಲ್ಲಿ ಮೋದಿಯನ್ನು ಶ್ಲಾಘಿಸಿ ಹೈಕಮಾಂಡ್ ಕೆಂಗಣ್ಣಿಗೂ ಗುರಿಯಾದವರು ತರೂರ್. ಇತ್ತೀಚೆಗೆ ಪಕ್ಷಕ್ಕೂ ತರೂರ್‌ಗೂ ಹಲವು ಭಿನ್ನಾಭಿಪ್ರಾಯಗಳಿರುವುದು ಎದ್ದು ಕಾಣುತ್ತಿದೆ. ಆದರೆ ಕೇರಳ ವಿಧಾನಸಭೆ ಚುನಾವಣೆ ಬರುತ್ತಿದ್ದಂತೆ ಆ ಎಲ್ಲಾ ಭಿನ್ನಾಭಿಪ್ರಾಯವನ್ನು ಕಾಂಗ್ರೆಸ್ ಬದಿಗೊತ್ತಿದ್ದಂತಿದೆ.

ಏನೇ ಭಿನ್ನಾಭಿಪ್ರಾಯವಿದ್ದರೂ ಸದ್ಯ ಚುನಾವಣೆಯಲ್ಲಿ ಗೆಲ್ಲುವುದಷ್ಟೇ ಕೈ ಪಕ್ಷದ ಗುರಿ. ಅದರಿಂದಾಗಿಯೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ಪ್ರಮುಖ ಜವಾಬ್ದಾರಿಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ವಹಿಸಿದೆ. ತರೂರ್ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ಸಹ-ಅಧ್ಯಕ್ಷರನ್ನಾಗಿ ನೇಮಿಸಿಕೊಂಡಿದೆ. ಈ ಮೂಲಕ ಯುವ ಮತದಾರರನ್ನು ಸೆಳೆಯುವ ತಂತ್ರವನ್ನು ರೂಪಿಸಿಕೊಂಡಿದೆ.

ಇದನ್ನು ಓದಿದ್ದೀರಾ? 40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದ ಜನರು ಸರ್ಕಾರವನ್ನು ಆಯ್ಕೆ ಮಾಡುವ ರೀತಿ ವಿಭಿನ್ನ. ಒಮ್ಮೆ ಎಡ ಪ್ರಜಾಸತ್ತಾತ್ಮಕ ರಂಗಕ್ಕೆ (ಎಲ್‌ಡಿಎಫ್) ಅವಕಾಶ ನೀಡಿದರೆ, ಮತ್ತೊಮ್ಮೆ ಸಂಯುಕ್ತ ಪ್ರಜಾಸತ್ತಾತ್ಮಕ ರಂಗಕ್ಕೆ (ಯುಡಿಎಫ್‌) ಗದ್ದುಗೆ ನೀಡುತ್ತಾರೆ. ಆದರೆ ಕಳೆದ ಬಾರಿ ಸತತ ಎರಡನೇ ಬಾರಿಗೆ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ಗೆ ಅಧಿಕಾರ ನೀಡಿದ್ದಾರೆ. ಆದರೆ ಈ ಬಾರಿ ಯುಡಿಎಫ್‌ಗೆ ಆಡಳಿತ ನಡೆಸುವ ಅವಕಾಶ ನೀಡುವ ನಿರೀಕ್ಷೆ ಕಾಂಗ್ರೆಸ್ ನಾಯಕರದ್ದು. ಹಾಗಾಗಿ ಈ ಬಾರಿ ಎಲ್‌ಡಿಎಫ್ ಮತ್ತು ಬಿಜೆಪಿ ಎರಡನ್ನೂ ಎದುರಿಸಿ, ಅಧಿಕಾರಕ್ಕೆ ಬರಲು ಸಜ್ಜಾಗುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ತರೂರ್ “ಎಲ್ಲವೂ ಚೆನ್ನಾಗಿದೆ, ನಾವೆಲ್ಲರೂ ಒಂದೇ” ಎಂದು ಹೇಳಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ತರೂರ್‌ಗೆ ಪ್ರಚಾರ ಸಮಿತಿಯಲ್ಲಿ ಪ್ರಮುಖ ಸ್ಥಾನ ದಕ್ಕಿದೆ. ಈ ಭೇಟಿಯ ಬಳಿಕ ಹಲವು ಬಾರಿ ತರೂರ್ ಕಾಂಗ್ರೆಸ್ ಅನ್ನು ಸಮರ್ಥಿಸಿಕೊಳ್ಳಲು ಆರಂಭಿಸಿದ್ದಾರೆ. ಇತ್ತೀಚೆಗೆ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ.

ತಮಗೆ ಜವಾಬ್ದಾರಿ ಸಿಕ್ಕ ಬಳಿಕ ತರೂರ್ ಮತ್ತೆ ಕಾಂಗ್ರೆಸ್ ಪರವಾಗಿಯೇ ಮಾತನಾಡಲು ಆರಂಭಿಸಿರುವಂತಿದೆ. “ನಾನು ಕಾಂಗ್ರೆಸ್‌ನಲ್ಲಿದ್ದೇನೆ ಮತ್ತು ನಾನು ಎಲ್ಲಿಗೂ ಹೋಗುವುದಿಲ್ಲ. ನಾನು ಕೇರಳ ಪ್ರಚಾರದ ಭಾಗವಾಗಿರುತ್ತೇನೆ ಮತ್ತು ಯುಡಿಎಫ್‌ನ ಗೆಲುವಿಗಾಗಿ ಕೆಲಸ ಮಾಡುತ್ತೇನೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನಾನು ಮುಂಚೂಣಿಯಲ್ಲಿರುತ್ತೇನೆ. ಕಾಂಗ್ರೆಸ್ ಅನ್ನು ಮುನ್ನಡೆಸುತ್ತೇನೆ” ಎಂದು ತರೂರ್ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬದಲಾದ‌ ಟ್ರಂಪ್‌ ವರಸೆಯನ್ನು ಭಾರತ ಬೇಗ ನಂಬಬಾರದು: ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಲಹೆ

ನರೇಂದ್ರ ಮೋದಿ ಅವರನ್ನು ಪದೇ ಪದೇ ಹೊಗಳುವುದು ಮಾತ್ರವಲ್ಲದೆ ತರೂರ್‌ ಅವರ ಕಾಂಗ್ರೆಸ್‌ಗಿಂತ ಭಿನ್ನವಾದ ನಿಲುವು ಸಾಕಷ್ಟು ಚರ್ಚೆಗೆ ಒಳಗಾಗುತ್ತಲೇ ಇದೆ. ಅಷ್ಟು ಮಾತ್ರವಲ್ಲದೆ ತರೂರ್ ಕೇರಳದಲ್ಲಿ ತಮ್ಮನ್ನು ಬದಿಗೊತ್ತಲು ಕೆಲವು ನಾಯಕರು ಮಾಡಿದ ಪ್ರಯತ್ನಗಳ ಬಗ್ಗೆ ಮತ್ತು ಇತ್ತೀಚೆಗೆ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ನಡೆಸಿಕೊಂಡ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಚುನಾವಣೆ ಬರುತ್ತಿದ್ದಂತೆ ಇದೀಗ ಕಾಂಗ್ರೆಸ್ ಈ ಎಲ್ಲ ಭಿನ್ನಾಭಿಪ್ರಾಯ ಬದಿಗೊತ್ತಿ, ತರೂರ್‌ ಮೇಲೆ ಹೊಣೆ ಹೊರಿಸಿದೆ.

ಪ್ರಧಾನಿಯನ್ನು ಹೊಗಳುವ ವ್ಯಕ್ತಿಗೆ ಸ್ಥಾನ ನೀಡಿದ ಕಾಂಗ್ರೆಸ್ ನಿರ್ಧಾರ ಯಾವ ತಂತ್ರ ಎಂಬುದು ಕೆಲವು ನೆಟ್ಟಿಗರ ವಾದ. ಆದರೆ ಪ್ರಚಾರಕ ಅಷ್ಟೇ ಮುಖ್ಯ. ನಾಲ್ಕು ಬಾರಿ ಸಂಸದರಾಗಿರುವ ತರೂರ್ ಕಾಂಗ್ರೆಸ್‌ಗೆ ಕೇರಳದಲ್ಲಿ ಪ್ರಮುಖ ಪ್ರಚಾರಕ. ತಮ್ಮ ಪ್ರಚಾರಕರನ್ನು ಕೈಬಿಟ್ಟರೆ ಕಾಂಗ್ರೆಸ್‌ಗೆ ಮತ್ತೊಂದು ಬಾರಿ ಅಧಿಕಾರ ಕೈ ತಪ್ಪಬಹುದು ಎಂಬ ಆತಂಕವಿರುವುದು ಸಹಜ. ಅದರಲ್ಲೂ ಯುವ ಮತ್ತು ನಗರದ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಶಶಿ ತರೂರ್ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಬೇಕಾಗಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...