ದೊಡ್ಡ ಕಾರ್ಯಕ್ರಮಗಳಲ್ಲಿ ಕೆಲವು ದೋಷಗಳು ಸಾಮಾನ್ಯ: AI ಶೃಂಗಸಭೆಯನ್ನು ಶ್ಲಾಘಿಸಿದ ಶಶಿ ತರೂರ್!

Date:

ಚೀನಾದ ರೋಬೋಟ್‌ಗಳನ್ನು ಭಾರತದ ಉತ್ಪನ್ನಗಳಂತೆ ಪ್ರದರ್ಶಿಸಲಾಗಿರುವ ವಿಚಾರದಲ್ಲಿ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ (India AI Impact Summit 2026) ಅನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸುತ್ತಿದೆ. ಈ ನಡುವೆ ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ AI ಶೃಂಗಸಭೆಯನ್ನು ಶ್ಲಾಘಿಸಿದ್ದಾರೆ. “ಶೃಂಗಸಭೆಯು ಮೊದಲ ಎರಡು ದಿನಗಳು ತುಂಬಾ ಚೆನ್ನಾಗಿ ನಡೆದವು. ಅಂತಾರಾಷ್ಟ್ರೀಯ ನಾಯಕರ ಹಾಜರಾತಿ ಪ್ರಭಾವಶಾಲಿ” ಎಂದಿದ್ದಾರೆ.

AI ಶೃಂಗಸಭೆ ಎಕ್ಸ್‌ಪೋದಲ್ಲಿ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಸ್ಟಾಲ್‌ನಲ್ಲಿ ಚೀನಾ ನಿರ್ಮಿತ ರೋಬೋಟ್ ಅನ್ನು ಭಾರತದ್ದು ಎಂಬಂತೆ ಪ್ರದರ್ಶಿಸಲಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಹಲವು ವಿಪಕ್ಷ ನಾಯಕರುಗಳು ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಆದರೆ ಶಶಿ ತರೂರ್, “ಯಾವುದೇ ದೊಡ್ಡ ಕಾರ್ಯಕ್ರಮದಲ್ಲಿ ಕೆಲವು ದೋಷಗಳು ಸಂಭವಿಸುವುದು ಸಾಮಾನ್ಯ” ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಪ್ರಚಾರ ಸಮಿತಿಯಲ್ಲಿ ಶಶಿ ತರೂರ್‌ಗೆ ಪ್ರಮುಖ ಸ್ಥಾನ; ಭಿನ್ನಮತ ಬದಿಗೊತ್ತಿದ ಕಾಂಗ್ರೆಸ್ ತಂತ್ರವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಕಾರ್ಯಕ್ರಮವನ್ನು “ಅಸ್ತವ್ಯಸ್ತಗೊಂಡ ಪಿಆರ್ ಪ್ರದರ್ಶನ” ಎಂದು ಕರೆದಿದ್ದಾರೆ. ಕೇವಲ ಪ್ರಚಾರಕ್ಕಾಗಿ ಸರ್ಕಾರವು ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ನೆಪದಲ್ಲಿ ಭಾರತೀಯರ ದತ್ತಾಂಶವನ್ನು (Data) ಮಾರಾಟಕ್ಕೆ ಇಡಲಾಗಿದೆ ಎಂದು ದೂರಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರುಗಳೂ ಈ ಕಾರ್ಯಕ್ರಮವನ್ನು ಟೀಕಿಸಿದ್ದಾರೆ. ಚೀನಾದ ವಸ್ತುಗಳನ್ನು ಭಾರತದ್ದು ಎಂಬಂತೆ ಪ್ರದರ್ಶಿಸಿದ್ದು ದೇಶಕ್ಕೆ ಮುಜುಗರ ಉಂಟು ಮಾಡಿದೆ ಎಂದು ಹೇಳಿದ್ದಾರೆ. “ಪ್ರದರ್ಶಕರಿಗೆ ಆಹಾರ ಮತ್ತು ನೀರಿನ ಕೊರತೆಯಾಗಿತ್ತು. ಜಾಗತಿಕ ಮಟ್ಟದ ಕಾರ್ಯಕ್ರಮದಲ್ಲಿ ಯುಪಿಐ ಪಾವತಿ ಬದಲು ನಗದು ಕೇಳಲಾಗುತ್ತಿತ್ತು. ಇಂಟರ್ನೆಟ್ ಸಂಪರ್ಕದ ಸಮಸ್ಯೆಗಳಿದ್ದವು” ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಶಶಿ ತರೂರ್ ಮಾತ್ರ ವಿಭಿನ್ನವಾದ ಹೇಳಿಕೆಯನ್ನು ನೀಡಿದ್ದಾರೆ. ನಾರಾಯಣ ಗುರುಗಳ ಕುರಿತಾದ ತಮ್ಮ ಹೊಸ ಪುಸ್ತಕ ಬಿಡುಗಡೆ ಕಾರ್ಯಕ್ರಮದ ನಂತರ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ತರೂರ್, “ನನಗೆ ಶೃಂಗಸಭೆಗೆ ಹೋಗಲು ಅವಕಾಶ ಸಿಗದಿದ್ದರೂ, ನಾಳೆ ಅಲ್ಲಿ ಹೋಗಲಿದ್ದೇನೆ. ನನಗೆ ತಿಳಿದಂತೆ ಮೊದಲ ಎರಡು ದಿನಗಳು ತುಂಬಾ ಚೆನ್ನಾಗಿ ಕಾರ್ಯಕ್ರಮ ನಡೆದಿವೆ. ಕೆಲವು ದೋಷಗಳು, ಕೆಲವು ಸಾಂಸ್ಥಿಕ ವಿಷಯಗಳು ನಡೆದಿವೆ, ಇವುಗಳು ದೊಡ್ಡ ಕಾರ್ಯಕ್ರಮದಲ್ಲಿ ನಡೆಯುತ್ತವೆ” ಎಂದಿದ್ದಾರೆ.

“ಆದರೆ ಸಾಮಾನ್ಯವಾಗಿ ಪ್ರಭಾವಶಾಲಿಯಾಗಿ ಕಂಡುಬಂದಿರುವುದು ಹಾಜರಾತಿ. ಹಲವು ದೇಶಗಳ ಅಧ್ಯಕ್ಷರು, ಪ್ರಧಾನ ಮಂತ್ರಿಗಳು ಮತ್ತು ವಿಶ್ವ ನಾಯಕರು ಇಲ್ಲಿದ್ದಾರೆ. AI ಅಭಿವೃದ್ಧಿಯಲ್ಲಿ ಹೊಸದಾಗಿ ಜಗತ್ತನ್ನು ಕಾಣುವ ಸಂದೇಶದೊಂದಿಗೆ ಜಾಗತಿಕ ನಾಯಕರು ಇಲ್ಲಿಗೆ ಆಗಮಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬದಲಾದ‌ ಟ್ರಂಪ್‌ ವರಸೆಯನ್ನು ಭಾರತ ಬೇಗ ನಂಬಬಾರದು: ಕಾಂಗ್ರೆಸ್ ಸಂಸದ ಶಶಿ ತರೂರ್‌ ಸಲಹೆ

ಇನ್ನು ಭಾರತದಿಂದ ರಫೇಲ್ ಜೆಟ್‌ಗಳ ಖರೀದಿ ಮತ್ತು ಒಪ್ಪಂದದ ಮೇಕ್ ಇನ್ ಇಂಡಿಯಾ ಘಟಕದ ಬಗ್ಗೆ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಹೇಳಿಕೆಗಳ ಬಗ್ಗೆ ಕೇಳಿದಾಗ, “ಫ್ರೆಂಚ್ ರಫೇಲ್‌ನ ಕೆಲವು ಭಾಗಗಳನ್ನು ಭಾರತದಲ್ಲಿ ತಯಾರಿಸಲಾಗುತ್ತಿದೆ. ಅದು ಒಪ್ಪಂದದ ಬಹಳ ಮುಖ್ಯವಾದ ಅಂಶವಾಗಿದೆ. ಇದು ರಕ್ಷಣೆಯನ್ನು ಬಲಪಡಿಸುವ ಭಾಗ. ಜೊತೆಗೆ ರಕ್ಷಣಾ ವಲಯದಲ್ಲಿ ನಮ್ಮ ಸ್ವಾವಲಂಬನೆಯನ್ನು ಹೆಚ್ಚಿಸುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿಗಿಂತ ಭಿನ್ನವಾದ ನಿಲುವನ್ನು ಹೊಂದಿದ್ದವರು ಹಿರಿಯ ರಾಜಕಾರಣಿ ಶಶಿ ತರೂರ್. ಇತ್ತೀಚೆಗೆ ಪಕ್ಷಕ್ಕೂ ತರೂರ್‌ಗೂ ಹಲವು ಭಿನ್ನಾಭಿಪ್ರಾಯಗಳಿರುವುದು ಎದ್ದು ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ತರೂರ್ ಬಹಿರಂಗವಾಗಿ ಹೊಗಳಿರುವುದೂ ಇದಕ್ಕೆ ಕಾರಣ. ಆದರೆ ಕೇರಳ ವಿಧಾನಸಭೆ ಚುನಾವಣೆ ಬರುತ್ತಿದ್ದಂತೆ ಆ ಎಲ್ಲಾ ಭಿನ್ನಾಭಿಪ್ರಾಯವನ್ನು ಕಾಂಗ್ರೆಸ್ ಬದಿಗೊತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ಪ್ರಮುಖ ಜವಾಬ್ದಾರಿಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್‌ಗೆ ವಹಿಸಿದೆ. ತರೂರ್ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ಸಹ-ಅಧ್ಯಕ್ಷರನ್ನಾಗಿ ನೇಮಿಸಿಕೊಂಡಿದೆ. ಇವೆಲ್ಲವುದರ ನಡುವೆಯೇ ಶಶಿತರೂರ್ ಮತ್ತೆ ಕೇಂದ್ರದ ತಪ್ಪನ್ನು ಬಿಜೆಪಿ ನಾಯಕರಂತೆ ಸಮರ್ಥಿಸಿಕೊಂಡಿರುವುದು ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸುವಂತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...