ಭಾರತೀಯರನ್ನು ಕೊಂದರೆ ಬೆಲೆ ತೆರಬೇಕಾಗುತ್ತದೆ: ಪಾಕಿಸ್ತಾನಕ್ಕೆ ಶಶಿ ತರೂರ್ ಎಚ್ಚರಿಕೆ

Date:

ಪಾಕಿಸ್ತಾನದಲ್ಲಿ ಕುಳಿತು ಗಡಿಯುದ್ದಕ್ಕೂ ಭಾರತೀಯ ನಾಗರಿಕರನ್ನು ನಿರ್ಭಯದಿಂದ ಕೊಲ್ಲಬಹುದು ಎಂಬ ಕಲ್ಪನೆ ಬರಲು ನಾವು ಬಿಡಲಾರೆವು. ಏಕೆಂದರೆ ಭಾರತೀಯರನ್ನು ಕೊಂದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಭಾರತದ ದೃಢಸಂಕಲ್ಪವವನ್ನು ತಿಳಿಸಲು ಮತ್ತು ಭಯೋತ್ಪಾದನೆಯೊಂದಿಗೆ ಪಾಕಿಸ್ತಾನದ ಸಂಪರ್ಕವನ್ನು ವಿಶ್ವಕ್ಕೆ ಒತ್ತಿ ಹೇಳುವ ನಿರ್ಧಾರವನ್ನು ಭಾರತ ಕೈಗೊಂಡಿದೆ. ಈ ನಿಟ್ಟಿನಲ್ಲಿ ರಚಿಸಲಾದ ಭಾರತೀಯ ಸಂಸದರ ನಿಯೋಗವನ್ನು ತರೂರ್ ಮುನ್ನಡೆಸುತ್ತಿದ್ದಾರೆ. ಈ ನಿಯೋಗ ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್ ಮತ್ತು ಯುಎಸ್‌ಗೆ ಭೇಟಿ ನೀಡಲಿದೆ.

ಇದನ್ನು ಓದಿದ್ದೀರಾ? ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ; ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ರಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಿಧ ದೇಶಗಳಿಗೆ ಭೇಟಿ ನೀಡುವ ಈ ಸರ್ವಪಕ್ಷ ನಿಯೋಗವು ಪಾಕಿಸ್ತಾನದೊಂದಿಗಿನ ಇತ್ತೀಚೆಗೆ ನಡೆದ ಸಂಘರ್ಷವು ಆಪರೇಷನ್ ಸಿಂಧೂರದಿಂದ ಆರಂಭವಾಗಿರುವುದಲ್ಲ. ಬದಲಾಗಿ 26 ಪ್ರವಾಸಿಗರನ್ನು ಕೊಂದ ಭಯೋತ್ಪಾದಕ ದಾಳಿಯಿಂದಾಗಿ ಪ್ರಾರಂಭವಾಗಿರುವುದು ಎಂದು ಈ ನಿಯೋಗಗಳು ಒತ್ತಿ ಹೇಳುತ್ತವೆ.

ಭಾರತೀಯ-ಅಮೆರಿಕನ್ ಸಮುದಾಯದ ಆಯ್ದ ಪ್ರಮುಖ ಸದಸ್ಯರು, ಪ್ರಮುಖ ಮಾಧ್ಯಮ ಮತ್ತು ಚಿಂತಕರೊಂದಿಗೆ ಶಶಿ ತರೂರ್ ಶನಿವಾರ ಸಂವಾದವನ್ನು ನಡೆಸಿದ್ದಾರೆ. “ನಾವು ಏನನ್ನೂ ನಾವಾಗಿಯೇ ಪ್ರಾರಂಭಿಸಲು ಬಯಸಿರಲಿಲ್ಲ. ಇದು ಪಾಕಿಸ್ತಾನಕ್ಕೆ ಭಾರತದ ಸ್ಪಷ್ಟ ಸಂದೇಶ” ಎಂದು ಹೇಳಿದ್ದಾರೆ.

“ನಾವು ಭಯೋತ್ಪಾದಕರಿಗೆ ಸಂದೇಶವನ್ನು ಕಳುಹಿಸುತ್ತಿದ್ದೆವು. ನೀವು ಪ್ರಾರಂಭಿಸಿದ್ದೀರಿ, ನಾವು ಉತ್ತರಿಸಿದ್ದೇವೆ. ನೀವು ನಿಲ್ಲಿಸಿದರೆ, ನಾವು ನಿಲ್ಲಿಸುತ್ತೇವೆ. ಈಗ ನೀವು ನಿಲ್ಲಿಸಿದ್ದೀರಿ. 88 ಗಂಟೆಗಳ ಕಾಲ ಯುದ್ಧ ನಡೆದಿದೆ. ನಾವು ಈ ಬಗ್ಗೆ ಹತಾಶೆ ಹೊಂದಿದ್ದೇವೆ. ಯಾಕೆಂದರೆ ಯುದ್ಧ ನಡೆಯಬಾರದು. ಹಲವು ಸಾವುನೋವು ಸಂಭವಿಸಿದೆ. ಆದರೆ ನಾವು ಇವೆಲ್ಲವನ್ನೂ ನಾವು ದೃಢ ಮತ್ತು ದೃಢನಿಶ್ಚಯದಿಂದ ಹಿಂದಿರುಗಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

ಇದನ್ನು ಒದಿದ್ದೀರಾ? ಆಪರೇಷನ್ ಸಿಂಧೂರ | ಕಾಂಗ್ರೆಸ್‌ – ತರೂರ್ ನಡುವೆ ವಾಗ್ಯುದ್ಧ; ಬೇಳೆ ಬೇಯಿಸಿಕೊಳ್ಳುತ್ತಿದೆ ಬಿಜೆಪಿ

“ಪಾಕಿಸ್ತಾನದಲ್ಲಿ ಕುಳಿತಿರುವ ಯಾರೂ ಗಡಿಯನ್ನು ದಾಟಿ ಬಂದು ನಮ್ಮ ನಾಗರಿಕರನ್ನು ಸುಲಭವಾಗಿ ಕೊಲ್ಲಬಹುದು ಎಂದು ನಂಬಲು ನಾವು ಬಿಡಲಾರೆವು. ಭಾರತೀಯರನ್ನು ಕೊಂದರೆ ಬೆಲೆ ತೆರಬೇಕಾಗುತ್ತದೆ. ನಾವು ಕೆಲವು ವರ್ಷಗಳಿಂದ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮುಕ್ತ ಮಾರುಕಟ್ಟೆ ಪ್ರಜಾಪ್ರಭುತ್ವವಾಗುವುದರ ಮೇಲೆ ಗಮನ ಇರಿಸಿದ್ದೇವೆ. ನಮ್ಮ ಆರ್ಥಿಕತೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಲು ಪ್ರಯತ್ನಿಸುತ್ತಿದ್ದೇವೆ. ತಂತ್ರಜ್ಞಾನ ಮತ್ತು ತಾಂತ್ರಿಕ ಬೆಳವಣಿಗೆಯ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ” ಎಂದರು.

ತರೂರ್ ನೇತೃತ್ವದ ನಿಯೋಗದಲ್ಲಿ ಸರ್ಫರಾಜ್ ಅಹ್ಮದ್(ಜೆಎಂಎಂ), ಗಂಟಿ ಹರೀಶ್ ಮಧುರ್ ಬಾಲಯೋಗಿ(ಟಿಡಿಪಿ), ಶಶಾಂಕ್ ಮಣಿ ತ್ರಿಪಾಠಿ(ಬಿಜೆಪಿ), ಭುವನೇಶ್ವರ ಕಲಿತಾ(ಬಿಜೆಪಿ), ಮಿಲಿಂದ್ ದಿಯೋರಾ(ಶಿವಸೇನೆ), ತೇಜಸ್ವಿ ಸೂರ್ಯ(ಬಿಜೆಪಿ), ಮತ್ತು ಅಮೆರಿಕದ ಮಾಜಿ ರಾಯಭಾರಿ ತರಂಜಿತ್ ಸಂಧು ಇದ್ದಾರೆ. ನಿಯೋಗ ಶನಿವಾರ ನ್ಯೂಯಾರ್ಕ್ ತಲುಪಿದ್ದು ಗಯಾನಾಗೆ ಪ್ರಯಾಣಿಸಲಿದೆ. ಜೂನ್ 3ರಂದು ಅಮೆರಿಕಕ್ಕೆ ಹಿಂತಿರುಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...