ಸಿಎಂ, ನನ್ನ ವಿರುದ್ಧ ಕೇರಳದ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ನಡೀತಿದೆ: ಡಿ ಕೆ ಶಿವಕುಮಾರ್ ಆರೋಪ

Date:

“ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇರಳದ ದೇವಸ್ಥಾನವೊಂದರಲ್ಲಿ ಶತ್ರು ಭೈರವಿ(ಶತ್ರು ಸಂಹಾರ) ಯಾಗ ನಡೆಯುತ್ತಿದೆ. ಯಾರು ಮಾಡುತ್ತಿದ್ದಾರೆ, ಯಾರು ಮಾಡಿಸುತ್ತಿದ್ದಾರೆ ಎಂಬ ಬಗ್ಗೆಯೂ ನನಗೆ ಮಾಹಿತಿ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಅವರು, “ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಆಸುಪಾಸಿನಲ್ಲಿ ನನ್ನನ್ನು ಸೇರಿಸಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ. ಅಂದರೆ ಇದು ಶತ್ರು ಸಂಹಾರ ಯಾಗ. ರಾಜಕೀಯ ಮುಖಂಡರೊಬ್ಬರು ಮಾಡುತ್ತಿದ್ದಾರೆ. ಅದರಲ್ಲಿ ಪಾಲ್ಗೊಂಡವರಿಂದ ನಮಗೆ ಮಾಹಿತಿ ಬಂದಿದೆ. ಅವರ ಯಾಗಕ್ಕಿಂತ ನಮ್ಮ ನಂಬಿಕೆ, ದೇವರ ಕೃಪೆ ಹಾಗೂ ಜನರ ಆಶೀರ್ವಾದ ನಮ್ಮನ್ನು ಕಾಪಾಡಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮೈಸೂರು | ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಕುವೆಂಪುನಗರ ಎಸ್‌ಐ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಪ್ರಬಲ ರಾಜಕೀಯ ನಾಯಕರೊಬ್ಬರು ಅಘೋರಿಗಳ ಮೂಲಕ ಕೇರಳದ ದೇವಸ್ಥಾನದಲ್ಲಿ 21 ಮೇಕೆ, ಕಪ್ಪುಬಣ್ಣದ 21 ಕುರಿ, 5 ಹಂದಿ, 3 ಎಮ್ಮೆಗಳನ್ನು ಬಲಿ ನೀಡುವ ಮೂಲಕ ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಸಂಹಾರ ಯಾಗ ಮಾಡಿದ್ದಾರೆ. ಅವರು ನಮ್ಮ ಸರ್ಕಾರ ಪತನವಾಗಬೇಕೆಂದು ಬಯಸುತ್ತಿದ್ದಾರೆ. ಇದರಲ್ಲಿ ಯಾರು ಪಾಲ್ಗೊಂಡಿದ್ದರೋ ಅವರು ನಮಗೆ ಮಾಹಿತಿ ನೀಡಿದ್ದಾರೆ” ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

“ಅವರ ಪ್ರಯತ್ನ ಅವರು ಮಾಡಲಿ, ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಅವರದು. ಹೀಗಾಗಿ ಇಂತಹ ಪ್ರಯತ್ನ ಮಾಡುತ್ತಾರೆ. ಅವರು ನಮ್ಮ ಮೇಲೆ ಏನೇ ಪ್ರಯೋಗ ಮಾಡಿದರೂ ನಾನು ನಂಬಿರುವ ಶಕ್ತಿ ನಮ್ಮನ್ನು ಕಾಪಾಡಲಿದೆ. ನಾನು ಪ್ರತಿನಿತ್ಯ ಮನೆಯಿಂದ ಹೊರಡುವ ಮುನ್ನ ದೇವರಿಗೆ ಒಂದು ನಿಮಿಷ ಕೈಮುಗಿದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

ಬಿಜೆಪಿಯವರೋ ಜೆಡಿಎಸ್‌ನವರೋ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಯಾರು ಮಾಡುತ್ತಿದ್ದಾರೆ, ಯಾರು ಮಾಡಿಸುತ್ತಿದ್ದಾರೆ ಎಂಬ ಬಗ್ಗೆಯೂ ನನಗೆ ಮಾಹಿತಿ ಇದೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ” ಎಂದಷ್ಟೇ ಹೇಳಿದರು.

“ನಿಂಬೆ ಹಣ್ಣು ನಿಪುಣರು” ಇದನ್ನು ಮಾಡಿಸುತ್ತಿದ್ದಾರೆಯೇ ಎಂದು ಮಾಧ್ಯಮದವರು ಕೇಳಿದಾಗ, “ನನ್ನ ಬಾಯಿಂದ ಹೇಳಿಸುವುದರ ಬದಲು, ನೀವೇ ಈ ಬಗ್ಗೆ ತನಿಖಾ ವರದಿ ಮಾಡಿ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ನಿಮ್ಮನ್ನೇ ಏಕೆ ಗುರಿ ಮಾಡುತ್ತಾರೆ, ನಿಮ್ಮ ರಕ್ಷಣೆಗಾಗಿ ನೀವೂ ವಾಪಾಸ್ ಏನಾದರೂ ಮಾಡುತ್ತಿರಾ ಎಂದು ಕೇಳಿದಾಗ, “ಯಾವಾಗಲೂ ರಾಜಕೀಯವಾಗಿ ಚಟುವಟಿಕೆಯಿಂದ ಇರುವವರು ವಿರೋಧಿಗಳ ಕೆಂಗಣ್ಣಿಗೆ ಗುರಿ ಆಗುತ್ತಾರೆ. ಅವರು ಮಾಡೋದು ಮಾಡಲಿ, ನನ್ನ ಶಕ್ತಿ ನನ್ನ ರಕ್ಷಣೆಗೆ ಇದೆ. ನಾನು ಅಂತಹ ಯಾವುದೇ ಚಟುವಟಿಕೆ ಮಾಡುವುದಿಲ್ಲ. ದೇವರನ್ನು ಮಾತ್ರ ನಂಬಿದ್ದೇನೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...