ಶಿಗ್ಗಾಂವಿ | ಸಂಸದ ಬೊಮ್ಮಾಯಿ ಮುಂದೆ ರಾಜಕೀಯ ನಿವೃತ್ತಿ ಸವಾಲಿಟ್ಟ ಸಚಿವ ಜಮೀರ್ ಅಹಮದ್

Date:

ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಏನು ಕೊಡುಗೆ ಕೊಟ್ಟಿದ್ದಾರೆ? ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಮನೆ ಕೊಡುವ ಕೆಲಸ ಮಾಡಿಲ್ಲ. ಅವರ ಅವಧಿಯಲ್ಲಿ ಬಡವರಿಗೆ ಮನೆ ಕೊಟ್ಟಿದ್ದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಸವಾಲು ಹಾಕಿದರು.

ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಶಿಗ್ಗಾಂವಿ, ಜಕ್ಕನಗಟ್ಟಿ, ಕಾರಡಗಿ, ಸವನಣೂರು, ಬಂಕಾಪುರ ಭಾಗದಲ್ಲಿ ಪ್ರಚಾರ ಸಭೆ, ರೋಡ್ ಶೋ ನಡೆಸಿ ಮಾತನಾಡಿದ ಅವರು, “ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಪ್ರತಿನಿಧಿಸಿದ ಈ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗಿಲ್ಲ. ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟು ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ತಂದೆಯ ಕೈಲಿ ಆಗದ ಅಭಿವೃದ್ಧಿ ಮಗನ ಕೈಲಿ ಸಾಧ್ಯವಾ” ಎಂದು ಪ್ರಶ್ನೆ ಮಾಡಿದರು.

“ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ. ಹಿಂದೂ ಮುಸ್ಲಿಂ ಹೆಸರಿನಲ್ಲಿ ಮತ ಪಡೆಯುವುದು. ಜನರನ್ನು ಪ್ರಚೋದಿಸಿ, ತಪ್ಪು ದಾರಿಗೆ ಎಳೆದು ರಾಜಕೀಯ ಲಾಭ ಪಡೆದುಕೊಳ್ಳುವುದು ಅವರ ಹವ್ಯಾಸ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ನಂತರ ಕಾಂಗ್ರೆಸ್ ಪಕ್ಷ ಕೊಟ್ಟಿದ್ದ ಐದು ಗ್ಯಾರಂಟಿ ಯೋಜನೆ ಈಡೇರಿದೆ. ಆರನೇ ಗ್ಯಾರಂಟಿ ಯಾಗಿ 2.30 ಲಕ್ಷ ಮನೆ ಬಡವರಿಗೆ ಹಂಚುವ ಕ್ರಾಂತಿಕಾರಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಶಿಗ್ಗಾಂವಿನಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಯಾಸೀರ್ ಪಠಾಣ್ ಪರವಾಗಿ ಅಜ್ಜಂ ಪೀರ್ ಖಾದ್ರಿ ಜತೆಗೂಡಿ ಕೆಲಸ ಮಾಡಲಿದ್ದಾರೆ. ಇಬ್ಬರೂ ಪಕ್ಷಕ್ಕಾಗಿ ಒಂದಾಗಿ ಸಂದೇಶ ರವಾನಿಸಿದ್ದಾರೆ” ಎಂದರು.

ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಶ್ರೀನಿವಾಸ್ ಮಾನೆ, ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ, ಇಸ್ಮಾಯಿಲ್ ತಮಟಗಾರ, ಅಲ್ತಾಫ್ ಕಿತ್ತೂರು, ಸಯೀದ್ ಅಹಮದ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...