ಶಿವಮೊಗ್ಗ ಶಾಂತವಾಗಿರಲಿ | ಉರಿ–ನಂಜೇಗೌಡರು ನಮ್ಮೂರಿಗೆ ಬರುವುದು ಬೇಡ: ಆಯನೂರು ಮಂಜುನಾಥ್

Date:

  • ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮುರಿದ ಮನಸುಗಳ ಬೆಸುಗೆಯಾಗಲಿ
  • ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನನಗೆ ಟಿಕೇಟ್ ನೀಡಲಿದೆ ಎಂಬ ವಿಶ್ವಾಸ ಇದೆ

ರಾಜ್ಯ ರಾಜಕಾರಣದಲ್ಲಿ ಸದ್ಯ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಕುರಿತ ಚರ್ಚೆ ಜೋರಾಗಿದೆ. ಈ ನಡುವೆ ಉರಿ ಮತ್ತು ನಂಜೇಗೌಡರ ಕುರಿತು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸಭ್ಯವಾಗಿ ಪ್ರತಿಕ್ರಿಯೆ ನೀಡಿದ್ದು, ನಮ್ಮೂರಲ್ಲಿ ಉರಿ ಗೌಡನೂ ಇಲ್ಲ ನಂಜೇಗೌಡನೂ ಇಲ್ಲ. ನಮ್ಮೂರಿನಲ್ಲಿ ಅವರು ಇರುವುದೂ ಬೇಡ, ಶಿವಮೊಗ್ಗ ಶಾಂತವಾಗಿರಲಿ. ಉರಿ, ನಂಜು ನಮ್ಮೂರಿಗೆ ಬಾರದೇ ಇರಲಿ ಎಂದಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಆಯನೂರು ಮಂಜುನಾಥ್ ಅವರು, “ಈಶ್ವರಪ್ಪ ಮತ್ತು ಬಿಜೆಪಿ ನಡುವೆ ನಾನು ಉರಿಗೌಡನೂ ಅಲ್ಲ ನಂಜೇಗೌಡನೂ ಅಲ್ಲ. ನಾನು ಆಯನೂರು ಮಂಜುನಾಥ್. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಆತ ನಂಜೇಗೌಡ, ಯಾರು ನನ್ನ ಮಾತು ಕೇಳಿ ಉರಿದು ಬೀಳುತ್ತಾರೋ ಅವರು ಉರಿಗೌಡ” ಎಂದು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿದ ಬಾಯಿಗಳು ಎಂದರೆ ಒಬ್ಬರಿಗೆ ಹೇಳಿದ್ದಲ್ಲ

ಫ್ಲೆಕ್ಸ್ ರಾಜಕೀಯ ವಿಚಾರವಾಗಿ ಮಾತನಾಡಿ, “ಹರಿದ ಬಾಯಿಗಳು ಎಂದರೆ ಓರ್ವರಿಗೆ ಹೇಳಿದ್ದಲ್ಲ. ಬಾಯಿಗೆ ಬಂದಂತೆ ಮಾತನಾಡುವ ಎಲ್ಲರಿಗೂ ಹೇಳಿದ್ದು. ಈಶ್ವರಪ್ಪ ಅವರೂ ಬಾಯಿಗೆ ಬಂದಂತೆ ಮಾತನಾಡಬಾರದು. ಅವರೊಬ್ಬರು ಪ್ರಬುದ್ಧ ನಾಯಕರು. ಅವರು ಸಮಾಜಕ್ಕೆ ಧಕ್ಕೆ ಬರುವಂತ ಹೇಳಿಕೆ ನೀಡಬಾರದು. ನಾನು ಫ್ಲೆಕ್ಸ್ ಹಾಕಿದ್ದು, ಅವರಿಗೆ ಎಂದು ಅನಿಸಿದರೆ ಅವರು ತಮ್ಮ ತಪ್ಪು ತಿದ್ದಿಕೊಳ್ಳಬೇಕು” ಎಂದು ಆಯನೂರು ಹೇಳಿದರು.

ನಿಷ್ಠುರವಾದ ಮಾತನಾಡಿದೆ ಎಂದಾಕ್ಷಣ ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ಹೇಳುವುದು ತಪ್ಪು. ನಿಷ್ಠುರವಾಗಿ ಮಾತನಾಡಿದ ತಕ್ಷಣ ಬೇರೆ ಅರ್ಥ ಕಲ್ಪಿಸಿದರೆ ಅದಕ್ಕೆ ನಾನು ಜವಾಬ್ದಾರನಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಬಿಜೆಪಿ ನನಗೆ ಟಿಕೆಟ್ ನೀಡಲಿದೆ ಎಂದು ಭಾವಿಸಿದ್ದೇನೆ’

“ಕೆ ಎಸ್ ಈಶ್ವರಪ್ಪ ಅವರಿಗೆ 35 ವರ್ಷಗಳಿಂದ ಒಂದೇ ಕ್ಷೇತ್ರದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ. ಈಶ್ವರಪ್ಪ ಈಗ ಅವರ ಮಗನಿಗೆ ಟಿಕೆಟ್ ಕೇಳುತ್ತಿದ್ದಾರೆ. ಆದರೆ ಆತನಿನ್ನು ಚಿಕ್ಕವನು, ಮಧ್ಯದಲ್ಲಿ ನಾನೊಬ್ಬ ಇದ್ದೇನೆ ಎಂದು ಹೇಳಿದ್ದೇನೆ” ಎಂದಿದ್ದಾರೆ.

“ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ನನಗೆ ಟಿಕೆಟ್ ನೀಡಿ ಎಂದು ಕೇಳಿದ್ದೇನೆ. ನಾನು ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಟಿಕೆಟ್ ನೀಡಿ ಎಂದು ಕೇಳಿಲ್ಲ. ನನಗೆ ಹಿಂದಿನಿಂದ ನಾನಾ ಅವಕಾಶ ಕೊಟ್ಟಿದ್ದಾರೆ. ಹಾಗೆಯೇ ಬೇರೆಯವರಿಗೂ ಅವಕಾಶ ಕೊಟ್ಟಿದ್ದಾರೆ. ಪಕ್ಷ ನನಗೆ ಟಿಕೆಟ್ ನೀಡಲಿದೆ ಎಂದು ನಾನು ಭಾವಿಸಿದ್ದೇನೆ. ನನ್ನ ಮೇಲೆ ಯಾವುದೇ ಆಪಾದನೆಗಳಿಲ್ಲ. ಬದಲಿಗೆ ಜನರ ಪ್ರೀತಿಯಿದೆ” ಎಂದರು.

ಆಯನೂರು ಮಂಜುನಾಥ್‌

ಚರ್ಚೆ ಹುಟ್ಟುಹಾಕಿದ ಫ್ಲೆಕ್ಸ್

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶಿವಮೊಗ್ಗದಲ್ಲಿ ಪ್ಲೆಕ್ಸ್ ರಾಜಕೀಯ ಆರಂಭವಾಗಿದೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಪರೋಕ್ಷವಾಗಿ ಟಾಂಗ್ ಕೊಟ್ಟು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಫ್ಲೆಕ್ಸ್ ಹಾಕಿಸಿದ್ದು, ಎಲ್ಲರ ಬಾಯಲ್ಲೂ ಅದೇ ಸುದ್ದಿ ಹರಿದಾಡುತ್ತಿದೆ.

ಆಯನೂರು ಮಂಜುನಾಥ್ ಅವರು ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಹಾಕಿಸಿದ್ದಾರೆ. “ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮುರಿದ ಮನಸುಗಳ ಬೆಸುಗೆಯಾಗಲಿ, ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ” ಎಂದು ಫ್ಲೆಕ್ಸ್ ನಲ್ಲಿ ಬರೆಸಿದ್ದು, ಇದು ಈಶ್ವರಪ್ಪ ವಿರುದ್ಧ ಪರೋಕ್ಷವಾಗಿ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...