ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪನವರ ಸ್ಪರ್ಧೆಯ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಈಶ್ವರಪ್ಪನವರ ವಿಚಾರ ರಾಷ್ಟ್ರೀಯ ನಾಯಕರ ಗಮನದಲ್ಲಿದೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಅದರ ಪರಿಣಾಮ ಏನು ಕೂಡ ಆಗಲ್ಲ” ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಶಿವಮೊಗ್ಗದಲ್ಲಿ ರಾಘವೇಂದ್ರ ಜನಪ್ರಿಯ ಸಂಸದರು. ಮೋದಿಯ ಜನಪ್ರಿಯತೆ ಮತ್ತು ರಾಘವೇಂದ್ರ ಅಭಿವೃದ್ಧಿ ಕೆಲಸದಿಂದ ಎರಡು ಲಕ್ಷಕ್ಕೂ ಅಧಿಕ ಅಂತರದಲ್ಲಿ ಗೆಲ್ಲುತ್ತಾರೆ. ರಾಜ್ಯದಲ್ಲಿ ವಾತಾವರಣ ನಮಗೆ ಪೂರಕವಾಗಿದೆ. ಮೋದಿ ಪ್ರಧಾನಿ ಆಗಬೇಕೆನ್ನುವುದು ಸಹಜ ಅಭಿಪ್ರಾಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಪಕ್ಷದಲ್ಲಿ ಪ್ರತಿದಿನ ಉತ್ಸಾಹ ಕುಸಿಯುತ್ತಿದೆ. ಮೋದಿ ಜನಪ್ರಿಯ ಕಾರಣಕ್ಕೆ ರಾಜ್ಯದ ಯಾವುದೇ ಸಚಿವರು ಸ್ಪರ್ಧೆ ಮಾಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹತ್ಯೆ ಪ್ರಕರಣ, ಚನ್ನಗಿರಿ, ಗದಗ ಪ್ರಕರಣವನ್ನು ರಾಜ್ಯ ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ” ಎಂದು ವಿಜಯೇಂದ್ರ ದೂರಿದರು.

“ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವು ವೈಯಕ್ತಿಕ ಕಾರಣಕ್ಕೆ ಆಗಿದೆ ಎನ್ನುತ್ತಾರೆ. ಇದು ಅಲ್ಪಸಂಖ್ಯಾತರ ತುಷ್ಠೀಕರಣ ರಾಜಕಾರಣವಾಗಿದೆ. ರಾಜ್ಯದ ಜನತೆಯ ರಕ್ಷಣೆ ವಿಚಾರ ಇವರಿಗೆ ಬೇಕಾಗಿಲ್ಲ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆ ಎದ್ದಿದೆ. ಜನರು ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ” ಎಂದರು.

ಕಾಂಗ್ರೆಸ್‌ನ ‘ಚೊಂಬು’ ಜಾಹೀರಾತು ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ, “ಕಾಂಗ್ರೆಸ್‌ನವರು ಹತಾಶ ಭಾವನೆಯಿಂದ ಈ ರೀತಿ ನಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳ ವೈಫಲ್ಯತೆಯಿಂದ ಕಾಂಗ್ರೆಸ್ಸಿಗೆ ಜ್ಞಾನೋದಯವಾಗಿದೆ. ಗೆಲ್ಲುವುದಿಲ್ಲ ಎಂದು ಗ್ಯಾರಂಟಿಯಾದ ನಂತರ ಹತಾಶೆಯಿಂದ ಜಾಹೀರಾತು ನೀಡುತ್ತಿದ್ದಾರೆ. ಜನರೇ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ” ಎಂದು ಹೇಳಿದರು.

“ನೇಹಾ ಹತ್ಯೆ ಪ್ರಕರಣ ಪ್ರತಿಯೊಬ್ಬ ಮಹಿಳೆ ರಕ್ಷಣೆ ಇಲ್ಲ ಎಂದು ಯೋಚಿಸುತ್ತಿದ್ದಾರೆ. ಅತಿ ಶೀಘ್ರದಲ್ಲಿ ನೇಹಾ ಪ್ರಕರಣದ ಬಗ್ಗೆ ನಾವು ಹೋರಾಟ ಕೈಗೊಳ್ಳುತ್ತೇವೆ” ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಚುನಾವಣೆ ನಂತರ ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿ ಮುರಿದು ಬೀಳಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ, “ಚುನಾವಣೆ ನಂತರ ಮೈತ್ರಿ ಹೇಗೆ ಹೋಗುತ್ತದೆ ಅನ್ನೋದನ್ನು ಅವರೇ ನೋಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪರವಾಗಿ ವಾತಾವರಣ ಇದೆ. ಚುನಾವಣೆ ನಂತರ ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತರಲಿದ್ದಾರೆ” ಎಂದು ಭವಿಷ್ಯ ನುಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...