ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

Date:

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ, ಬ್ಯಾಕೋಡು, ಎಸ್.ಎಸ್.ಭೋಗ್, ಹೆರಬೆಟ್ಟು, ಅರಳಗೋಡು, ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೀತಾ ಮತ್ತು ನಟ ಶಿವರಾಜ್‌ಕುಮಾರ್ ಪ್ರಚಾರ ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಗೀತಾ ಮಾತನಾಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು” ಎಂದು ಗೀತಾ ಶಿವರಾಜಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲೆನಾಡಿನ ಜನರ ಒಡಲ ಸಂಕಟವನ್ನು ಹತ್ತಿರದಿಂದ ಆಲಿಸುವ ಅವಕಾಶ ನನಗೆ ದೊರಕಿದೆ. ಇಲ್ಲಿನ ಸಮಸ್ಯೆಗಳ ಅಂತರಾಳ ಕೂಡ ಅರಿವಿಗೆ ಬಂದಿವೆ. ಇಲ್ಲಿ, ಕುಡಿಯುವ ನೀರು, ಬಗರ್ ಹುಕುಂ ಸಮಸ್ಯೆ, ಭೂ-ಹಕ್ಕು, ರಸ್ತೆ, ಸಾರಿಗೆ ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಜನರು ಅಳಲು ತೋಡಿಕೊಂಡಿದ್ದಾರೆ. ಆದ್ದರಿಂದ, ಇಲ್ಲಿ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿ ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ” ಎಂದರು.

“ಕಳೆದ 15 ವರ್ಷದ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಸ್ಥಿತಿ ಗತಿಯನ್ನೇ ಉನ್ನತ ಸ್ಥಾನಕ್ಕೆ ಏರಿಸಬಹುದಾಗಿತ್ತು. ಕೇಂದ್ರದ ಹಂತದಲ್ಲಿ ಅನೇಕ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಕಂಡುಕೊಳ್ಳಬಹುದಾಗುತ್ತು. ಆದರೂ, ಅದು ಸಾಧ್ಯವಾಗದಿರುವುದು ಆಶ್ಚರ್ಯ ಮೂಡಿಸುತ್ತದೆ” ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತ‌ನಾಡಿ, “ಕ್ಷೇತ್ರದಲ್ಲಿ ರೈತರ ಕೃಷಿ ಚಟುವಟಿಕೆ ಸೇರಿದಂತೆ, ಕುಡಿಯುವ ನೀರಿನ ಸಮಸ್ಯೆ ವ್ಯತಿರಿಕ್ತ ಹಂತ ತಲುಪಿದೆ. ಮುಂದಿನ ದಿನದಲ್ಲಿ ಶರಾವತಿ ನದಿ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು‌” ಎಂದು ಹೇಳಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಇಲ್ಲಿ, ಬಿಪಿಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು” ಎಂದರು.

“ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಗೀತಾಗೆ ಕ್ಷೇತ್ರದ ಜನರು ಅವಕಾಶ ಕಲ್ಪಿಸಿಕೊಡಬೇಕು. ಮಲೆನಾಡಿನ ಸಂಮೃದ್ಧ ಹಸಿರು, ಗೀತಾಗೆ ಉಸಿರಾಗಬೇಕು. ಇದಕ್ಕೆ ಕ್ಷೇತ್ರದ ಮತದಾರರು ಆಶೀರ್ವದಿಸಬೇಕು. ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗಲು ಗೀತಾಗೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕು” ಎಂದು ನಟ ಶಿವರಾಜ್‌ಕುಮಾರ್ ಮನವಿ ಮಾಡಿದರು.

ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಅಶೋಕ್ ಬೇಳೂರು, ಪ್ರಭಾವಾತಿ ಚಂದ್ರಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಂಕಾರ ಮುರಕ್ಕಿ, ಶ್ರೀದೇವಿ ರಾಮಚಂದ್ರ, ಪ್ರೇಮಾ ಸಂತೋಷ್, ರಘುಪತಿ ಹೋನಗೋಡು, ಸಂತೋಷ ಶೆಟ್ಟಿ, ಸುಧಾಕರ ಮಾವಿನಕೈ, ಆನಂದ ಬಾಳ, ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...