ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

Date:

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಒತ್ತಾಯ ಮಾಡಿದರು.

ಅಂಕೋಲಾ ಬಳಿಯ ರಾಷ್ಟ್ರೀಯ ಹೆದ್ದಾರಿಯ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಏಳು ಜನರು ಧಾರುಣ ಸಾವನ್ನಪ್ಪಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

“ಪರಿಹಾರ ಕಾರ್ಯದಲ್ಲಿ ರಾಜಕರಣ ಮಾಡಬಾರದು. ಕೇಂದ್ರ ಸರಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ” ಎಂದು ತಿಳಿಸಿದರು.

“ಯಾಕೆ ಈ ದುರಂತ ಸಂಭವಿಸಿತು? ಅದಕ್ಕೆ ಕಾರಣಗಳು ಏನು? ಕಾಮಗಾರಿಯಲ್ಲಿ ಸಮಸ್ಯೆ ಇದೆಯಾ? ಎಂಬ ಪರಿಶೀಲನೆ ನಡೆಸಲಾಗುವುದು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗುವುದು. ಮೊದಲು ಪರಿಹಾರ ಕಾರ್ಯ ಮುಗಿಯಲಿ” ಎಂದು ಹೇಳಿದರು.

“ಈ ಬಗ್ಗೆ ನಾನು ಅಧಿಕಾರಿಗಳಿಗೆ ದೋಷ ಕೊಡಲಾರೆ. ಅವರು ಮಳೆಯ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ದುರಂತ ಊಹೆಗೂ ನಿಲುಕದ್ದು. ಜನತೆಗೆ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ” ಎಂದು ಹೇಳಿದರು.

“ರಾಜ್ಯ ಸರಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಸ್ಥಳೀಯರಿಗೆ ಬೇಸರವಿದೆ. ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ. ಕೇಂದ್ರದಿಂದ ಏನು ಸಹಾಯ ಮಾಡಿಸಬಹುದೋ ಅದನ್ನು ಮಾಡಿಸುತ್ತೇನೆ” ಎಂದು ತಿಳಿಸಿದರು.

“ಭಾರೀ ಮಳೆಯಿಂದ ಹಾಸನ, ಮಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಕರಾವಳಿ ಮಲೆನಾಡು ಭಾಗದಲ್ಲಿ ಕೃಷಿ ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು” ಎಂದು ಆಗ್ರಹಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ನಾಯಕ ಸೂರಜ್ ನಾಯಕ್ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಜೆಡಿಎಸ್ ಮುಖಂಡರು ಸಚಿವರ ಜತೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...