ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

Date:

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಭಾರತೀಯ ಕ್ರಿಕೆಟ್ ತಂಡವನ್ನು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಸೋಮವಾರ ಟೀಕಿಸಿದ್ದಾರೆ. “ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ” ಎಂದು ರಾವತ್ ಹೇಳಿದ್ದಾರೆ.

2025ರ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಐದು ವಿಕೆಟ್‌ಗಳ ಜಯವನ್ನು ಸಾಧಿಸಿದೆ. ಆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಕೈಯಿಂದ ಟ್ರೋಫಿ ಪಡೆಯಲು ನಿರಾಕರಿಸಿ, ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ. ಈಗಾಗಲೇ ರಾಜಕೀಯ ವಿವಾದಕ್ಕೆ ನಾಂದಿ ಹಾಡಿರುವ ಈ ಪಂದ್ಯವು ಗೆಲುವಿನ ಬಳಿಕ ತಂಡದ ನಿರ್ಧಾರದಿಂದಾಗಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿದ್ದೀರಾ? ನಖ್ವಿಯಿಂದ ಟ್ರೋಫಿ ಸ್ವೀಕರಿಸದ ಭಾರತ ತಂಡ, ಕಪ್‌ ಇಲ್ಲದೇ ಸಂಭ್ರಮಿಸಿದ ಆಟಗಾರರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ಸಂಜತ್ ರಾವತ್, “ಕೇವಲ 15 ದಿನಗಳ ಹಿಂದೆ, ಸರಣಿಯ ಆರಂಭದಲ್ಲಿ, ಅವರು ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಅವರೊಂದಿಗೆ ಫೋಟೋಗಾಗಿ ಕೈಕುಲುಕಿದ್ದು, ನಗುತ್ತಿದ್ದರು. ಆದರೆ ಈಗ” ಎಂದು ಪ್ರಶ್ನಿಸಿದ್ದಾರೆ.

“ಕ್ಯಾಮೆರಾಗಳಿಗಾಗಿ ಪೂರ್ಣ ಪ್ರಮಾಣದ ರಾಷ್ಟ್ರೀಯತಾವಾದಿಯ ನಾಟಕವಾಡಲಾಗುತ್ತಿದೆ. ದೇಶಭಕ್ತಿ ನಿಜವಾಗಿಯೂ ನಿಮ್ಮ ರಕ್ತದಲ್ಲಿದ್ದರೆ, ನೀವು ಪಾಕಿಸ್ತಾನದೊಂದಿಗೆ ಮೈದಾನಕ್ಕೆ ಕಾಲಿಡುತ್ತಿರಲಿಲ್ಲ. ಇದು ಬರೀ ನಾಟಕ. ಜನರೊಂದಿಗೆ ಆಟವಾಡಲಾಗುತ್ತಿದೆ” ಎಂದು ಸಂಜಯ್ ರಾವತ್ ಟೀಕಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರಾವತ್, “ಬಿಜೆಪಿಯ ನಕಲಿ ದೇಶಭಕ್ತರು ಮತ್ತು ಭಕ್ತರ ಬಗ್ಗೆ ನನಗೆ ತಿಳಿದಿಲ್ಲ. ಆದರೆ ನಿಜವಾದ ದೇಶಭಕ್ತರು ನಿನ್ನೆಯ ಪಂದ್ಯವನ್ನು ವೀಕ್ಷಿಸಲಿಲ್ಲ. ನೀವು ಪಿಸಿಬಿ ಮುಖ್ಯಸ್ಥ ನಖ್ವಿ ಅವರಿಂದ ಟ್ರೋಫಿಯನ್ನು ತೆಗೆದುಕೊಳ್ಳಲಿಲ್ಲ, ಆದರೆ ನಾನು ಭಾರತೀಯ ನಾಯಕ ಅವರೊಂದಿಗೆ ಕೈಕುಲುಕುವುದು, ಚಹಾ ಕುಡಿಯುವುದು ಮತ್ತು ಚಿತ್ರಗಳನ್ನು ಕ್ಲಿಕ್ ಮಾಡುವುದನ್ನು ತೋರಿಸುವ ವೀಡಿಯೊವನ್ನು ಹಂಚಿಕೊಂಡಿದ್ದೇನೆ. ಸಾರ್ವಜನಿಕರು ಮೂರ್ಖರು ಎಂದು ನೀವು ಭಾವಿಸುತ್ತೀರಾ” ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು “ಭಾರತೀಯ ಸೇನೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಮಯದಲ್ಲಿ ಮಡಿದ ಜನರಿಗೆ ಮಾಡಿದ ಅವಮಾನ” ಎಂದು ಕರೆದಿರುವ ರಾವತ್, “ನಮ್ಮ ಪ್ರಶ್ನೆ, ನೀವು ಪಾಕಿಸ್ತಾನದೊಂದಿಗೆ ಏಕೆ ಆಟವಾಡುತ್ತಿದ್ದೀರಿ? ಹುತಾತ್ಮರಾದ ಸೈನಿಕರನ್ನು ಮತ್ತು ಪಹಲ್ಗಾಮ್‌ನಲ್ಲಿ ಮಡಿದ ಜನರನ್ನು ನೀವು ಅವಮಾನಿಸಬಾರದು. ನೀವು ಟ್ರೋಫಿಯನ್ನು ತೆಗೆದುಕೊಳ್ಳಲಿಲ್ಲ. ಅವರ ನಾಯಕನೊಂದಿಗೆ ಕೈಕುಲುಕಲಿಲ್ಲ, ಆದರೆ ನಂತರ ನೀವು ಪಂದ್ಯವನ್ನು ಏಕೆ ಆಡಿದ್ದೀರಿ? ಈ ನಾಟಕವನ್ನು ನಿಲ್ಲಿಸಿ” ಎಂದು ಹೇಳಿದ್ದಾರೆ.

ಇದಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯ ವಕ್ತಾರ ಅತುಲ್ ಲೊಂಡೆ ಪಾಟೀಲ್ ಅವರೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಟೀಕಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಮತ್ತು ಅವರ ಮಗ ಜಯ್ ಶಾ ಅವರು ಪಾಕಿಸ್ತಾನ ತಂಡವನ್ನು ಏಕೆ ಹೊರಹಾಕಲಿಲ್ಲ ಎಂದು ಪ್ರಶ್ನಿಸಿದರು.

“‘ಆಪರೇಷನ್ ಸಿಂಧೂರ ಕೊನೆಗೊಂಡಿದೆಯೇ? ಸಂಬಂಧಗಳನ್ನು ಸಾಮಾನ್ಯಗೊಳಿಸಲು ಆಟವನ್ನು ಆಡುತ್ತಿದ್ದಾರೆಯೇ? ಅಥವಾ ಕಾರ್ಯಾಚರಣೆಯ ಮಧ್ಯದಲ್ಲಿ ಹೇಗೆ ಆಟವಾಡಿದರು? ಹಣಕ್ಕಾಗಿ ನಡೆಯುತ್ತಿದೆಯೇ? ಅಮಿತ್ ಶಾ ಇದನ್ನು ಐಸಿಸಿ ಆಯೋಜಿಸಿದೆ ಎಂದು ಹೇಳುತ್ತಾರೆ. ಹಾಗಾದರೆ ಐಸಿಸಿ, ಅವರ ಮಗನ ಅಧ್ಯಕ್ಷತೆಯಲ್ಲಿ, ಪಾಕಿಸ್ತಾನವನ್ನು ಏಕೆ ಹೊರಹಾಕಲು ಸಾಧ್ಯವಿಲ್ಲ” ಎಂದು ಕೇಳಿದ್ದಾರೆ.

ಏನಿದು ಏಷ್ಯಾ ಕಪ್ ಟ್ರೋಫಿ ವಿವಾದ?

2025ರ ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ನಂತರ, ಭಾರತ ತಂಡವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ, ಪಿಸಿಬಿ ಅಧ್ಯಕ್ಷ ಮತ್ತು ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದೆ. ಭಾನುವಾರ ದುಬೈನಲ್ಲಿ ನಡೆದ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...