ಮಧ್ಯಪ್ರದೇಶ | ಚುನಾವಣಾ ಪ್ರಚಾರದಲ್ಲಿ ಸಿಎಂ ಶಿವರಾಜ್‌ ಸಿಂಗ್‌ ಮೂಲೆಗುಂಪು; ಟಿಕೆಟ್ ನಿರಾಕರಣೆ ಸಾಧ್ಯತೆ?

Date:

ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು ಅವಧಿಗೆ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಹಾಲಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ಅವರನ್ನು ಈ ಬಾರಿಯ ಚುನಾವಣಾ ಪ್ರಚಾರದಿಂದ ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೆ ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದುವರೆಗೂ ವಿಧಾನಸಭೆ ಚುನಾವಣೆಗೆ ಬಿಜೆಪಿಯು ಎರಡು ಅಭ್ಯರ್ಥಿಗಳ ಪಟ್ಟಿಗಳನ್ನು ಹೊರತಂದಿದ್ದು, ಇದರಲ್ಲಿ ಮೂವರು ಕೇಂದ್ರ ಸಚಿವರಾದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೆಸರುಗಳ ಜೊತೆ ಹಾಲಿ ಸಂಸದರ ಹೆಸರುಗಳಿವೆ. ಎರಡೂ ಪಟ್ಟಿಯಲ್ಲೂ ಕೇಂದ್ರ ಸಚಿವರು ಹಾಗೂ ಸಂಸದರನ್ನು ಸೇರಿಸಿದ್ದರೂ ಹಾಲಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಇನ್ನೂ ಟಿಕೆಟ್ ನೀಡಿಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪಟ್ಟಿಗಳ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷ ಕಾಂಗ್ರೆಸ್, ಆಡಳಿತ ಪಕ್ಷ ಬಿಜೆಪಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದೆ ಎಂದು ಲೇವಡಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿಯವರೆಗೆ ಬಿಜೆಪಿ 79 ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಆದರೆ ಚುನಾವಣೆಗೆ ಇನ್ನೂ 151 ಸ್ಥಾನಗಳನ್ನು ಪ್ರಕಟಿಸಬೇಕಿದೆ. ಮುಖ್ಯಮಂತ್ರಿಯಾದವರಿಗೆ ಮೊದಲ ಪಟ್ಟಿಯಲ್ಲಿಯೇ ಸ್ಥಾನ ನೀಡಬೇಕಿತ್ತು. ಆದರೆ ಎರಡು ಪಟ್ಟಿ ಬಿಡುಗಡೆಯಾದರೂ ಸ್ಥಾನ ನೀಡದಿರುವುದು ಅವರನ್ನು ಮೂಲೆ ಗುಂಪು ಮಾಡುವುದಲ್ಲದೆ ಮತ್ತೇನಿಲ್ಲ ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆನಡಾ | ಸಿಖ್ ಸಮುದಾಯದಿಂದ ಭಾರತದ ವಿರುದ್ಧ ಪ್ರತಿಭಟನೆ; ಮೋದಿ ಭಾವಚಿತ್ರ ತುಳಿದು ಆಕ್ರೋಶ

ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್, “ಚೌಹಾಣ್ ಅವರನ್ನು ಎರಡೂ ಪಟ್ಟಿಯಲ್ಲಿ ಹೆಸರಿಸಲು ವಿಫಲವಾದರೆ ಕೋಟ್ಯಂತರ ಕಾರ್ಯಕರ್ತರ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯ ಆಂತರಿಕ ಸೋಲಿನ ಖಚಿತ ಮುದ್ರೆಯಾಗಿದೆ. ಬಿಜೆಪಿ ವಿಶ್ವಾಸ ಕೊರತೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಬಾರಿ ತನ್ನ ಅತಿ ದೊಡ್ಡ ಭದ್ರಕೋಟೆಯಲ್ಲಿ ಅತಿ ದೊಡ್ಡ ಸೋಲನ್ನು ಕಾಣಲಿದೆ. ಕಾಂಗ್ರೆಸ್ ದುಪ್ಪಟ್ಟು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರ ಸೋಲಿನತ್ತ ಸಾಗುತ್ತಿದೆ” ಎಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ, “ಬಿಜೆಪಿ ಈಗ ಪ್ರತಿಪಕ್ಷಗಳಿಗೆ ಹೆದರುತ್ತಿದೆ. ಸೋಲಿನ ಭಯ ಎಲ್ಲೆಡೆ ಆವರಿಸಿದೆ” ಎಂದು ಹೇಳಿದ್ದಾರೆ.

ಕೈ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್, “ಕಾಂಗ್ರೆಸ್ ಸರ್ಕಾರದ ಕೃಪೆಯಿಂದ ಹಿಂದುಳಿದ ರಾಜ್ಯವಾಗಿದ್ದ ಮಧ್ಯಪ್ರದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸಿದ್ದು ಬಿಜೆಪಿ ಸರ್ಕಾರ” ಎಂದಿದ್ದಾರೆ.

2018 ರ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನ, ಬಿಜೆಪಿ 109 ಸ್ಥಾನದೊಂದಿಗೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಿತ್ತು. ಆದಾಗ್ಯೂ ಕಾಂಗ್ರೆಸ್ ಸರ್ಕಾರ ರಚಿಸಿ ಕಮಲ್‌ನಾಥ್ ಮುಖ್ಯಮಂತ್ರಿಯಾದರು. ಆದರೆ ಕೆಲವು ತಿಂಗಳ ನಂತರ ಜ್ಯೋತಿರಾಧಿಥ್ಯ ಸಿಂಧಿಯಾ ಮತ್ತು ಕೆಲವು ಬಂಡಾಯ ಶಾಸಕರು ಬಿಜೆಪಿಗೆ ಸೇರಿದ ಕಾರಣ ಕಾಂಗ್ರೆಸ್‌ ಸರ್ಕಾರ ಪತನವಾಗಿ ಕಮಲ್ ನಾಥ್ ರಾಜೀನಾಮೆ ನೀಡಬೇಕಾಯಿತು. ಶಿವರಾಜ್‌ ಸಿಂಗ್‌ ಚೌಹಾಣ್‌ ಪುನಃ ಮುಖ್ಯಮಂತ್ರಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...