ಬಿಜೆಪಿಗೆ ಬಿಸಿತುಪ್ಪವಾದ ಶೋಭಾ ಕರಂದ್ಲಾಜೆ ಇ.ಡಿ. ಕೇಸ್‌; ಇಂದು ವಿಚಾರಣೆ

Date:

ಇ.ಡಿ. ಪ್ರಕರಣ ಮುನ್ನೆಲೆಗೆ ತಂದು ಶೋಭಾ ಅವರನ್ನು ಕಣದಿಂದ ಹಿಂದಕ್ಕೆ ಸರಿಸಲೂಬಹುದು ಎಂಬ ಚರ್ಚೆ ಪಕ್ಷದ ಒಳಗಡೆ ನಡೆಯುತ್ತಿರುವುದಾಗಿ ಮೂಲಗಳು ಹೇಳುತ್ತಿವೆ

ವಿರೋಧ ಪಕ್ಷಗಳ ಮೇಲೆ ಆದಾಯ ತೆರಿಗೆ (ಐಟಿ), ಜಾರಿ ನಿರ್ದೇಶನಾಲಯ (ಇ.ಡಿ.) ಬಳಸುವ ಬಿಜೆಪಿ ನಾಯಕರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಚಿಕ್ಕಮಗಳೂರು- ಉಡುಪಿ ಕ್ಷೇತ್ರದ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೇಲಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವು ಮತ್ತೆ ಮುನ್ನೆಲೆಗೆ ಬಂದಿದ್ದು ಮಾರ್ಚ್ 26, ಮಂಗಳವಾರ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ ಎದುರು ಶೋಭಾ ಕರಂದ್ಲಾಜೆ ಹಾಜರಾಗಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮಗಳೂರು- ಉಡುಪಿ ಕ್ಷೇತ್ರದಲ್ಲಿ ಭಾರೀ ವಿರೋಧ ವ್ಯಕ್ತವಾದ ಬಳಿಕ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಹೊತ್ತಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮ ಅಬಕಾರಿ ನೀತಿ ಆರೋಪದ ಮೇಲೆ ಇ.ಡಿ. ಬಂಧಿಸಿದ್ದು, ಇಂತಹದ್ದೇ ಪ್ರಕರಣವನ್ನು ಎದುರಿಸುತ್ತಿರುವ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಬಿಜೆಪಿಯೊಳಗೆಯೇ ಅಸಮಾಧಾನ ಭುಗಿಲೇಳಲು ಕಾರಣವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂ ಹಗರಣದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಜೈಲಿಗೆ ಹೋಗಿಬಂದಿದ್ದರು. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು 87 ಕೋಟಿ ರೂ. ಅಕ್ರಮ ಹಣವನ್ನು ಹೊಂದಿದ್ದು, ಅದರಲ್ಲಿ 47 ಕೋಟಿ ರೂ. ಶೋಭಾ ಅವರಿಗೆ ಸಂದಿದೆ ಎಂದು ಜಾರಿ ನಿರ್ದೇಶನಾಲಯ ಪತ್ತೆ ಹಚ್ಚಿತ್ತು. ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ, ಶೋಭಾ ಕರಂದ್ಲಾಜೆ ಅವರಿಗೆ ನೋಟಿಸ್ ನೀಡಿತ್ತು.

ಇದಕ್ಕೆ ಪುರಾವೆಯಾಗಿ 70 ಲಕ್ಷ ರೂಪಾಯಿಗಳು ಕರಂದ್ಲಾಜೆ ಖಾತೆಗೆ ವರ್ಗಾವಣೆಗೊಂಡಿದ್ದು ಕಂಡುಬಂದಿತ್ತು. ಆದರೆ ಬೇರೆ ಬೇರೆಯವರ ಖಾತೆಗೆ ಹಣವನ್ನು ವರ್ಗಾವಣೆ ಮಾಡಿಕೊಂಡು ನಂತರ ಆ ಹಣವನ್ನು ಪ್ರಭಾವಿಗಳು ಪಡೆದುಕೊಂಡಿದ್ದು ಎಂಬುದು ತನಿಖೆಯಲ್ಲಿ ಕಂಡುಬಂದಿತ್ತು. ಹೀಗಾಗಿ ಪ್ರಕರಣದ ಕೊನೆಯ ಆರೋಪಿಯಾಗಿ ಶೋಭಾ ಅವರನ್ನು ಹೆಸರಿಸಲಾಗಿತ್ತು.

ಕಟ್ಟಾ ಸುಬ್ರಮಣ್ಯ ನಾಯ್ಡು, ಅವರ ಪುತ್ರ ಕಟ್ಟಾ ಜಗದೀಶ್ ಸೇರಿದಂತೆ ಒಟ್ಟು 24 ಮಂದಿ ಆರೋಪಿಗಳು ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಸೇರಿದ್ದಾರೆ.

26-03-2014ರಂದು ದಾಖಲಾಗಿದ್ದ ಈ ಪ್ರಕರಣ, ಮಂಗಳವಾರ ಹತ್ತನೇ ವರ್ಷಕ್ಕೆ ಕಾಲಿಡುತ್ತಿದೆ. ನಿಧಾನಗತಿಯ ವಿಚಾರಣೆಗಳು ನಡೆಯುತ್ತಲೇ ಇವೆ.

ಮತ್ತೊಂದೆಡೆ 2019ರ ಲೋಕಸಭಾ ಚುನಾವಣೆ ವೇಳೆ ಅಫಿಡವಿಟ್ ಸಲ್ಲಿಸುವಾಗ ಶೋಭಾ ಕರಂದ್ಲಾಜೆ ಅವರು ಸುಳ್ಳು ಮಾಹಿತಿಯನ್ನು ನೀಡಿದ್ದಾರೆಂಬುದು ತಿಳಿದು ಬಂದಿದೆ.

ಸದರಿ ಪ್ರಕರಣದ ದೂರನ್ನು ಖಾಸಗಿ ವ್ಯಕ್ತಿಯೊಬ್ಬರು ನ್ಯಾಯಾಧೀಶರಿಗೆ ನೀಡಿರುತ್ತಾರೆಂದು ಚುನಾವಣಾ ಆಯೋಗಕ್ಕೆ ಶೋಭಾ ಮಾಹಿತಿ ನೀಡಿದ್ದರು. ಆದರೆ ವಾಸ್ತವದಲ್ಲಿ ಸರ್ಕಾರಿ ಅಧಿಕಾರಿ ಅಂದರೆ ಜಾರಿ ನಿರ್ದೇಶನಾಲಯದ ಡೆಪ್ಯುಟಿ ಡೈರೆಕ್ಟರ್‌ (ಬೆಂಗಳೂರು) ಅವರು ಪ್ರಕರಣವನ್ನು (124/2014) ದಾಖಲಿಸಿರುವುದು ದಾಖಲೆಗಳಿಂದ ಸ್ಪಷ್ಟವಾಗುತ್ತದೆ.

ಇತ್ತೀಚೆಗೆ ತಮಿಳುನಾಡು ಜನರನ್ನು ಬಾಂಬ್ ತಯಾರಿಸುವವರೆಂದು ಆರೋಪಿಸಿ ಭಾರೀ ಟೀಕೆ ಮತ್ತು ಮುಜುಗರಕ್ಕೆ ಒಳಗಾಗಿದ್ದ ಶೋಭಾ ಕರಂದ್ಲಾಜೆ ಅವರ ಮೇಲೆ ಪಕ್ಷದ ಹೈಕಮಾಂಡ್‌ ಗರಂ ಆಗಿದೆ ಎನ್ನಲಾಗುತ್ತಿದೆ. ಇದು ಪಕ್ಷಕ್ಕೆ ಬೇಡವಾಗಿದ್ದ ವಿವಾದ ಎಂದು ಕಾರ್ಯಕರ್ತರೇ ಮಾತನಾಡಿಕೊಳ್ಳುತ್ತಿದ್ದಾರೆ.

ಉಡುಪಿ ಕ್ಷೇತ್ರದ ಜನರು ದೂರ ತಳ್ಳಿದ ವ್ಯಕ್ತಿಯನ್ನು ಬೆಂಗಳೂರು ಉತ್ತರ ಲೋಕಸಭೆಯ ಅಭ್ಯರ್ಥಿಯನ್ನಾಗಿ ಬಿಜೆಪಿ ನಾಯಕರು ಘೋಷಿಸಿರುವುದು ಯಾವ ಕಾರಣಕ್ಕೆ ಎಂಬ ಪ್ರಶ್ನೆ ಕಾರ್ಯಕರ್ತರಲ್ಲೇ ಮೂಡಿದೆ. ಹೀಗಾಗಿ ಇ.ಡಿ. ಪ್ರಕರಣವನ್ನು ಮುನ್ನೆಲೆಗೆ ತಂದು ಶೋಭಾ ಅವರನ್ನು ಕಣದಿಂದ ಹಿಂದಕ್ಕೆ ಸರಿಸಲೂಬಹುದು ಎಂಬ ಚರ್ಚೆ ಪಕ್ಷದ ಒಳಗಡೆ ನಡೆಯುತ್ತಿರುವುದಾಗಿ ಮೂಲಗಳು ಹೇಳುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...