ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಶೋಭಕ್ಕ ಅಥವಾ ವಿಜಯೇಂದ್ರ – ಯಾರು ಹಿತವರು ಈ ಸಂದಿಗ್ಧದೊಳಗೆ?

Date:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಪರಿಣಾಮ ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್‌ ಮುನಿಸಿಕೊಂಡಿದೆ ಎಂದೂ ಹೇಳಲಾಗುತ್ತಿದೆ. ಹಾಗಾಗಿಯೇ, ಚುನಾವಣೆ ಮುಗಿದು ಐದು ತಿಂಗಳಾದರೂ ಇನ್ನೂ ವಿರೋಧ ಪಕ್ಷದ ನಾಯಕನನ್ನೂ ಹಾಗೂ ಪಕ್ಷದ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಿಲ್ಲ ಎಂಬ ಅಭಿಪ್ರಾಯಗಳಿವೆ. ಈ ನಡುವೆ, ಕೇಂದ್ರ ಸಚಿವ ಶೋಭಾ ಕರಂದ್ಲಾಜೆಯನ್ನು ಬಿಜೆಪಿ ರಾಜ್ಯಾಧ್ಯಕ್ಷೆಯನ್ನಾಗಿ ನೇಮಕ ಮಾಡಬಹುದು ಎಂಬ ಚರ್ಚೆಗಳು ಹೆಚ್ಚಾಗಿವೆ.

ಶೋಭಾ ಕರಂದ್ಲಾಜೆ ಅವರು ತಾವು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ತಮಗೆ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ವ್ಯಾಮೋಹವಿಲ್ಲ ಎಂದು ಹೇಳುತ್ತಿದ್ದಾರೆ. ಆದರೂ, ಅವರು ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರೆ ಕೆಲವು ಹೊಸ ಕ್ರಮಗಳಿಗೆ ಅನುಕೂಲವಾಗುತ್ತದೆ ಎಂದು ಪಕ್ಷದೊಳಗಿನ ಕೆಲವರು ಹೇಳುತ್ತಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಸೇರಿದ ಕರಂದ್ಲಾಜೆ ಅವರು ಕರಾವಳಿ ಭಾಗದವರು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ರಾಜ್ಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ- ಇಬ್ಬರಿಗೂ ಸಲ್ಲುವವರು. ಅವರು ರಾಜ್ಯಾಧ್ಯಕ್ಷೆಯಾದರೆ ಪಕ್ಷದಲ್ಲಿನ ಎಲ್ಲ ಬಣಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ, ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುತ್ತಾರೆ. ಮಾತ್ರವಲ್ಲ, ಪಕ್ಷದ ಮೇಲೆ ಹೈಕಮಾಂಡ್‌ ನೇರ ಹಿಡಿತ ಸಾಧಿಸಲು ಅನುಕೂಲವಾಗುತ್ತದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರೇ ಅಧ್ಯಕ್ಷರಾದರೂ, ಮುಂದಿನ ಲೋಕಸಭಾ ಚುಣಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುವುದು ದೊಡ್ಡ ಸವಾಲಾಗಿದೆ. ಅದು ಕರಂದ್ಲಾಜೆ ಅವರನ್ನೂ ಕಾಡುತ್ತಿದೆ.

ಇಂತಹ ಸಮಯದಲ್ಲಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದು ಅವರಿಗೆ ಹೊರೆಯಾಗಲಿದೆ. ಚುನಾವಣೆಗೆ ಕೆಲವೇ ತಿಂಗಳುಗಳಿದ್ದು, ಈ ಅಲ್ಪಾವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶವು ಅವರ ನಿರೀಕ್ಷೆಯಂತೆ ಬರದಿದ್ದರೆ, ಪಕ್ಷದ ಚುಕ್ಕಾಣಿ ಹಿಡಿದವರ ರಾಜಕೀಯ ವೃತ್ತಿಜೀವನದ ಮೇಲೆ ಕಳಂಕ ಕೂರುವ- ಹರಕೆಯ ಕುರಿಯಾಗುವ ಸಾಧ್ಯತೆ ಇದೆ ಎಂಬುದು ರಾಜಕೀಯ ವಲಯದ ವಿಶ್ಲೇಷಣೆಯಾಗಿದೆ.

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೆಸರು ಕೂಡ ಅಧ್ಯಕ್ಷರ ಸ್ಥಾನದ ರೇಸ್‌ನಲ್ಲಿದೆ. ವಿಜಯೇಂದ್ರ ತಮ್ಮ ತಂದೆ ಯಡಿಯೂರಪ್ಪನವರ ಮಾರ್ಗದರ್ಶನ ಪಡೆದು ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ವಿಜಯೇಂದ್ರ ಅವರಿಗಿಂತ ಹಿರಿಯರಾಗಿರುವ ಶೇ.80ರಷ್ಟು ಶಾಸಕರು ಅವರ ಕೈಕೆಳಗೆ ಹೇಗೆ ಕೆಲಸ ಮಾಡುತ್ತಾರೆ ಎಂದು ಪಕ್ಷದ ಕೆಲವು ಮುಖಂಡರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಪಕ್ಷದ ಚುಕ್ಕಾಣಿ ಮತ್ತೆ ಯಡಿಯೂರಪ್ಪ ಅವರ ಅಧೀನಕ್ಕೆ ಹೋಗುತ್ತದೆ ಎಂಬುದೂ ಇದೆ.

ಈ ಸುದ್ದಿ ಓದಿದ್ದೀರಾ?: ಮೋದಿ ಹೆಸರಲ್ಲೇ ನಾವೆಲ್ಲ ಚುನಾವಣೆ ಗೆಲ್ಲುವುದು: ಪ್ರತಾಪ್ ಸಿಂಹ

ಈ ಇಬ್ಬರಲ್ಲದೆ, ಅಶೋಕ್ ಮತ್ತು ನಿರಾಣಿ ಅವರ ಹೆಸರುಗಳೂ ರೇಸ್‌ನಲ್ಲಿ ತಾಳೆ ಹಾಕಿಕೊಂಡಿವೆ. ಈ ಇಬ್ಬರ ಬಳಿಯೂ ಸಾಕಷ್ಟು ಹಣವಿದೆ. ಅವರು ಪಕ್ಷಕ್ಕಾಗಿ ಖರ್ಚು ಮಾಡಬಹುದು. ಅಲ್ಲದೆ, ಹೈಕಮಾಂಡಿನ ಹಿಡಿತದಲ್ಲೂ ಇರುತ್ತಾರೆ. ಜೊತೆಗೆ, ಅಶ್ವತ್ಥನಾರಾಯಣ ಮತ್ತು ಯತ್ನಾಳ್ ಹೆಸರುಗಳೂ ಕೇಳಿಬರುತ್ತಿದೆಯಾದರೂ ಈ ಇಬ್ಬರಿಗೂ ಅಂತಹ ವ್ಯಕ್ತಿಗತ ವರ್ಚಸ್ಸು ಇಲ್ಲ. ಹೀಗಾಗಿ ಬಿಜೆಪಿ ಹೈಕಮಾಂಡ್ ಗೊಂದಲದಲ್ಲಿದೆ. ಅದಕ್ಕಿಂತ ಹೆಚ್ಚಾಗಿ ರಾಜ್ಯ ನಾಯಕರ ಮೇಲೆ ಕೋಪದಲ್ಲಿದೆ.

ಈ ಹಿಂದೆ, ದಸರಾ ನಂತರ ಹೊಸ ಅಧ್ಯಕ್ಷರ ನೇಮಕವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಆ ಬಗ್ಗೆ ಪಕ್ಷದಿಂದ ಇನ್ನೂ ಯಾವುದೇ ಸ್ಪಷ್ಟನೆ ಬಂದಿಲ್ಲ. ಅಧ್ಯಕ್ಷರ ನೇಮಕ ವಿಚಾರದಲ್ಲಿ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂಎಲ್‌ಸಿ ರವಿಕುಮಾರ್ ಹೇಳಿದ್ದಾರೆ.

ಪಕ್ಷದ ವರಿಷ್ಠರು ಐದು ರಾಜ್ಯಗಳ ಚುನಾವಣೆಗಳಲ್ಲಿ ನಿರತರಾಗಿದ್ದಾರೆ. ಆ ಚುನಾಣೆಗಳ ಫಲಿತಾಂಶವು ಡಿಸೆಂಬರ್ 3 ರಂದು ಪ್ರಕಟವಾಗಲಿದೆ. ಅಲ್ಲಿಯವರೆಗೆ ವರಿಷ್ಠರು ಈ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳಲು ಲಭ್ಯವಿರುವುದಿಲ್ಲ ಎಂದು ಪಕ್ಷದ ಕೆಲವರು ಹೇಳುತ್ತಿದ್ದಾರೆ. ಹೀಗಾಗಿ, ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿಯುವವರು ಯಾರು ಎಂಬುದಕ್ಕಾಗಿ ಡಿಸೆಂಬರ್‌ವರೆಗೂ ಕಾಯಬೇಕಾದ ಪರಿಸ್ಥಿತಿ ಇದೆ ಎನ್ನಲಾಗುತ್ತಿದೆ.

“ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಪುಟಿದೇಳುವ ಚೈತನ್ಯ ತುಂಬಬೇಕಾಗಿದೆ. ಪಕ್ಷವು ಜನ ಬೆಂಬಲವನ್ನು ಪಡೆಯಲು ಕಾರ್ಯಕರ್ತರ ತಂಡಗಳನ್ನು ನೇಮಿಸಿ, ಪ್ರಚಾರಕ್ಕಿಳಿಯಬೇಕಾಗಿದೆ. ಆದರೆ, ವಿಧಾನಸಭೆಯಲ್ಲಿ ವಿಪಕ್ಷ ನಾಯಕನ್ನು ಆಯ್ಕೆ ಮಾಡದೇ ಇರುವುದು ಮತ್ತು ಅವಧಿ ಮುಗಿದ ಅಧ್ಯಕ್ಷರನ್ನೇ ಮುಂದುವರೆಸುವುದು- ಪಕ್ಷ ಪುಟಿದೇಳಬಹುದಾದ ಅವಕಾಶವನ್ನು ತಾನಾಗಿಯೇ ಕಳೆದುಕೊಂಡರೆ ಆಶ್ಚರ್ಯವಿಲ್ಲ” ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್‌ ಮೂರ್ತಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...