ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

Date:

  • ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್‌ ಸೇರಲಿರುವ ಪ್ರಸನ್ನ ಗೌಡ
  • ʼಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತು ಕುಮಾರಸ್ವಾಮಿ ನಾಯಕತ್ವ ಒಪ್ಪಿರುವೆʼ

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ‌ ಮುನ್ನ ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಮಾತನಾಡಿದ ಪ್ರಸನ್ನ ಗೌಡ, “ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಬೇಕಿತ್ತು. ಆದರೆ, ಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತಿರುವೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ನಾಯಕತ್ವ ಮೆಚ್ಚಿಕೊಂಡು ಜೆಡಿಎಸ್ ಸೇರುತ್ತಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚನ್ನಪಟ್ಟಣ ಟಿಕೆಟ್ ಸಿಗುವುದು ಅನುಮಾನ ಎನ್ನುವ ಸುಳಿವು ಸಿಗುತ್ತಿದ್ದಂತೆಯೇ ಪ್ರಸನ್ನ ಗೌಡ ಕಾಂಗ್ರೆಸ್ ತೊರೆದು ಜೆಡಿಎಸ್​ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ. ಇಂದು (ಮಾರ್ಚ್​ 26) ಸಂಜೆ ಮೈಸೂರಿನಲ್ಲಿ ನಡೆಯಲಿರುವ ಜೆಡಿಎಸ್​ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಅಧಿಕೃತವಾಗಿ ಜೆಡಿಎಸ್‌ ಸೇರಲಿದ್ದಾರೆ.

ಕಾಂಗ್ರೆಸ್​ಗೆ ಶಾಕ್‌

ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುತ್ತಿರುವುದು ಕಾಂಗ್ರೆಸ್​ಗೆ ಶಾಕ್‌ ನೀಡಿದೆ.

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಪೈಕಿ ಮೂರು ಕ್ಷೇತ್ರಕ್ಕೆ ಟಿಕೆಟ್ ಘೋಷಿಸಲಾಗಿದೆ. ಆದರೆ, ಚನ್ನಪಟ್ಟಣ ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗದ ಕಾರಣ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರಿಗೆ ಕೈ ನಾಯಕರು ಬಲೆ ಬಿಸಿದ್ದಾರೆ ಎನ್ನುವ ಮಾತುಗಳು ಕೂಡ ಕ್ಷೇತ್ರದಲ್ಲಿ ಕೇಳಿಬಂದಿವೆ. ಹಾಗೆಯೇ ನಟಿ ರಮ್ಯಾ ಕೂಡ ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಹೀಗಾಗಿ ಈ ಎಲ್ಲ ಬೆಳವಣಿಗೆ ಪ್ರಸನ್ನ ಗೌಡ ಜೆಡಿಎಸ್ ಸೇರುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...