ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ದರೆ ತೋರಿಸಿ; ನಾನು ರಾಜಕೀಯ ಬಿಡ್ತೀನಿ: ಸಿದ್ದರಾಮಯ್ಯ ಸವಾಲು

Date:

ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಬ್ರಿಟೀಷರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಂಘ ಪರಿವಾರದ ಒಬ್ಬೇ ಒಬ್ಬನನ್ನು, ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ದಿದ್ದರೆ ತೋರಿಸಿ. ನಾನು ರಾಜಕೀಯ ಬಿಟ್ಟು ಬಿಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯವರಿಗೆ ನೇರ ಸವಾಲು ಹಾಕಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನಂಜನಗೂಡಿನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ದೇಶಕ್ಕಾಗಿ ಏನೇನೂ ಮಾಡದವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾ ಎಂದು ಪ್ರಶ್ನಿಸಿದ ಸಿಎಂ, “ನೀವು ದೇಶಭಕ್ತರಾಗಿದ್ದರೆ, ಭಾರತ ಮಾತೆ ಬಗ್ಗೆ ಪ್ರೀತಿ ಇದ್ದಿದ್ದಿದ್ದರೆ ನೀವೇಕೆ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ? ನೀವು ದೇಶ ಭಕ್ತರಾ? ಮುಖ ನೋಡಿಕೊಳ್ಳಿ” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿಯವರನ್ನೂ ಟೀಕಿಸಿದ ಸಿಎಂ, “ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

“ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೋದಿಯವರು ನಿನ್ನೆ ಭಾಷಣ ಮಾಡಿದ್ದಾರೆ. ಆದರೆ ದೇಶದಲ್ಲಿದ್ದ ಭ್ರಷ್ಟರೆಲ್ಲಾ ಈಗ ಯಾವ ಪಕ್ಷದಲ್ಲಿದ್ದಾರೆ ಮೋದಿಯವರೇ” ಎಂದು ಮರು ಪ್ರಶ್ನೆ ಹಾಕಿದರು.

“ಐಟಿ, ಸಿಬಿಐ ದುರುಪಯೋಗ ಪಡೆಸಿಕೊಂಡು ಇಬ್ಬರು ಮುಖ್ಯಮಂತ್ರಿಗಳಾದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್ ಅವರನ್ನು ಜೈಲಿಗೆ ಕಳುಹಿಸಿದ ಮೋದಿಯವರೇ, ಬಜೆಪಿ ಸಂಗ್ರಹಿಸಿದ 7600 ಕೋಟಿ ಹಣಕ್ಕೆ ಒಂದು ಪೈಸೆ ತೆರಿಗೆ ಕಟ್ಟಿಲ್ಲವಲ್ಲಾ. ಈ ಹಗರಣಕ್ಕಾಗಿ ಯಾರನ್ನು ಜೈಲಿಗೆ ಕಳುಹಿಸಬೇಕು ಹೇಳಿ” ಎಂದು ಪ್ರಧಾನಿಯನ್ನು ಪ್ರಶ್ನಿಸಿದರು.

“ಮೋದಿಯವರಾಗಲೀ, ಬಿಜೆಪಿಯವರಾಗಲೀ ಇವತ್ತಿನವರೆಗೂ ಯುವಕರು, ಉದ್ಯೋಗ, ಮಹಿಳೆಯರು, ಶೂದ್ರರು, ದಲಿತರು, ಶ್ರಮಿಕರು, ದುಡಿಯುವವರ ಪರವಾಗಿ ಇವತ್ತಿನವರೆಗೂ ಒಂದೂ ಸರಿಯಾದ ಕಾರ್ಯಕ್ರಮ ಮಾಡಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳು, ಅಡುಗೆ ಎಣ್ಣೆ ಬೆಲೆ ಮೋದಿಯವರು ಆಕಾಶಕ್ಕೆ ಏರಿಸಿದ್ದಾರೆ. ಇದೇನಾ ನಿಮ್ಮ ಅಚ್ಛೆ ದಿನ್? ಎಂದು ಕೇಳಿದರು.

ಬಿಜೆಪಿ-ಜೆಡಿಎಸ್ ಇಬ್ಬರಿಗೂ ಜನಪರವಾದ ಸಿದ್ಧಾಂತ ಮತ್ತು ಬದ್ಧತೆ ಇಲ್ಲದಿರುವುದರಿಂದ ನಾಡಿನ ಜನತೆ ಎರಡೂ ಪಕ್ಷಗಳನ್ನು ತಿರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಎಳನೀರು ಸೇವಿಸಿ 137 ಮಂದಿ ಅಸ್ವಸ್ಥ ಹಿನ್ನೆಲೆ; ‘ಬೊಂಡ ಫ್ಯಾಕ್ಟರಿ’ ಬಂದ್‌ ಮಾಡಲು ಆದೇಶ

ಸಚಿವರಾದ ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಜಿಲ್ಲೆಯ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್, ಗಣೇಶ್ ಮಹದೇವ್ ಪ್ರಸಾದ್, ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಮಾಜಿ ಶಾಸಕರಾದ ಕೇಶವಮೂರ್ತಿ, ಡಿಸಿಸಿ ಅಧ್ಯಕ್ಷ ವಿಜಯ್ ಕುಮಾರ್ ಸೇರಿ ಹಲವು ಮಂದಿ ಜಿಲ್ಲಾ, ತಾಲೂಕು, ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...