ಕಲಬುರಗಿ | ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಎಂದು ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ. ಆದರೆ ವಾಸ್ತವದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಇದ್ದಾರೆ ಅನ್ನೋದನ್ನು ಏಕೆ ಮರೆಯುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳಲು ಬಿಜೆಪಿ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ. ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಧಿಕಾರಕ್ಕೆ ಬಂದು ಹತ್ತು ವರ್ಷಗಳು ಕಳೆದರೂ ದೇವರು, ಧರ್ಮದ ಹೆಸರಿನಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹೇಳಿಕೊಳ್ಳುವಂತಹ ಸ್ವಂತ ಸಾಧನೆಯೇ ಅವರ ಬಳಿ ಇಲ್ಲ. ಆದರೆ, ನಾವು ‘ಗ್ಯಾಂರಟಿ’ ಯೋಜನೆಗಳ ದೀಪ ಇರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೋಡಿತ್ತಿನ ಮುಂದಾಳುತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮೋದಿ ಗ್ಯಾರಂಟಿ ಟಿವಿಯಲ್ಲಿದೆ, ನಮ್ಮ ಗ್ಯಾರಂಟಿ ಕೈಯಲ್ಲಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

“ದಕ್ಷಿಣ ಭಾರತದಲ್ಲಿ ಮೋದಿ ಸುನಾಮಿ, ಬಿಜೆಪಿ ಪರವಾದ ಗಾಳಿ ಇದ್ದಿದ್ದರೇ ಬಿಜೆಪಿಯವರು ಕರ್ನಾಟಕ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿನ ಪ್ರಾದೇಶಿಕ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿದ್ದು ಏಕೆ? ಶಕ್ತಿಯುತವಾದ ಪಕ್ಷಕ್ಕೆ ಸ್ವಂತ ಬಲದ ಮೇಲೆ ಗೆಲ್ಲುವ ವಿಶ್ವಾಸ ಇಲ್ಲವೇ? ಮೋದಿ ಸುನಾಮಿ ಇದೆ ಎನ್ನುವವರು ದಕ್ಷಿಣ ಭಾರತದಲ್ಲಿ ಎಲ್ಲಿದೆ ತೋರಿಸಲಿ” ಎಂದು ಸವಾಲು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿ.ವೈ.ವಿಜಯೇಂದ್ರ ನಾಯಕತ್ವ ಅವರ ಪಕ್ಷದವರೇ ಒಪ್ಪಿಕೊಳ್ಳತ್ತಿಲ್ಲ.ಅವರೆಲ್ಲರೂ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂಬಂತೆ ಆಗಿದೆ. ಮತ್ತೊಂದು ಕಡೆ ಬಿಎಲ್‌ ಸಂತೋಷ ಹಾಗೂ ಬಿಎಸ್‌ ಯಡಿಯೂರಪ್ಪ ಅವರ ಬಡಿದಾಟ ನಡೆಯುತ್ತಿದೆ. ಡಾ.ಸುಧಾಕರ್‌, ಶೋಭಾ ಕರಂದ್ಲಾಜೆ ವಿರುದ್ಧ ‘ಗೋಬ್ಯಾಕ್‌’ ಅಭಿಯಾನ ಬಿಜೆಪಿ ಕಾರ್ಯಕರ್ತರೇ ಮಾಡುತ್ತಿದ್ದಾರೆ. ಬಿಜೆಪಿಗರು ಕಾಂಗ್ರೆಸ್‌ನತ್ತ ಗಮನಕೊಡುವುದು ಬಿಟ್ಟು ಮೊದಲು ತಮ್ಮ ಪಕ್ಷದ ಒಳಗಿನ ಬೆಂಕಿಯನ್ನು ಆರಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ಬಿಜೆಪಿಯವರು ಒಂದೇ ಕುಟುಂಬ ಎನ್ನುತ್ತಿದ್ದಾರೆ. ವಾಟ್ಸಪ್‌ ಯೂನಿವರ್ಸಿಟಿ ಅವರು ಮೋದಿಗೆ ಅವರಿಗೆ ಭಾಷಣ ಬರೆದುಕೊಡುತ್ತಾರೆ. ಅತಿ ಹೆಚ್ಚು ಭ್ರಷ್ಟಾಚಾರ ಆಗಿರೋದು ಬಿಜೆಪಿ ಅವಧಿಯಲ್ಲಿ ಎಂಬುದನ್ನು ಬಿಜೆಪಿಯವರು ಮರೆತಿದ್ದಾರೆ. ಇವರದ್ದು 40 ಪರ್ಸೆಂಟ್ ಸರ್ಕಾರ ಎನ್ನುವ ಕಾರಣಕ್ಕಾಗಿಯೇ ರಾಜ್ಯದ ಜನತೆ ಬಿಜೆಪಿಯವರನ್ನು ಕಿತ್ತೊಗೆದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

“ಅವರವರ ಅಸ್ತಿತ್ವಕ್ಕಾಗಿ ಚುನಾವಣೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ– ಜೆಡಿಎಸ್ ಹೊಂದಾಣಿಕೆಯ ಮೂಲಕ ಇಬ್ಬರೂ ಹರಕೆಯ ಕುರಿಗಳಾಗಿದ್ದಾರೆ. ಕೇಳಿದಷ್ಟು ಸೀಟು ಸಿಗಲಿಲ್ಲವೆಂದು ಬಿಜೆಪಿಯ ಪಾಲುದಾರ ಎಚ್‌.ಡಿ.ಕುಮಾರಸ್ವಾಮಿ ಅವರು ಅತೃಪ್ತರಾಗಿದ್ದಾರೆ. ಕುಟುಂಬ ರಾಜಕಾರಣದ ಬಗ್ಗೆ ಕುರಿತು ಕೇಳಿದ ಉತ್ತರಿಸಿದ ಖರ್ಗೆ, “ಕಾಂಗ್ರೆಸ್‌ಗಿಂತ ಹೆಚ್ಚಿನ ಕುಟುಂಬ ರಾಜಕಾರಣ ಬಿಜೆಪಿಯಲ್ಲಿದೆ. ಡಿಎನ್ಎ ಟೆಸ್ಟ್ ಮಾಡಿಸಿದರೆ ಯಾರ್‍ಯಾರು ಯಾರ ಕುಟಂಬದವರು ಅನ್ನೋದು ಗೊತ್ತಾಗುತ್ತದೆ. ಹಾಗಾಗಿ, ಡಿಎನ್ಎ ಕಿಟ್ ಇಟ್ಟು ಚರ್ಚೆ ಮಾಡೋಣ ಬನ್ನಿ” ಎಂದು ಸವಾಲು ಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...