2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್‌ಡಿಕೆ” ಸರ್ಕಾರ

Date:

  • ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರ
  • 8 ಮಂದಿ ಸಚಿವರೊಂದಿಗೆ ಪ್ರಮಾಣ ಸ್ವೀಕರಿಸಿದ ಸಿಎಂ

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸಯುಗ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿನಿಂದ ಕಾರ್ಯಾರಂಭಕ್ಕೆ ಅಣಿಯಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಡಿನ ಗಣ್ಯಮಾನ್ಯರ ಜೊತೆ ಆಹ್ವಾನಿತರಾಗಿದ್ದ ಅತಿಥಿಗಳ ಸಮ್ಮುಖದೊಂದಿಗೆ ಅಪಾರ ಅಭಿಮಾನಿಗಳ ಎದುರಲ್ಲಿ ಸಿದ್ದರಾಮಯ್ಯ ಎರಡನೇ ಬಾರಿ ಮುಖುಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಎಂದಿನಂತೆ ತಮ್ಮ ರೇಷ್ಮೆ ಪಂಚೆ, ಷರ್ಟ್ ನಲ್ಲಿ ಮಿರಿಮಿರಿ ಮಿಂಚುತ್ತಿದ್ದ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಇವರಿಗೆ ಜೊತೆಯಾದ ಡಿಸಿಎಂ ಶಿವಕುಮಾರ್ ಕೂಡ ಅದೇ ವಸ್ತ್ರಸಂಹಿತೆ ಪಾಲಿಸಿ, ತಾವೂ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರೊಂದಿಗೆ ಸಂಪುಟ ಸೇರ್ಪಡೆಗೊಂಡ ಡಾ ಜಿ ಪರಮೇಶ್ವರ್ ಸಂವಿಧಾನದ ಹೆಸರಿನಲ್ಲೂ, ಎಂ ಬಿ ಪಾಟೀಲ್ ದೇವರ ಹೆಸರಿನಲ್ಲೂ, ಕೆ ಎಚ್ ಮುನಿಯಪ್ಪ ದೇವರ ಹೆಸರಿನಲ್ಲೂ, ಕೆ.ಜೆ ಜಾರ್ಜ್ ದೇವರ ಹೆಸರಿನಲ್ಲೂ, ಸತೀಶ್ ಜಾರಕಿಹೊಳಿ ಬುದ್ದ,ಬಸವ,ಅಂಬೇಡ್ಕರ್‌ ಹೆಸರಿನಲ್ಲಿ, ಪ್ರಿಯಾಂಕ್ ಖರ್ಗೆ ದೇವರ ಹೆಸರಿನಲ್ಲೂ, ಜಮೀರ್ ಅಹ್ಮದ್‌ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಮತ್ತು ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.ಸಿದ್ದರಾಮಯ್ಯ ಸಂಪುಟ

ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಇವರಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಜಮೀರ್‌ ಅಹ್ಮದ್‌ ಹೊರತು ಪಡಿಸಿ ಉಳಿದೆಲ್ಲ ಸಚಿವರು ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದರು. ಜಮೀರ್‌ ಇಂಗ್ಲೀಷ್‌ ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಸಂಪುಟ ಸಚಿವರಾಗಿ ಪ್ರಮಾಣ ಸ್ವೀಕರಿಸಿದ ನಾಲ್ಕು ಮಂದಿ ಹಿರಿಯ ಸಚಿವರು ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದವರೆನ್ನುವುದು ಗಮನಾರ್ಹ.

ಈ ಸುದ್ದಿ ಓದಿದ್ದೀರಾ?:ಶನಿವಾರವೇ ಮೊದಲ ಸಂಪುಟ ಸಭೆ; ಜಾರಿಗೆ ಬರುತ್ತವಾ ಐದು ಗ್ಯಾರಂಟಿಗಳು?

ತೃತೀಯ ರಂಗದ ಬಲಪ್ರದರ್ಶನ

ಎಸ್‌ಡಿಕೆ ಜೋಡಿ ಪ್ರಮಾಣವಚನದ ವೇಳೆ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಇಂತಹ ಸಂಭ್ರಮದ ಕ್ಷಣಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್, ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್, ಎನ್ಸಿಪಿಯ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್‌ನ ಫರೂಕ್ ಅಬ್ದುಲ್ಲಾ, ಮುಫ್ತಿ ಮಹಮ್ಮದ್ ಸಯ್ಯದ್, ನಟ ಕಮಲಹಾಸನ್, ಶಿವರಾಜ್ ಕುಮಾರ್, ನಟಿ ರಮ್ಯ ಸೇರಿದಂತೆ ಇತರರು ಸಾಕ್ಷಿಯಾದರು.

ಒಂದುವರೆ ಘಂಟೆಗಳ ಕಾಲ ನಡೆದ ಸಮಾರಂಭದ ಬಳಿಕ ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ್ ಸೇರಿದಂತೆ ಸಂಪುಟ ಸಿಚಿವರು ವಿಧಾನಸೌಧಕ್ಕೆ ತೆರಳಿ ಮೊದಲ ಸಂಪುಟ ಸಭೆಯಲ್ಲಿ ಭಾಗಿಯಾದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...