ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

Date:

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು MSP ಎರಡನ್ನೂ ನಿಗದಿ ಮಾಡುವುದು ಕೇಂದ್ರ ಬಿಜೆಪಿ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡುವ ಕೆಲಸ ಮಾಡಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಬ್ಬು ಬೆಳೆಗಾರರ ಸಮಸ್ಯೆಯನ್ನು ನಿರ್ಲಕ್ಷಿಸುತ್ತಲೇ ಬಂದ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ನಾವು ಕೂಡ್ಲಿಗಿ ಕ್ಷೇತಕ್ಕೆ 1750 ಕೋಟಿ ರೂಪಾಯಿಗೂ ಹೆಚ್ಚಿನ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದೇವೆ. ಜತೆಗೆ ಚುನಾವಣೆ ವೇಳೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತಿ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ. ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ” ಎಂದು ಲೆಕ್ಕಾಚಾರ ನೀಡಿದರು.

“ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದ ಬಿಜೆಪಿ”

“ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ. ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ” ಎಂದರು.

ಕೂಡ್ಲಿಗಿ ಶಾಸಕರನ್ನು ಶ್ಲಾಘಿಸಿದ ಸಿಎಂ

ಈ ವೇಳೆ ಕೂಡ್ಲಿಗಿ ಶಾಸಕರನ್ನು ಶ್ಲಾಘಿಸಿದ ಸಿಎಂ, “1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು” ಎಂದು ಹೇಳಿದರು.

“ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ” ಎಂದರು.

“ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃದ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ” ಎಂದು ಜನತೆಗೆ ಕರೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...