ನನ್ನನ್ನು ಜೈಲಿಗೆ ಕಳುಹಿಸಲು ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

Date:

ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದರು.

ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಯಾವುದೋ ಸತ್ತು ಹೋಗಿರುವ ಪ್ರಕರಣ ಇಟ್ಟುಕೊಂಡು ನನ್ನ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಹಿಡಿದರೆ ಸ್ವಲ್ಪ ದೊಡ್ಡ ಕೇಸ್‌ಗಳನ್ನು ಹಿಡಿಯಿರಿ” ಎಂದು ವ್ಯಂಗ್ಯವಾಡಿದರು.

“2017ರಲ್ಲಿ ಎಸ್‌ಐಟಿ ನನಗೆ ನೋಟಿಸ್‌ ಕೊಟ್ಟಿತು. ನಮ್ಮ ವಕೀಲರ ಸಲಹೆ ಜಾಮೀನು ತಗೊಂಡು ಎಸ್‌ಐಟಿ ತಂಡ ಭೇಟಿಯಾದೆ. ಆದರೆ, ಅಲ್ಲಿಗೆ ಹೋದಾಗ ‘ಇದು ಜಾಮೀನು ತೆಗೆದುಕೊಳ್ಳುವ ಪ್ರಕರಣವೇ ಅಲ್ಲ’ ಎಂದು ಅಧಿಕಾರಿಗಳು ಹೇಳಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಸಿಎಂ ಆಗಿದ್ದಾಗ ಮನಸ್ಸು ಮಾಡಿದ್ದರೆ ನನ್ನ ಈ ಕೇಸುಗಳನ್ನು ಮುಚ್ಚಿ ಹಾಕಿಸಬಹುದಿತ್ತು. ನನಗೆ ಎರಡು ಸೆಕೆಂಡ್‌ ಆಗುತ್ತಿರಲಿಲ್ಲ. ನನ್ನ ಕಡೆ ಯಾವ ತಪ್ಪು ಆಗಿಲ್ಲ ಅಂತ ಸುಮ್ಮನಿರುವೆ. ಸಾಯಿ ವೆಂಕಟೇಶ್ವರ್‌ ಕಂಪನಿಗೆ ಸಂಬಂಧಪಟ್ಟ ಎಲ್ಲ ಕಡತಗಳು ನನ್ನ ಬಳಿ ಇವೆ. ನಾನು ಯಾವ ಕಡತಕ್ಕೂ ಸಹಿ ಮಾಡಿಲ್ಲ. ನನ್ನ ಹೆಸರಿನಲ್ಲಿ ನಕಲಿ ಸಹಿ ಮಾಡಲಾಗಿದೆ” ಎಂದು ದೂರಿದರು.

“ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದರೆ ಸುಪ್ರೀಂ ಕೋರ್ಟ್‌ ಮುಂದೆ ಯಾಕೆ ಇನ್ನೂ ಸಲ್ಲಿಸಿಲ್ಲ? ಇದನ್ನು ಸುಪ್ರೀಂ ಕೋರ್ಟ್‌ ಕೂಡ ಪ್ರಶ್ನಿಸಿದೆ. ರಾಜ್ಯಪಾಲರ ಅನುಮತಿ ತಗೊಂಡು ನನ್ನ ವಿರುದ್ಧ ತನಿಖೆ ಮಾಡಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆಯಾ? ಇದೆಲ್ಲ ಕುತಂತ್ರ ಅಷ್ಟೇ” ಎಂದು ದೂರಿದರು.

“ಸಾಯಿ ವೆಂಕಟೇಶ್ವರ್‌ ಕಂಪನಿ ಮೋಸದ ಕಂಪನಿ. ನನ್ನ ಸಹಿ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕಂಪನಿ ಕೋರ್ಟ್‌ಗಳನ್ನೇ ಯಾಮಾರಿಸಿದೆ. ಅವತ್ತಿನ ರಾಜ್ಯಪಾಲರ ಮುಂದೆ ಮೋಸದ ಪ್ರಕರಣ ಬಂದಿದೆ. ನಾನು ಸಹಿ ಮಾಡಿದ ಆದೇಶದಲ್ಲಿ ಏನಿದೆ ಎಂಬುದು ತನಿಖೆ ಮಾಡಿದ್ದೀರಾ? ಅಲ್ಲಿ ಒಬ್ಬ ಅಧಿಕಾರಿ 20 ಲಕ್ಷ ರೂಗಳನ್ನು ತಮ್ಮ ಮಗನ ಅಕೌಂಟ್‌ಗೆ ಹಾಕಿಸಿಕೊಳ್ಳುತ್ತಾನೆ. ನಾನು ಅದನ್ನು ಕಂಡು ಹಿಡಿದೆ. ಎಲ್ಲ ಅಧಿಕಾರಿಗಳಿಂದಲೇ ಮೋಸವಾಗಿದೆ. ಅವರೇ ಫೈಲ್‌ ಸಿದ್ದಪಡಿಸಿದ್ದು” ಎಂದು ವಿವರಿಸಿದರು.

“ಸಿಎಂ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ 62 ಪ್ರಕರಣ ಇವೆ. ಭ್ರಷ್ಟಾಚಾರ, ಕರ್ತವ್ಯ ಲೋಪ ಮೇಲೆ ಅವೆಲ್ಲ ದಾಖಲಾಗಿವೆ. 50 ಪ್ರಕರಣಗಳ ವಿಚಾರಣೆಯೇ ನಡೆದಿಲ್ಲ. ಇವರು ನನ್ನ ಬಗ್ಗೆ ಮಾತನಾಡುತ್ತಾರೆ. ಲೋಕಾಯುಕ್ತದ ನರ ಕಿತ್ತಿದ್ದು ಏಕೆ ಎಂಬುದು ಬಿಚ್ಚಿಡಲಾ” ಎಂದು ಪ್ರಶ್ನಿಸಿದರು.

“ಸಂವಿಧಾನದ ಸಂಸ್ಥೆಗಳನ್ನು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬುದು ಸಾವಿರಾರು ಉದಾಹರಣೆ ಕೊಡಬಲ್ಲೆ. 2015ರಲ್ಲಿ ಸಿದ್ದರಾಮಯ್ಯ ಅವರು ಏನೇನು ಮಾಡಿದ್ದಾರೆ ಎಂಬುದು ಸಮಯ ಬಂದಾಗ ಬಿಚ್ಚಿಡುವೆ. ಈಗ ಹೇಳಿದ್ರೆ ಆ ಎಲ್ಲ ದಾಖಲೆಗಳನ್ನು ತಿದ್ದುತ್ತಾರೆ” ಎಂದರು.

“ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರವನ್ನು ಯಾಕೆ ಎಳೆದು ತರುತ್ತಾರೆ? ಕಾಂಗ್ರೆಸ್‌ಗೆ ನನ್ನ ಭಯ ಬಿಟ್ಟರೆ ಯಾರ ಭಯವೂ ಇಲ್ಲ. ನನ್ನ ಬಳಿ ಲಾರಿಯಷ್ಟು ದಾಖಲೆ ಇದೆ. ನನ್ನ ಕೆಣಕಿದರೆ ಅವುಗಳನ್ನು ಬಿಡುಗಡೆ ಮಾಡುವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...