ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕರಾಳ ಕತೆ ವಿವರಿಸಿದ ಸಿಎಂ ಸಿದ್ದರಾಮಯ್ಯ

Date:

ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ ಜಿಎಸ್‌ಟಿ ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು.

ತಿ ನರಸೀಪುರದಲ್ಲಿ ಮಾತನಾಡಿದ ಅವರು, “ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ” ಎಂದರು.

“ಆದರೆ ಕೇಂದ್ರ ಸರ್ಕಾರ ಪ್ರತಿ ಮನೆಗೆ 18% ಜಿಎಸ್‌ಟಿ ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು ಜಿಎಸ್‌ಟಿ ಹೆಸರಲ್ಲಿ ಕೇಂದ್ರ ಸರ್ಕಾರ ವಾಪಾಸ್ ಪಡೆದುಕೊಳ್ಳುತ್ತದೆ. ಅಂದರೆ, ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ ಒಂದು ಲಕ್ಷದ 38 ಸಾವಿರ ರೂಪಾಯಿ ವಾಪಾಸ್ ವಸೂಲಿ ಮಾಡಿದರೆ ಕೇಂದ್ರ ಸರ್ಕಾರ ಎಷ್ಟು ಕೊಟ್ಟಂಗಾಯ್ತು? ಬರೀ 12 ಸಾವಿರ ರೂಪಾಯಿ ಮಾತ್ರ. ಬರೀ 12 ಸಾವಿರ ಕೊಟ್ಟು ಅದಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಳೆಗೇರಿ ನಿವಾಸಿಗಳಿಂದಲೂ 18% ಜಿಎಸ್‌ಟಿ ಸುಲಿಗೆ ಮಾಡುವ ಈ ಕ್ರಮ ನನಗೆ ಬಹಳ ಬೇಸರ ಆಯಿತು. ಹೀಗಾಗಿ ಪ್ರತಿ ಫಲಾನುಭವಿಗಳು ಕಟ್ಟಬೇಕಿದ್ದ ಅವರ ಪಾಲಿನ 3 ಲಕ್ಷ 80 ಸಾವಿರ ರೂಪಾಯಿಯಲ್ಲಿ ಒಂದು ಲಕ್ಷ ಮಾತ್ರ ಅವರಿಂದ ಕಟ್ಟಿಸಿಕೊಂಡು ಉಳಿದ ಹಣವನ್ನು ನಮ್ಮ ಸರ್ಕಾರದಿಂದಲೇ ಕಟ್ಟಿಸಲು ನಾನು ನಿರ್ಧರಿಸಿದೆ” ಎಂದರು.

ಹೀಗಾಗಿ ಪ್ರತಿ ಕೊಳೆಗೇರಿ ಮನೆಗೆ 4 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ನಮ್ಮ ರಾಜ್ಯ ಸರ್ಕಾರ ಕಟ್ಟತ್ತೆ. ಕೇಂದ್ರ ಸರ್ಕಾರದ ಪಾಲು ಕೇವಲ 12 ಸಾವಿರ ರೂಪಾಯಿ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಇದು ವಂಚನೆ ಅಲ್ವಾ ? ಇದು ಅನ್ಯಾಯ ಅಲ್ವಾ ? ಈ ಅನ್ಯಾಯಕ್ಕೆ ಮೋದಿ ಸರ್ಕಾರಕ್ಕೆ ಮತ ಹಾಕಬೇಕಾ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...