ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸಿದ್ದರಾಮಯ್ಯ

Date:

  • ಚುನಾವಣೆಗೆ ಸ್ಪರ್ಧಿಸುವಂತೆ 25 ಕ್ಷೇತ್ರಗಳಿಂದ ಆಹ್ವಾನ
  • ವರುಣಾದಿಂದ ಸ್ಪರ್ಧಿಸುವಂತೆ ಕುಟುಂಬದ ಸಲಹೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮವಾಗಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಅಪಾಯ ಎಂದು ಸಲಹೆ ನೀಡಿದ್ದರು. ಅದಾದ ಬಳಿಕ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಗರಿಗೆದರಿತ್ತು.

ಕೋಲಾರ, ವರುಣಾ ಹಾಗೂ ಬದಾಮಿ ಈ ಮೂರು ಕ್ಷೇತ್ರಗಳ ಮೇಲೆ ಸಿದ್ದರಾಮಯ್ಯ ಅವರ ಒಲವಿದ್ದು, ಕೊನೆಗೆ ವರುಣಾದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ, ಹೈಕಮಾಂಡ್‌ನಿಂದ ಇನ್ನೂ ಅಂತಿಮ ತೀರ್ಮಾನ ಹೊರಬಿದ್ದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ಚುನಾವಣೆಗೆ ಸ್ಪರ್ಧಿಸುವಂತೆ ರಾಜ್ಯದ 25 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಎಲ್ಲ ಕ್ಷೇತ್ರಗಳಿಂದ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾದಿಂದ ಸ್ಪರ್ಧಿಸುವುದು ನಮ್ಮ ಕುಟುಂಬದ ಅಭಿಪ್ರಾಯ. ಎರಡು ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಯುವಂತೆ ಕುಟುಂಬಸ್ಥರು ಸಲಹೆ ನೀಡಿದ್ದಾರೆ. ಸದ್ಯಕ್ಕೆ ವರುಣಾ ಕ್ಷೇತ್ರದಿಂದ ಟಿಕೆಟ್‌ ನೀಡುವಂತೆ ಪಕ್ಷಕ್ಕೆ ತಿಳಿಸಿದ್ದೇನೆ. ಅಂತಿಮ ನಿರ್ಧಾರ ಹೈಕಮಾಂಡ್‌ನದು ಎಂದು ಹೇಳುವ ಮೂಲಕ ವರುಣಾ ಕ್ಷೇತ್ರದ ಪರ ಒಲವು ತೋರಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಿಂದ ಚುನಾವಣಾ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಬದಾಮಿಯಲ್ಲಿ ಅಲ್ಪಮತಗಳಿಂದ ಗೆದ್ದಿದ್ದರು. ಈ ಬಾರಿಯೂ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಮುನ್ಸೂಚನೆಗಳು ಅವರ ಮಾತುಗಳಲ್ಲಿ ಕಂಡುಬಂದಿವೆ.

ಒಟ್ಟಿನಲ್ಲಿ ಸಿದ್ದರಾಮಯ್ಯ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಅಭಿಮಾನಿಗಳ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಯ ನಿರ್ಧಾರವೀಗ ಹಳೆ ಮೈಸೂರು ಭಾಗದಲ್ಲಿ ಮಗ್ಗುಲು ಬದಲಾಯಿಸುತ್ತಿದ್ದ ಕುಟುಂಬ ರಾಜಕಾರಣದ ನಡೆಗೆ ಕೊಂಚ ಹಿನ್ನೆಡೆಯಾಗಿದೆ. ಏಕೆಂದರೆ ಹಳೆ ಮೈಸೂರು ಭಾಗದಲ್ಲಿ ಅದರಲ್ಲೂ ಕಾಂಗ್ರೆಸ್‌ನಲ್ಲಿ ಎರಡನೇ ತಲೆಮಾರಿನ ರಾಜಕಾರಣಕ್ಕೆ ಕಾಂಗ್ರೆಸ್ ನಾಯಕರು ವೇದಿಕೆ ಸಿದ್ಧ ಮಾಡಿಕೊಂಡಿದ್ದರು. ಈಗಾಗಲೇ ಸಿದ್ದರಾಮಯ್ಯ ಪುತ್ರ ಯತೀಂದ್ರ ಶಾಸಕರಾಗಿ ಮೊದಲ ಹೆಜ್ಜೆ ಇಟ್ಟರೆ, ಸಿದ್ದರಾಮಯ್ಯ ಆಪ್ತ ಮಹದೇವಪ್ಪ ಪುತ್ರ ಸುನೀಲ್ ಬೋಸ್, ಈ ಬಾರಿ ಟಿ ನರಸೀಪುರ ಕ್ಷೇತ್ರದಿಂದ ಚೊಚ್ಚಲ ಚುನಾವಣೆ ಎದುರಿಸಲು ಸಿದ್ಧರಾಗಿದ್ದರು. ಇಂತಹ ಸಂದರ್ಭದಲ್ಲಿ ಧ್ರುವನಾರಾಯಣ್ ಅಕಾಲಿಕ ಸಾವು, ಸಿದ್ದರಾಮಯ್ಯವರಿಗೆ ಕೋಲಾರ ಹಾಗೂ ಮಹದೇವಪ್ಪಗೆ ನಂಜನಗೂಡು ಕ್ಷೇತ್ರ ಬಿಟ್ಟುಕೊಡುವ ನಿರ್ಧಾರಕ್ಕೆ ಬರುವಂತಾಗಿದೆ.

ಸಿದ್ದರಾಮಯ್ಯ ಮರಳಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಮಾಡಿರುವ ಘೋಷಣೆ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಕ್ಷೇತ್ರ ಇಲ್ಲದಂತಾಗಿದೆ. ಹಾಗೆ ಮಹದೇವಪ್ಪ ಕೂಡ ನಂಜಗೂಡನ್ನು ಬಿಟ್ಟು ನರಸೀಪುರಕ್ಕೆ ಮರಳುತ್ತಿರುವುದು ಸುನೀಲ್ ಬೋಸ್ ಪಾಲಿಗೆ ವೈಯಕ್ತಿಕ ಹಿನ್ನೆಡೆಯಾಗಿದೆ. ಆದರೆ ಧ್ರುವನಾರಾಯಣ್ ಪುತ್ರ ದರ್ಶನ್ ಗೆ ನಂಜನಗೂಡು ಟಿಕೆಟ್ ಖಾತ್ರಿಯಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...