ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿರುವ ಸಿದ್ದರಾಮಯ್ಯ: ಆರ್‌ ಅಶೋಕ್‌ ಟೀಕೆ

Date:

ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ. ಹೀಗಾಗಿ ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ” ಎಂದಿದ್ದಾರೆ.

“ಗ್ಯಾರಂಟಿಗಳು ಜನರಿಗೆ ತೃಪ್ತಿ ತಂದಿಲ್ಲ, ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರಂಟಿ ಆಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ. ತವರು ಕ್ಷೇತ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲಾದರೆ ಕುರ್ಚಿ ಬಿಟ್ಟು ಇಳಿಯಬೇಕಾತ್ತದೆ ಎಂದು ಸಿಕ್ಕಸಿಕ್ಕ ಸಣ್ಣ ಪುಟ್ಟ ವಿಪಕ್ಷಗಳ ಮುಖಂಡರನ್ನೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಕನಿಷ್ಠ ಪಕ್ಷ ಠೇವಣಿ ಉಳಿಸಿಕೊಳ್ಳಬೇಕು, ಸೋಲಿನ ಅಂತರವಾದರೂ ಕಡಿಮೆ ಮಾಡಿಕೊಳ್ಳಬೇಕು ಅಂತ ಸಿದ್ದರಾಮಯ್ಯನವರು ಮೂರು ದಿನ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದಾರೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಸಿಎಂ ಸಿದ್ದರಾಮಯ್ಯನವರೇ, ನಿನ್ನೆ ವರುಣಾದಲ್ಲಿ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ. ನಿಮ್ಮ ಗ್ಯಾರಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ? ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ?” ಎಂದು ಲೇವಡಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...