ಬೇರೆ ಸಿಎಂಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಭ್ರಷ್ಟರಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

Date:

ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ನಾನು ಈಗಲೂ ಅವರನ್ನು ಭ್ರಷ್ಟ ಅನ್ನಲ್ಲ. ರಾಜ್ಯದಲ್ಲಿ ಸಿಎಂ ಆದವರಿಗೆ ಹೋಲಿಸಿದ್ರೆ ಸಿದ್ದರಾಮಯ್ಯ ಅಷ್ಟೇನೂ ಆಸ್ತಿವಂತರಲ್ಲ. ಯಕಶ್ಚಿತ್ 14 ಸೈಟುಗಳಿಗೆ ತಮ್ಮ ವರ್ಚಸ್ಸು ಕುಗ್ಗುವಂತೆ ಮಾಡಿಕೊಳ್ಳುವುದು ಬೇಡ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಲಹೆ ನೀಡಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಮುಡಾ ಸೈಟ್‌ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಸೈಟು ಹಿಂತಿರುಗಿಸಿ, ಒಂದೊಳ್ಳೆ ಮೇಲ್ಪಂಕ್ತಿ ಹಾಕಲಿ. ನೊಣ ತಿಂದು ಜಾತಿ ಕೆಡಿಸಿಕೊಂಡಂತೆ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ಬಾರದಿರಲಿ” ಎಂದರು.

“ಕೂಡಲೇ ಮುಡಾಕ್ಕೆ ಸೈಟ್ ಸೆರೆಂಡರ್ ಮಾಡಿ ಘನತೆ ಉಳಿಸಿಕೊಳ್ಳಲಿ. ಸಂತೋಷ್ ಹೆಗ್ಡೆ, ಎನ್.ಕುಮಾರ್ ಅವರಂಥ ದಕ್ಷ ನ್ಯಾಯಮೂರ್ತಿಗಳಿಂದ ಮುಡಾ ಹಗರಣ ತನಿಖೆ ಮಾಡಿಸಲಿ. ಅವರ ಗಮನಕ್ಕೆ ಬಾರದೆ ಅವರ ಬಾಮೈದ ತಪ್ಪು ಮಾಡಿರಬಹುದು. ಅವರು ಸೈಟು ಹಿಂತಿರುಗಿಸಿ, ಒಂದೊಳ್ಳೆ ಮೇಲ್ಪಂಕ್ತಿ ಹಾಕಲಿ. ಸಿದ್ದರಾಮಯ್ಯ ಅವರ ಅತೀರ್ಮಾನದಿಂದ 4 ಸಾವಿರ ಕೋಟಿ ರೂ. ಮುಡಾ ಲಾಭ ಬರುತ್ತದೆ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಅವರಿಗೆ ಕಾಳಜಿ, ಪ್ರೀತಿ, ಗೌರವದಿಂದ ಸಲಹೆ ಕೊಟ್ಟಿದ್ದೆ. ಅದನ್ನೂ ಅರ್ಥ ಮಾಡಿಕೊಳ್ಳದೆ ಮರಿಗೌಡನಂಥ ಬಕ್ರಗಳನ್ನು ಜತೆಗಿಟ್ಟುಕೊಂಡಿದ್ದಾರೆ. ಮೈಸೂರಿನ ಡಿಸಿಯಾಗಿದ್ದ ಶಿಖಾ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಒಂದೂವರೆ ತಿಂಗಳು ತಲೆ ಮರೆಸಿಕೊಂಡಿದ್ದ. ಅಂಥ ವ್ಯಕ್ತಿಯನ್ನು ಮುಡಾ ಅಧ್ಯಕ್ಷನನ್ನಾಗಿ ಮಾಡಿದ್ದಾರೆ” ಎಂದರು.

“ನಾನು ಸಂಸದನಾಗಿದ್ದೆ. ಜಿ ಕೆಟಗರಿ ಸೈಟ್‌ನಲ್ಲಿ ಕಾನೂನಾತ್ಮಕ ಸಿಆರ್‌ ಕೊಡಿ ಅಂತ ಕೇಳಿದ್ದೆ. ಜುಜುಬಿ ಶೇ.25 ರಷ್ಟು ದಂಡ ಉಳಿಸಲು ಹೋಗಿಲ್ಲ. ಕಾನೂನು ರೀತಿ ಇಲ್ಲ ಎಂದು ನಾನೇ ಮುಡಾ ಆಯುಕ್ತರಿಗೆ ಹೇಳಿ ರದ್ದು ಮಾಡಿಸಿದ್ದೆ. ನಾನು ಕಟ್ಟಬೇಕಿರೋದು ಸಾವಿರ, ಒಂದೆರಡು ಲಕ್ಷ ರೂ. ದಂಡ. ಅದಕ್ಕೂ ಕೋಟ್ಯಂತರ ರೂ. ಮುಡಾ 50: 50 ಹಗರಣಕ್ಕೂ ಏನು ಸಂಬಂಧ” ಎಂದು ಪ್ರಶ್ನಿಸಿದರು.

ಪಾಲಿಟಿಕ್ಸ್ ನಲ್ಲಿ ಮುಂದೆ ಏನು ಮಾಡ್ತೀವಿ ಹೇಳ್ಬಾರ್ದು

“ಪಾಲಿಟಿಕ್ಸ್ ನಲ್ಲಿ ಮುಂದೆ ಏನು ಮಾಡ್ತೀವಿ ಎಂಬುದನ್ನು ಹೇಳಬಾರದು. ಹೇಳಿದರೆ ಕೆಲವರು ಅದಕ್ಕೂ ಬೇರೆ ಸ್ಕೀಂ ಹಾಕಿ ಬಿಡುತ್ತಾರೆ. ತಾಯಿ ಚಾಮುಂಡಿಯೇ ನನಗೆ ಮುಂದಿನ ದಾರಿ ತೋರಿಸುತ್ತಾಳೆ. ನಾನು ಜನರಿಂದ ತಿರಸ್ಕೃತನಾದ ವ್ಯಕ್ತಿಯಲ್ಲ‌. ಏನೋ ಕೆಲವರಿಂದ ಟಿಕೆಟ್ ತಪ್ಪಿತು. ಹಾಗಂತ ಇದೇ ಅಂತಿಮವಲ್ಲ” ಎಂದರು.

“ಡಿ ಕೆ ಶಿವಕುಮಾರ್ ಸಿಎಂ ಆದರೂ ಖುಷೀನೆ. ಅವರು ಸಹ ಹಳೇ ಮೈಸೂರು ಭಾಗದವರೆ. ಸಿದ್ದರಾಮಯ್ಯ ಸಹ ಮೈಸೂರಿನವರೆ. ಅವರು ಬೇರೆ ಪಕ್ಷದವರು ಆಗಿರಬಹುದು, ಆದರೆ ಅವರು ಮೈಸೂರಿನವರು ಎಂಬ ಹೆಮ್ಮೆ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...