ಸಿಎಂ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್ನ ಎರಡನೇ ಅವತಾರ. ಹಿಜಾಬ್ ವಾಪಸ್ ಪಡೆದರೆ, ನಾಳೆ ಹಿಂದೂ ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹರಿಹಾಯ್ದರು.
ವಿಜಯಪುರದಲ್ಲಿ ಮಾತನಾಡಿದ ಅವರು, “ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ನಾಲಿಗೆ ಹರಿಬಿಟ್ಟರು.
“ಹಿಜಾಬ್ ನಿಷೇಧ ಹಿಂಪಡೆಯೋದು ಸೂಕ್ತ ಅಲ್ಲ. ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಎಂಬ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಧರಿಸದಂತೆ ಆದೇಶ ಹೊರಡಿಸಿತ್ತು. ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಒಂದೆ ಸಮವಸ್ತ್ರದ ಕಾಯ್ದೆ ಮಾಡಿದ್ದರು” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ
“ಶ್ರೀಮಂತರ ಮಕ್ಕಳು ಒಳ್ಳೆಯ ಬಟ್ಟೆ, ಚಿನ್ನಾಭರಣ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳ ಭಾವನೆಗೆ ಪೆಟ್ಟು ಬೀಳುತ್ತದೆ. ಲೋಕಸಭಾ ಚುನಾವಣೆ ಹಿನ್ನೆಲೆ ಮುಸ್ಲಿಮರ ತುಷ್ಟೀಕರಣಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದು ಕೊಂಡಿದ್ದಾರೆ” ಎಂದು ಯತ್ನಾಳ್ ಕುಟುಕಿದರು.





