1.29 ಲಕ್ಷ ಮನೆ ಪೂರ್ಣಗೊಳಿಸಲು ಆರ್ಥಿಕ ನೆರವು ಒದಗಿಸುವ ಭರವಸೆ ನೀಡಿದ ಸಿದ್ದರಾಮಯ್ಯ

Date:

ಸರ್ವರಿಗೂ ಸೂರು ಯೋಜನೆ ಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಿರ್ಮಾಣ ದ ವಿವಿಧ ಹಂತದಲ್ಲಿ ಇರುವ 1,29,457 ಮನೆಗಳಿಗೆ ಎಷ್ಟು ಹಣಕಾಸು ಬೇಕಾಗುತ್ತದೆ. ಈ ವರ್ಷ ಗರಿಷ್ಠ ಎಷ್ಟು ಕೊಡಬಹುದು. ಮುಂದಿನ ವರ್ಷ ಎಷ್ಟು ಕೊಡಬಹುದು ಪರಿಶೀಲನೆ ಮಾಡುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದರು.

ಆದರೆ, ಫಲಾನುಭವಿಗಳಿಂದ ಒಂದು ಲಕ್ಷ ರೂ. ಕಡ್ಡಾಯವಾಗಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39, 966 ಮನೆ ಹಂಚಿಕೆಗೆ ಸಿದ್ದ ವಿದ್ದು 862 ಕೋಟಿ ರೂ. ಅಗತ್ಯವಿದೆ. ಅದೇ ರೀತಿ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆ ಸಿದ್ದವಿದ್ದು 1,879 ಕೋಟಿ ರೂ. ಅಗತ್ಯ ವಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಸಭೆಯಲ್ಲಿ ವಿವರಿಸಿದರು.

ಏನಿದು ಯೋಜನೆ?

ಸರ್ವರಿಗೂ ಸೂರು ಯೋಜನೆಯಡಿಯಲ್ಲಿ 2013 ರಿಂದ 2023 ರವರೆಗೆ ಮಂಜೂರು ಮಾಡಿದ್ದ ವಸತಿ ಯೋಜನೆ ಯಡಿ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯ ವಾಗದೆ 2.32 ಲಕ್ಷ ಮನೆಗಳ ನಿರ್ಮಾಣ ನೆನೆಗುದಿಗೆ ಬಿದ್ದಿತು. ಬಡ ಕುಟುಂಬಗಳ ಸಮಸ್ಯೆ ಯನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಯವರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿ ಕುಟುಂಬದ ಫಲಾನುಭವಿ ವಂತಿಗೆ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.

ಈ ಮೊದಲು ಕೊಳಗೇರಿ ಅಭಿವೃದ್ಧಿ ಮಂಡಳಿ ಯೋಜನೆಗೆ ಅನುಮತಿ ದೊರೆತಿತ್ತು. ಬುಧವಾರ ದ ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೂ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.

ಸಭೆಯಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅತೀಕ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹೌಸಿಂಗ್ ಬೋರ್ಡ್ ಅಧ್ಯಕ್ಷ ಶಿವಲಿಂಗೇ ಗೌಡ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕವಿತಾ ಮಣ್ಣಿಕೇರಿ, ಸುಶೀಲಮ್ಮ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...