ಕುರ್ಚಿಗಾಗಿ ಯುಪಿಎ ಸರ್ಕಾರ ಮಂಡಿಸಿದ ತೆರಿಗೆ ವಿಕೇಂದ್ರೀಕರಣಕ್ಕೆ ಜೈ ಎಂದಿದ್ದ ಸಿದ್ದರಾಮಯ್ಯ: ಬಿಜೆಪಿ ಟೀಕೆ

Date:

2013ರಲ್ಲಿ ರಾಹುಲ್ ಗಾಂಧಿಯವರ ಅತ್ಯಾಪ್ತ ರಘುರಾಂ ರಾಜನ್ ನೇತೃತ್ವದಲ್ಲಿ “ರಾಜ್ಯಗಳ ಸಂಯೋಜಿತ ಅಭಿವೃದ್ಧಿ ಸೂಚ್ಯಂಕವನ್ನು ಅಭಿವೃದ್ಧಿಪಡಿಸುವ ಸಮಿತಿ”ಯ ಶಿಫಾರಸ್ಸಿನ ಮೇಲೆ ಕರ್ನಾಟಕದ ತೆರಿಗೆ ಹಂಚಿಕೆ ಪ್ರಮಾಣವನ್ನು 4.13% ನಿಂದ 3.73% ಕ್ಕೆ ಇಳಿಸಿ, ಕಾಂಗ್ರೆಸ್ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವನ್ನು ಮಾಡಿತ್ತು ಎಂದು ಬಿಜೆಪಿ ಆರೋಪಿಸಿದೆ.

ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಅವರ ಸರಣಿ ಟ್ವೀಟ್‌ಗಳಿಗೆ ಪ್ರತ್ಯುತ್ತರ ನೀಡಿರುವ ರಾಜ್ಯ ಬಿಜೆಪಿ, “ಸರಣಿ ಸುಳ್ಳುಗಾರ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಎಷ್ಟೇ ಅನ್ಯಾಯವಾದರೂ, ತಮ್ಮ ಕುರ್ಚಿ ಉಳಿದರೆ ಸಾಕು ಎಂಬ ಸ್ವಾರ್ಥದ ಕಾರಣಕ್ಕೆ ತೆರಿಗೆ ವಿಕೇಂದ್ರೀಕರಣದ ಕುರಿತು ಅಂದಿನ ಯುಪಿಎ ಸರ್ಕಾರ ಮಂಡಿಸಿದ ಒಪ್ಪಂದಕ್ಕೆ “ಜೈ” ಎಂದಿದ್ದರು” ಎಂದು ಟೀಕಿಸಿದೆ.

“ಸಹಜವಾಗಿ ಅಂದು ಯುಪಿಎ ಸರ್ಕಾರ ನೀಡಿದ ವರದಿಯ ಶಿಫಾರಸುಗಳ ಮೇಲೆ ಹಣಕಾಸು ಆಯೋಗ ಕಾರ್ಯನಿರ್ವಹಿಸಿತು. ಕರ್ನಾಟಕಕ್ಕೆ ಯು.ಪಿ.ಎ ಸಮಯದಲ್ಲಾದ ಅನ್ಯಾಯವನ್ನು ಸರಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕದ ತೆರಿಗೆ ಆದಾಯದ ಪಾಲನ್ನು ಮೂರು ಪಟ್ಟು ಹೆಚ್ಚಿಸುವ ಮೂಲಕ ಹಾಗೂ ಅನುದಾನವನ್ನು ದ್ವಿಗುಣಗೊಳಿಸುವ ಮೂಲಕ, ಕರ್ನಾಟಕಕ್ಕೆ ನ್ಯಾಯ ಒದಗಿಸಿದೆ” ಎಂದು ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಎಂ ಸಿದ್ದರಾಮಯ್ಯರವರೇ ನಿಮಗೆ ನಿಜಕ್ಕೂ ತಾಕತ್ತು, ದಮ್ಮು ಹಾಗೂ ನಿಮ್ಮ ಅಂತರಾಳದಲ್ಲಿ ನಿಜಕ್ಕೂ ಕನ್ನಡಿಗರ ಮೇಲೆ ಮಮತೆಯಿದ್ದರೆ, ಕರ್ನಾಟಕಕ್ಕೆ ಮಹಾದ್ರೋಹ ಮಾಡಿದ ದೆಹಲಿಯ ಎಐಸಿಸಿ ಕಚೇರಿ ಮುಂದೆ ಹಾಗೂ ರಾಹುಲ್ ಗಾಂಧಿಯವರ ಮನೆ ಮುಂದೆ ಪ್ರತಿಭಟಿಸಬೇಕು” ಎಂದು ತಿರುಗೇಟು ನೀಡಿದೆ.

“ನೆಹರು ಗಾಂಧಿ ಕುಟುಂಬದ ಮುಂದೆ ನಡು ಬಗ್ಗಿಸಿ ನಿಲ್ಲುವ ನಿಮಗೆ ಕನ್ನಡಿಗರ ಮೇಲೆ ಮಮತೆಯೂ ಇಲ್ಲ, ಕರ್ನಾಟಕದ ಬಗ್ಗೆ ಒಲವೂ ಇಲ್ಲ, ನಿಮ್ಮದೇನಿದ್ದರೂ ಕುರ್ಚಿ ಉಳಿಸಿಕೊಳ್ಳುವ ಸರ್ಕಸ್ ಹೊರತು ಉಳಿದಿದ್ದೆಲ್ಲವೂ ಬರೀ ಬೊಗಳೆ” ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...