ಒಳ ಮೀಸಲಾತಿ ಜಾರಿ ಮಾಡಿ ಸಿದ್ದರಾಮಯ್ಯ ಬದ್ಧತೆ ಪ್ರದರ್ಶಿಸಲಿ: ಎ ನಾರಾಯಣಸ್ವಾಮಿ ಸವಾಲು

Date:

  • ಅನೇಕ ರಾಜ್ಯಗಳು 341ನೇ ಆರ್ಟಿಕಲ್ ತಿದ್ದುಪಡಿಗೆ ಮನವಿ ಮಾಡಿವೆ
  • ಕಾನೂನು ಅರಿವಿರುವ ಸಿದ್ದರಾಮಯ್ಯ ಬದ್ಧತೆ ಬಗ್ಗೆ ಮಾತನಾಡುತ್ತಾರೆ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಮತ್ತು ಕಾಂತರಾಜು ಆಯೋಗದ ವರದಿ ಅನುಷ್ಠಾನಕ್ಕೆ ತರುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬದ್ಧತೆ ತೋರಿಸಲಿ. ಮತ್ತೊಬ್ಬರ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಸವಾಲು ಎಸೆದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ ಬದ್ಧತೆ ಇದೆ. ನಾವು ಒಳ ಮೀಸಲಾತಿ ಶಿಫಾರಸು ಮಾಡಿ ಕಳುಹಿಸಿದ್ದೇವೆ. ಶೆಡ್ಯೂಲ್ 9ಕ್ಕೆ ಸೇರುವ ಮೊದಲೇ ತಮಿಳುನಾಡಿನಲ್ಲಿ ಒಳಮೀಸಲಾತಿ ಜಾರಿಗೊಳಿಸಿದ್ದರು. ಆಂಧ್ರ ಪ್ರದೇಶದಲ್ಲಿ ಒಳ ಮೀಸಲಾತಿ ಜಾರಿಗೆ ಬಂದ 24 ಗಂಟೆಯಲ್ಲೇ ಆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಕೊಟ್ಟಿದ್ದರು. ಒಳ ಮೀಸಲಾತಿ ಪರಿಣಾಮವಾಗಿ ವಂಚಿತ, ಶೋಷಿತ ಅನೇಕ ವರ್ಗಕ್ಕೆ ಉದ್ಯೋಗ, ಶಿಕ್ಷಣಾವಕಾಶ ಲಭಿಸಿತ್ತು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿಗೆ ಬದ್ಧತೆ ಇದ್ದರೆ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಶೋಷಿತರಿಗೆ ನ್ಯಾಯ ನೀಡಿದ ಮಾದರಿಯಲ್ಲಿ ಕೊಡುವ ಎದೆಗಾರಿಕೆ ತೋರಿಸಬೇಕು. ಅದಕ್ಕಾಗಿ ವಿಶೇಷ ಅಧಿವೇಶನ ಕರೆದು ಜಾರಿ ಮಾಡಿ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಟಿಕಲ್ 341 ತಿದ್ದುಪಡಿ ಆಗಬೇಕು. ರಾಜ್ಯಗಳಿಂದ ಇದಕ್ಕೆ ಉತ್ತರ ಬೇಕಿತ್ತು. ಶೂನ್ಯ ಎಸ್‍ಸಿ ಜನಸಂಖ್ಯೆ ಇರುವ ರಾಜ್ಯಗಳು ಋಣಾತ್ಮಕ ಉತ್ತರ ನೀಡಿವೆ. 7 ರಾಜ್ಯಗಳು ಪರವಾಗಿವೆ. ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಎಎಪಿಯ ಮಹಾ ಘಟಬಂಧನ್ ಸದಸ್ಯರು ತಿದ್ದುಪಡಿ ವಿರೋಧಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನಿಮ್ಮದೇ ಸರ್ಕಾರವಿದ್ದು, ವಿರೋಧಿಸಿದ್ದಾರೆ. ಘಟಬಂಧನ್ ಸದಸ್ಯರಾದ ಪಶ್ಚಿಮ ಬಂಗಾಲ ಸರ್ಕಾರ ವಿರೋಧಿಸಿದೆ. ಸಿದ್ದರಾಮಯ್ಯ ಅವರು ಒಳ ಮೀಸಲಾತಿಗೆ ಒಪ್ಪಿಗೆ ಕೊಡಿಸಲು ಆ ರಾಜ್ಯಗಳ ಸಿಎಂಗಳ ಜೊತೆ ಚರ್ಚಿಸಬೇಕು. ವಿಶೇಷ ಅಧಿವೇಶನ ಕರೆದು ಒಳ ಮೀಸಲಾತಿಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.

ಕಾನೂನು ತಿಳಿದಿರುವ ವಕೀಲರಾಗಿದ್ದ ಸಿದ್ದರಾಮಯ್ಯ ಅವರು ಬಿಜೆಪಿ ಬದ್ಧತೆ ಮಾತನಾಡುತ್ತಾರೆ. ಚುನಾವಣಾ ಪೂರ್ವದಲ್ಲಿ ಒಂದು ಸಭೆಯಲ್ಲಿ, ಪ್ರಣಾಳಿಕೆಯಲ್ಲಿ ಒಳ ಮೀಸಲಾತಿಯ ಬದ್ಧತೆ ಬಗ್ಗೆ ತಿಳಿಸಿದ್ದರು. ಒಳ ಮೀಸಲಾತಿ ಜಾರಿ ಮಾಡಿ ತೀರುತ್ತೇವೆ ಎಂದು 25 ರಿಂದ 30 ಸಾವಿರ ಜನರಿದ್ದ ಸಭೆಯ ವೇದಿಕೆ ಮೇಲೆ ಹೇಳಿದ್ದರು. ಬಳಿಕ ಕೆಳಗಿಳಿದು ಐದು ನಿಮಿಷದಲ್ಲಿ ಇತರ ಸಮಾಜದವರು ಕೇಳಿದಾಗ ‘ನಾನು ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಜಾರಿ ಮಾಡುವುದಿಲ್ಲ. ಸಿಎಂ ಆಗಿದ್ದಾಗ ನಾನು ಮಾಡಲಿಲ್ಲ. ನೀವು ಹೆದರಬೇಡಿ’ ಎಂದಿದ್ದರು ಎಂದು ಆರೋಪಿಸಿದರು.

ಸಂಸತ್ತಿನಲ್ಲಿ ಪ್ರಶ್ನೆಗೆ ನೀಡಿದ ಉತ್ತರದ ವಿಚಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಬಿಜೆಪಿ ಬೂಟಾಟಿಕೆ ಬಯಲಾಗಿದೆ ಎಂದಿದ್ದಾರೆ. ಎಸ್‍ಸಿಗಳಿಗೆ ಒಳ ಮೀಸಲಾತಿ ಸಂಬಂಧ ಈಗ ಸಂವಿಧಾನದ 341ನೇ ಆರ್ಟಿಕಲ್‍ನಡಿ ಏನು ಹೇಳುತ್ತದೆ ಎಂಬುದನ್ನು ಸಚಿವನಾಗಿ ತಿರುಚಿ ಹೇಳುವಂತಿಲ್ಲ. ತಿರುಚಿ ಹೇಳುವ ಮನೋಭೂಮಿಕೆಯೂ ನನ್ನದಲ್ಲ. ಈಗಿನ ಸ್ಥಿತಿ ಬಗ್ಗೆ ನಾನು ಉತ್ತರಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಒಳ ಮೀಸಲಾತಿಯನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರವು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಮಾಧುಸ್ವಾಮಿ ನೇತೃತ್ವದ ಸಮಿತಿಗೆ ಒಳ ಮೀಸಲಾತಿ ಬಗ್ಗೆ, ಸದಾಶಿವ ಆಯೋಗ, ಇತರ ಆಯೋಗಗಳ ವರದಿಗಳ ಕುರಿತು ಸಂಕ್ಷಿಪ್ತವಾಗಿ ಅಧ್ಯಯನ ನಡೆಸಿ ವರದಿ ಕೊಡಲು ತಿಳಿಸಲಾಗಿತ್ತು. ಅದು ನೀಡಿದ ವರದಿಯಡಿ ತಿಳಿಸಿದಂತೆ ಮೀಸಲಾತಿ ಪ್ರಮಾಣವನ್ನು ಶೇ 15ರಿಂದ ಶೇ 17ರಷ್ಟು ಏರಿಕೆ ಮಾಡಿ , 6, 5.5, 4.5, 1 ಶೇಕಡಾವನ್ನು ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಅದರಂತೆ ಕೇಂದ್ರ ಸರ್ಕಾರಕ್ಕೆ 341ನೇ ಆರ್ಟಿಕಲ್ ತಿದ್ದುಪಡಿ ಮಾಡಲು ಶಿಫಾರಸು ಮಾಡಿದ್ದರು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ʻಸದ್ಯದ ಸ್ಥಿತಿಯಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲʼ: ಕೇಂದ್ರ ಸಚಿವರ ಪ್ರತಿಕ್ರಿಯೆಗೆ ಹೋರಾಟಗಾರರ ಆಕ್ರೋಶ

ರಾಜ್ಯ ಸರ್ಕಾರವು ರಾಜ್ಯಪಾಲರ ಶಿಫಾರಸಿನೊಂದಿಗೆ ಕಳುಹಿಸಿತ್ತು. ರಾಜ್ಯದ ಒಳಮೀಸಲಾತಿಗೆ ಬದ್ಧತೆ ಇದೆ ಎಂದು ಕೇಂದ್ರ ಗೃಹ ಸಚಿವರೂ ಹೇಳಿದ್ದಾರೆ. ಅನೇಕ ರಾಜ್ಯಗಳು ಸಹ 341ನೇ ಆರ್ಟಿಕಲ್ ತಿದ್ದುಪಡಿ ಮಾಡಲು ಮನವಿ ಮಾಡಿವೆ. ಆಂಧ್ರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ ಸರ್ಕಾರಗಳೂ ಇಂಥ ಮನವಿ ಮಾಡಿದ್ದವು. ಈ ನಡುವೆ ಆಂಧ್ರದ ಹೈಕೋರ್ಟಿನಲ್ಲಿ ಮೀಸಲಾತಿ ಅವಶ್ಯಕತೆ ಕುರಿತು ತೀರ್ಪು ಬಂದಿತ್ತು. ಸುಪ್ರೀಂ ಕೋರ್ಟ್‌ ಒಳ ಮೀಸಲಾತಿ ಸಾಧ್ಯವಿಲ್ಲ ಎಂದಿತ್ತು ಎಂದು ತಿಳಿಸಿದರು.

ಪಂಜಾಬ್‍ನ ಇನ್ನೊಂದು ಕೇಸಿನಲ್ಲಿ 5 ಸದಸ್ಯರ ಸಂವಿಧಾನ ಪೀಠವು ವಿಸ್ತೃತವಾದ ಚರ್ಚೆಯ ಬಳಿಕ ಕೇವಲ ಕರ್ನಾಟಕದ ಒಳ ಮೀಸಲಾತಿ ಅಲ್ಲದೇ ದೇಶದಲ್ಲಿ ಮತ್ತೊಮ್ಮೆ ಮೀಸಲಾತಿ ಪರಿಷ್ಕರಣೆ ಆಗಬೇಕಿದೆ ಎಂದು ತಿಳಿಸಿತ್ತು. ಮೀಸಲಾತಿ ಸಿಗಬೇಕಾದ ಜನತೆಗೆ ಸಿಗುತ್ತಿಲ್ಲ. ಸಂವಿಧಾನದ ಆಶೋತ್ತರಗಳಡಿ, ಶೋಷಿತರಿಗೆ ಮೀಸಲಾತಿ ತಲುಪುತ್ತಿಲ್ಲ. ಆದ್ದರಿಂದ ಹಿಂದಿನ ತೀರ್ಪಿನ ಬಗ್ಗೆ ಹೇಳಿಕೆ ಕೊಡಲು ಅಸಾಧ್ಯ. 7 ಸದಸ್ಯರ ಅಥವಾ ದೊಡ್ಡ ಪೀಠ ರಚಿಸಿ ಅದಕ್ಕೆ ಕೇಸನ್ನು ವರ್ಗಾಯಿಸಲು ತಿಳಿಸಿದ್ದರು. ಅದನ್ನು ನಾನು ಪ್ರಸ್ತಾಪಿಸಿದ್ದೇನೆ ಎಂದರು.

ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಹಾಲಪ್ಪ ಆಚಾರ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಹಿರಿಯ ಮುಖಂಡ ಸಚ್ಚಿದಾನಂದಮೂರ್ತಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...