ಸಿದ್ದರಾಮಯ್ಯ ಅವರ ಪ್ರಜಾಪ್ರಭುತ್ವ ಕಾಳಜಿ ಜಾಹೀರಾತಿಗಷ್ಟೇ ಸೀಮಿತ: ಹೆಚ್‌ ಡಿ ಕುಮಾರಸ್ವಾಮಿ

Date:

ರಾಜ್ಯ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮಾನವ ಸರಪಳಿ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡಿದೆ” ಎಂದು ಟೀಕಿಸಿದ್ದಾರೆ.

“ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ ನಾಲ್ಕು ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಜಗಮಗಿಸುತ್ತಿದೆ! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?: ಆರ್‌ ಅಶೋಕ್‌ ಆರೋಪ

“ವಿಚ್ಚಿದ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ” ಎಂದು ಪ್ರಶ್ನಿಸಿದ್ದಾರೆ.

“ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ” ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...