ಸಿಂಗಲ್ ಇಂಜಿನ್ 40% ಆದರೆ ಡಬಲ್ ಇಂಜಿನ್ 80% ಆಯ್ತು : ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

Date:

  • ಬಿಜೆಪಿ ನಾಯಕರೇ ಸುಳ್ಳು ಹೇಳಬೇಡಿ
  • ಬಿಜೆಪಿಯಿಂದ ರಾಜ್ಯದ ಕೀರ್ತಿ ನೆಲಕಚ್ಚಿದೆ

ರಾಜ್ಯದಲ್ಲಿರುವುದು ಸಿಂಗಲ್ ಇಂಜಿನ್ 40% ಆದರೆ, ಡಬಲ್ ಇಂಜಿನ್ 80% ಆಯ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, “ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ. ಒಂದು ಇಂಜಿನ್ ಅಂತೂ 40 ಪರ್ಸೇಂಟ್ ನಿಂದ ಕೆಟ್ಟು ನಿಂತಿದೆ. ಇದರಿಂದ ಮತ್ತೊಂದು ಇಂಜಿನ್ ಕೂಡ ವಿಳಂಬವಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರು ತಾವು ಮಾಡಿರುವ ಅಭಿವೃದ್ಧಿ ಕುರಿತು ಮಾತನಾಡುವಂತೆ ಸವಾಲು ಹಾಕಿರುವ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿ ನಾಯಕರೇ, ಜನರಿಗೆ ಸುಳ್ಳು ಹೇಳಬೇಡಿ. ನೀವು ಮಾಡಿರುವ ಕೆಲಸಗಳ ಬಗ್ಗೆ ಮಾತನಾಡಿ. ಮಾಡದೆ ಇರುವ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾ ಜನರ ದಿಕ್ಕು ತಪ್ಪಿಸಬೇಡಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಿ ಮೋದಿ ಅವರು ಉದ್ಘಾಟಿಸುತ್ತಿರುವ ರೈಲುಗಳು ಕುರಿತು, “ನಾನು ರೈಲ್ವೆ ಸಚಿವನಾಗಿದ್ದಾಗ 37 ರೈಲುಗಳ ಸಂಚಾರಕ್ಕೆ ಒಂದೇ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ಅದರಲ್ಲಿ ಬೆಂಗಳೂರು-ವಾರಣಾಸಿ ಸೇರಿದಂತೆ ಹಲವು ಯೋಜನೆಗಳಿದ್ದವು” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಅವಧಿಯಲ್ಲಿ ಆಗಿರುವ ಕೆಲಸಗಳ ಕುರಿತು ಬಿಜೆಪಿಯವರು ಹೇಳುವುದಿಲ್ಲ. ಎಲ್ಲವನ್ನೂ ತಮ್ಮದೆಂದು ಹೇಳಿಕೊಳ್ಳುತ್ತಾರೆ” ಎಂದು ಆರೋಪಿಸಿದ್ದಾರೆ.

“ರಾಜ್ಯದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗದು ಎಂದು ಇಡೀ ದೇಶಕ್ಕೆ ಗೊತ್ತಾಗಿದೆ. ಈ ಮೊದಲು ನಮ್ಮ ರಾಜ್ಯ ಅಭಿವೃದ್ಧಿ ಮತ್ತು ಉತ್ತಮ ಆಡಳಿತಕ್ಕೆ ಹೆಸರುವಾಸಿ ಆಗಿತ್ತು. ಆದರೆ, ಈ ಬಿಜೆಪಿಯಿಂದ ಆ ಕೀರ್ತಿ ನೆಲಕಚ್ಚಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

“ಪ್ರಧಾನಿ ಮೋದಿ ಈ ಹಿಂದೆ ನಾನು ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎನ್ನುತ್ತಿದ್ದರು. ಆದರೆ, ಈಗ ತಿನ್ನುವವರ ಬೆನ್ನಿಗೆ ಅವರೇ ನಿಂತಿರುವಂತೆ ವರ್ತಿಸುತ್ತಿದ್ದಾರೆ. ಭ್ರಷ್ಟಾಚಾರದ ಆರೋಪ ಅಷ್ಟು ದೊಡ್ಡದಾಗಿ ಕೇಳಿ ಬಂದಾಗಲೂ ಪ್ರಧಾನಿ, ಅಮಿತ್ ಶಾ ಏಕೆ ಸುಮ್ಮನಿದ್ದಾರೆ. ಸಿಬಿಐ, ಇಡಿ, ಐಟಿ ದಾಳಿ ಏಕೆ ನಡೆಯುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ನಿರುದ್ಯೋಗದ ಕುರಿತು ಮಾತನಾಡಿ, “ರಾಜ್ಯದಲ್ಲಿ 25 ಲಕ್ಷ ಪದವೀಧರ ಯುವಕರಿಗೆ ನೌಕರಿ ಸಿಗುತ್ತಿಲ್ಲ. ದೇಶದಲ್ಲಿ ಸುಮಾರು 100 ಕೋಟಿ ಜನ ಅನಕ್ಷರಸ್ಥ ನಿರುದ್ಯೋಗಿಗಳಿದ್ದಾರೆ. ಅವರ ಬಗ್ಗೆ ಕೇಂದ್ರವಾಗಲಿ, ರಾಜ್ಯ ಸರ್ಕಾರವಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ” ಎಂದಿದ್ದಾರೆ.

“ಬಿಜೆಪಿ ಶಾಸಕರು ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆದರೂ ಮೋದಿ ಅವರು ಚಕಾರ ಎತ್ತುವುದಿಲ್ಲ. ಅದೇ ಬೇರೆ ಪಕ್ಷದವರ ಬಗ್ಗೆ ಪದೇ ಪದೇ ಬೆರಳು ಮಾಡಿ ಸುಳ್ಳು ಹೇಳುತ್ತಾರೆ” ಎಂದು ಟೀಕಿಸಿದ್ದಾರೆ.

“ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತದೆ. ಈ ಪೈಕಿ ಶೇ.10ರಷ್ಟನ್ನು ಕೇಂದ್ರ ಸರ್ಕಾರ ವಾಪಸ್ ನೀಡುತ್ತಿಲ್ಲ. ಬಂಡವಾಳ ಹೂಡಿಕೆ ವಿಷಯವಾಗಿಯೂ ರಾಜ್ಯಕ್ಕೆ ಕೇಂದ್ರ ಸರ್ಕಾರ ನೆರವು ನೀಡುತ್ತಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...