ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌: ಸಿಪಿಎಂ ಆರೋಪ

Date:

ಬಿಹಾರ ಚುನಾವಣೆಯಲ್ಲಿನ ಸೋಲಿನ ಬಗ್ಗೆ ತನ್ನ ಮಿತ್ರಪಕ್ಷಗಳಿಗಿಂತ ಸೂಕ್ಷ್ಮವಾಗಿ ಕೊಂಚ ಭಿನ್ನ ನಿಲುವನ್ನು ಹೊಂದಿರುವ ಸಿಪಿಎಂ, ಬಿಜೆಪಿ ವಿರುದ್ಧ ಜಂಟಿಯಾಗಿ ಹೋರಾಟ ನಡೆಸದೆ ಇರುವುದೇ ಎನ್‌ಡಿಎ ಗೆಲುವಿಗೆ ಕಾರಣವಾಗಿರಬಹುದು ಎಂದು ಹೇಳಿದೆ. ಹಾಗೆಯೇ ಚುನಾವಣೆ ಫಲಿತಾಂಶದ ಮೇಲೆ ಚುನಾವಣಾ ಆಯೋಗದ ಪಕ್ಷಪಾತ ವರ್ತನೆ ಮತ್ತು ಹಠಾತ್ ಆಗಿ ನಡೆಸಲಾದ ಎಸ್‌ಐಆರ್‌ ಪ್ರಕ್ರಿಯೆಯ ಪಾತ್ರವಿದೆಯೇ ಎಂದು ಪರಿಶೀಲಿಸುವುದಾಗಿ ಹೇಳಿದೆ. “ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌” ಎಂದು ಸಿಪಿಎಂ ಆರೋಪಿಸಿದೆ.

12 ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ಬಿಜೆಪಿ-ಆರ್‌ಎಸ್‌ಎಸ್‌ನ ಯೋಜನೆಯಾಗಿದ್ದು ಅದನ್ನು ಜನರು ಒಪ್ಪಿಕೊಳ್ಳುವ ಚುನಾವಣಾ ಆಯೋಗದ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಲಕ್ಷಾಂತರ ಮತದಾರರ ಹಕ್ಕನ್ನು ಕಸಿಯುವ ಉದ್ದೇಶವನ್ನು ಇದು ಹೊಂದಿದೆ ಎಂದು ದೂರಿದೆ.

ಇದನ್ನು ಓದಿದ್ದೀರಾ? ಬಿಹಾರ | ಬೂತ್ ಮಟ್ಟದ ಪರಿಶೀಲನೆ: ಬಟಾಬಯಲಾದ ಚುನಾವಣಾ ಆಯೋಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ ಚುನಾವಣೆಗಳು, ಎಸ್‌ಐಆರ್ ಮತ್ತು ಇತರ ರಾಜಕೀಯ ಬೆಳವಣಿಗೆಗಳ ಬಗ್ಗೆ ಶನಿವಾರ, ಭಾನುವಾರ ಸಿಪಿಎಂ ಪಾಲಿಟ್ ಬ್ಯುರೋದ ಎರಡು ದಿನಗಳ ಸಭೆ ನಡೆದಿದೆ. ಇಂಡಿಯಾ ಒಕ್ಕೂಟದ ಒಗ್ಗಟ್ಟಿನ ಕೊರತೆಯು ಇನ್ನಷ್ಟು ಸಂಕಷ್ಟಕ್ಕೆ ಕಾರಣವಾಗಬಹುದು ಎಡಪಕ್ಷದ ಉನ್ನತ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಸಭೆಯ ನಂತರ ಹೊರಡಿಸಲಾದ ಪ್ರಕಟಣೆಯಲ್ಲಿ, 2024ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಎನ್‌ಡಿಎ ಹೆಚ್ಚಿನ ಮತಗಳನ್ನು ಗಳಿಸಿಲ್ಲ. ಆದರೆ ಸ್ಥಾನಗಳ ಸಂಖ್ಯೆ ಹೆಚ್ಚಾಗಿದೆ. ಎನ್‌ಡಿಎ ಇಡೀ ರಾಜ್ಯ ಯಂತ್ರೋಪಕರಣವನ್ನು ಬಳಸಿಕೊಂಡಿದೆ. ಬೃಹತ್ ಪ್ರಮಾಣದ ಹಣವನ್ನು ಬಳಸಿದೆ. ಬಿಹಾರದ ಹೊರಗಿನಿಂದ ಕಾರ್ಯಕರ್ತರನ್ನು ಕರೆಸಿಕೊಂಡಿತ್ತು. ಜತೆಗೆ ಎನ್‌ಡಿಎ ನಾಯಕರು ಕೋಮು ಧ್ರುವೀಕರಣದಿಂದ ಲಾಭ ಪಡೆಯುತ್ತಿದ್ದಾರೆ ಎಂದು ಹೇಳಿದೆ.

ಸಿಪಿಐಎಂ ಚುನಾವಣೆ ಫಲಿತಾಂಶದ ಮೇಲೆ ಎಸ್‌ಐಆರ್ ಪ್ರಭಾವದ ಬಗ್ಗೆ ಪರಿಶೀಲಿಸುವುದಾಗಿ ಹೇಳಿರುವಾಗ ಕಾಂಗ್ರೆಸ್ ಮತ್ತು ಸಿಪಿಐ(ಎಂಎಲ್)ಎಲ್ ಮತ ಕಳವು ಮತ್ತು ಎಸ್‌ಐಆರ್ ಈ ಸೋಲಿಗೆ ಕಾರಣ ಎಂದು ಆರೋಪಿಸಿದೆ.

ಬಿಹಾರದಲ್ಲಿ ಸಿಪಿಐಎಂ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿ ಒಂದು ಸ್ಥಾನವನ್ನು ಗೆದ್ದಿದೆ. ಭಿಬೂತಿಪುರದಲ್ಲಿ ಅಜಯ್ ಕುಮಾರ್ ಜಯ ಸಾಧಿಸಿದ್ದಾರೆ. ಒಟ್ಟಾರೆಯಾಗಿ ಸಿಪಿಐಎಂ ಶೇ.0.60ರಷ್ಟು ಮತ ಗಳಿಸಿದೆ. 2020ರಲ್ಲಿ ಸಿಪಿಐ(ಎಂ) ಸ್ಪರ್ಧಿಸಿದ ನಾಲ್ಕು ಸ್ಥಾನಗಳಲ್ಲಿ ಎರಡನ್ನು ಗೆದ್ದು ಶೇ.0.65ರಷ್ಟು ಮತಗಳನ್ನು ಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...