ಐರಾವತ ಬಸ್‌ನಲ್ಲಿ ಮಗುವಿನಂತೆ ಮಲಗಿ ಅಲ್ಲ, ‘ಚುನಾವಣಾ ಆಯೋಗ’ದಂತೆ ಮಲಗಿ!

Date:

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಐರಾವತ ಬಸ್ ಸೇವೆಯ ಧ್ಯೇಯವಾಕ್ಯ ಮಗುವಿನಂತೆ ಮಲಗಿ ಎಂಬುವುದನ್ನು ಕೊಂಚ ತಿರುಚಿ ಕೇರಳ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಗೇಲಿ ಮಾಡಿದೆ.

ಈ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿರುವ ಕೇರಳ ಕಾಂಗ್ರೆಸ್ “ಕರ್ನಾಟಕ ಆರ್‌ಟಿಸಿ ನೀವು ‘ಇಸಿಐನಂತೆ ಮಲಗಬಹುದಾದ’ ಹೊಸ ಐಷಾರಾಮಿ ಕೋಚ್‌ಗಳನ್ನು ಬಿಡುಗಡೆ ಮಾಡುವ ಯೋಜನೆಯನ್ನು ಹೊಂದಿದೆ ಎಂಬ ಮಾಹಿತಿ ನಮಗೆ ಲಭಿಸಿದೆ! ಇದು ನಿಜವೇ” ಪರೋಕ್ಷವಾಗಿ ಚುನಾವಣಾ ಆಯೋಗವನ್ನು ಲೇವಡಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಕ್ಸ್‌ ಪೋಸ್ಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಈ ಪೋಸ್ಟ್‌ ಅನ್ನು ಟೀಕೆ ಮಾಡಿ ಕಾಮೆಂಟ್ ಮಾಡಿದರೆ, ಇನ್ನು ಕೆಲವರು ಕೇರಳ ಕಾಂಗ್ರೆಸ್‌ನ ಹಾಸ್ಯ ಪ್ರಜ್ಞೆಯನ್ನು ಮೆಚ್ಚುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಕರ್ನಾಟಕದ ನೆಟ್ಟಿಗರು ಇದು ಕರ್ನಾಟಕ ಆರ್‌ಟಿಸಿ ಅಲ್ಲ, ಕೆಎಸ್‌ಆರ್‌ಟಿಸಿ ಎಂದೂ ಕೂಡಾ ಕಾಮೆಂಟ್ ಮಾಡಿದ್ದಾರೆ. “ನಿಮ್ಮ ಪೋಸ್ಟ್ ಚೆನ್ನಾಗಿದೆ. ಆದರೆ ಅದು ಕರ್ನಾಟಕ ಆರ್‌ಟಿಸಿ ಅಲ್ಲ, ಕೆಎಸ್‌ಆರ್‌ಟಿಸಿ” ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

“ಚುನಾವಣಾ ಆಯೋಗ ನಿದ್ರಿಸಿರುವಂತೆ ನಟಿಸಬಹುದು ಮತ್ತು ಬಿಜೆಪಿಯು ಕ್ಷಣಿಕ ನಿಟ್ಟುಸಿರು ಬಿಡಬಹುದು. ಆದರೆ ಈ ದೇಶದಲ್ಲಿ ಅಸಹ್ಯ ದಂಗೆಕೋರರ ಕಾಲರ್‌ ಹಿಡಿಯಲು ಕರ್ತವ್ಯ ಬದ್ಧ ಮತ್ತು ಜಾಗರೂಕ ಶಕ್ತಿಗಳಿವೆ” ಎಂದು ಕೇರಳ ಕಾಂಗ್ರೆಸ್ ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

ಇದನ್ನು ಓದಿದ್ದೀರಾ?  ಮುಸ್ಲಿಮರು, ಕಾಂಗ್ರೆಸರನ್ನು ಗುರಿಯಾಗಿಸುವ ಬಿಜೆಪಿಯ ವಿಡಿಯೋ ಅಳಿಸುವಂತೆ ‘ಎಕ್ಸ್’ಗೆ ಚುನಾವಣಾ ಆಯೋಗ ನಿರ್ದೇಶನ

ವಿವಾದಾದತ್ಮಕ ಪೋಸ್ಟ್‌ ಸಂಬಂಧ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲವಿಯಾರಿಗೆ ಕರ್ನಾಟಕ ಪೊಲೀಸ್ ಸಮನ್ಸ್ ನೀಡಿದ ವರದಿಯನ್ನು ಉಲ್ಲೇಖಿಸಿ ಕೇರಳ ಕಾಂಗ್ರೆಸ್ ಈ ಪೋಸ್ಟ್ ಮಾಡಿದೆ.

ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಬಿಜೆಪಿ ನಾಯಕರ ದ್ವೇಷ ಭಾಷಣದ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಸರಿಯಾದ ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಚುನಾವಣಾ ಆಯೋಗದ ಈ ನಡೆಯನ್ನು ನಿರಂತರವಾಗಿ ಟೀಕಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...