ಸಿದ್ದರಾಮಯ್ಯರನ್ನು ಸರ್ವೋಚ್ಚ ನಾಯಕ ಎಂದ ಸೋಮಣ್ಣ; ಮತ್ತೆ ಗರಿಗೆದರಿದ ಹೊಸ ಲೆಕ್ಕಾಚಾರ

Date:

  • ಹಿಂದೆ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪರ ನಾನು ಕೆಲಸ ಮಾಡಿದ್ದೆ
  • ಅಮಿತ್ ಶಾ ಸೂಚನೆಯಂತೆ ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿದ್ದೇನೆ

    ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ವೋಚ್ಛ ನಾಯಕರು, ರಾಜ್ಯದ ದೊಡ್ಡ ಲೀಡರ್, ಅವರು ಎಲ್ಲಿ ನಿಲ್ಲಬೇಕು ಎಂಬುದು ಅವರ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅದರ ಬಗ್ಗೆ ನಾನೇನೂ ಮಾತನಾಡುವುದಿಲ್ಲ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದರು.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಣ್ಣ, “ನನ್ನ ಪಕ್ಷ ನನಗೆ ಹಲವು ಜವಾಬ್ದಾರಿಗಳನ್ನು ನೀಡಿದೆ. ಪಕ್ಷದ ಮುಖಂಡರಾದ ಅಮಿತ್ ಶಾ ಚಾಮರಾಜನಗರ ಜಿಲ್ಲೆಯಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಾರ್ಯನಿರ್ವಹಿಸುತ್ತಿರುವೆ” ಎಂದು ಹೇಳಿದರು.

    ಇದೇ ವೇಳೆ ಸಿದ್ದರಾಮಯ್ಯ ಎದುರು ಸೋಮಣ್ಣ ಸ್ಪರ್ಧಿಸಲಿದ್ದಾರೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಎದುರು ಸ್ಪರ್ಧಿಸುವ ಸಮರ್ಥ ಅಭ್ಯರ್ಥಿಗಳಿದ್ದಾರೆ. ನಾನು ಬೇರೆಯವರ ರೀತಿ ಏನೇನೋ ಮಾತನಾಡಲ್ಲ, ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಚಾಮರಾಜನಗರಕ್ಕೆ ಹೋಗಿ ಕೆಲಸ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ಹೀಗಿರುವಾಗ ನಾನ್ಯಾಕೆ ವರುಣಾಗೆ ಹೋಗಿ ನಿಲ್ಲಲಿ, ಎಂದು ಪ್ರಶ್ನಿಸಿದರು.

    ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

    ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

    ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

    ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

    ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

    ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

    ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

    ನನಗೆ ಪಕ್ಷ ಏನೇ ಕೆಲಸ ಕೊಟ್ಟರೂ ಮಾಡುತ್ತೇನೆ. ಹಿಂದೆ ಕಾಂಗ್ರೆಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಪ ಚುನಾವಣೆಗೆ ನಿಂತಾಗ ನಾನು ಕೆಲಸ ಮಾಡಿದ್ದೆ. 42 ಬೂತ್ ಜವಾಬ್ದಾರಿ ತೆಗೆದುಕೊಂಡಿದ್ದೆ. ಚುನಾವಣೆಯಲ್ಲಿ ಶಕ್ತಿಗಿಂತ ಅದೃಷ್ಟ ಮುಖ್ಯ, ಅದಕ್ಕಿಂತ ಮುಖ್ಯವಾಗಿ ಸಿದ್ದರಾಮಯ್ಯ ರಾಜ್ಯದಲ್ಲಿ ಸರ್ವೋಚ್ಚ ನಾಯಕರು ಎಂದು ಸೋಮಣ್ಣ ತಿಳಿಸಿದರು.

    ಇದೇ ವೇಳೆ ತಮ್ಮ ಸ್ಪರ್ಧಾ ಕ್ಷೇತ್ರದ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದ ಸೋಮಣ್ಣ, ನಾನು ಹನೂರು ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದರೆ ಯಾರೂ ಬೇಡ ಎನ್ನಲ್ಲ. ಸದ್ಯ ನನಗೆ ಗೋವಿಂದರಾಜ ನಗರ ಕ್ಷೇತ್ರವಿದೆ ಎಂದರು.

    e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

    ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

    ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

    ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

    ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

    ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

    ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

    ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...