ತುರ್ತು ಪರಿಸ್ಥಿತಿ ಹೇರಿದ್ದರ ಬಗ್ಗೆ ಈಗ ಸೋನಿಯಾ, ರಾಹುಲ್ ದೇಶದ ಕ್ಷಮೆ ಕೇಳಲಿ: ಆರ್‌ ಅಶೋಕ್

Date:

‌ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿ ಪ್ರತಿಭಟನೆ ಮತ್ತು ಪೋಸ್ಟರ್‌ ಅಭಿಯಾನ ನಡೆಸಿತು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಈ ವೇಳೆ ಮಾತನಾಡಿ, “ತುರ್ತು ಪರಿಸ್ಥಿತಿ ಹೇರಿದ್ದರ ಬಗ್ಗೆ ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಬೇಕು. ತುರ್ತು ಪರಿಸ್ಥಿತಿಯಿಂದ ದೇಶಕ್ಕೆ ದ್ರೋಹ ಬಗೆದಿದ್ದೇವೆ. ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ” ಎಂದು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದರು.

“ಕಾಂಗ್ರೆಸ್‌ನವರು ಬಿಜೆಪಿಯೇ ಸಂವಿಧಾನ ಬದಲಿಸುತ್ತಿದೆ ಎಂದು ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ. ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ರಾಮಲೀಲಾ ಮೈದಾನಕ್ಕೆ ಬಂದು ದೇಶದ ಮುಂದೆ ತಲೆಬಾಗಿ ನಿಂತು, ದೇಶದ ಜನರ ಮುಂದೆ ತಲೆಬಗ್ಗಿಸಿ, ನಾವು ಸಂವಿಧಾನಕ್ಕೆ ಅಪಚಾರ ಮಾಡಿದ್ದಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

“ತುರ್ತು ಪರಿಸ್ಥಿತಿಯಲ್ಲಿ ನನ್ನನ್ನು ಬಂಧಿಯಾಗಿ ಮಾಡಿದ್ದ ಬ್ಯಾರಕ್ ಇನ್ನೂ ಉಳಿದಿದೆ. ಅಲ್ಲಿಂದಲೇ ನಾವೆಲ್ಲರೂ ಪ್ರತಿಭಟನೆ ನಡೆಸುತ್ತಿದ್ದೇವೆ. ದೇಶದ್ರೋಹಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಎಮರ್ಜೆನ್ಸಿ ಎಂದರೆ ಕರಾಳ ದಿನ” ಎಂದರು.

ಪೋ‌ಸ್ಟರ್‌ ಅಭಿಯಾನದಲ್ಲಿ ಸಿ ಎನ್ ಅಶ್ವಥನಾರಾಯಣ್, ಶಾಸಕ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ, ಕೇಶವಪ್ರಸಾದ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...