ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಲೈಂಗಿಕ ದೌರ್ಜನ್ಯದ ಆರೋಪ!

Date:

ದೇಶಾದ್ಯಂತ ಸುದ್ದಿಯಾಗಿದ್ದ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.

“ಸೂರಜ್ ರೇವಣ್ಣ ಅವರು ತನ್ನನ್ನು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ. ಈಗ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತನೋರ್ವ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿರುವುದಾಗಿ ವರದಿಯಾಗಿದೆ.

“ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ನೀಡಿ ಕರೆಸಿಕೊಂಡಿದ್ದರು. ಅವರ ಸಂದೇಶ ನಂಬಿಕೊಂಡು ಅಲ್ಲಿ ತೆರಳಿದ್ದೆ. ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ, ಅವರು ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಜೆಡಿಎಸ್ ಕಾರ್ಯಕರ್ತ ಗಂಭೀರ ಆರೋಪ ಮಾಡಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಅಕಾಡೆಮಿ-ಪ್ರಾಧಿಕಾರಗಳಿಗೆ ಸಮನ್ವಯ ಸಮಿತಿ ರಚನೆ: ಕನ್ನಡ, ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ

ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಯುವಕ ಪೊಲೀಸರ ಬಳಿ ನೀಡಿರುವ ದೂರಿನಲ್ಲಿ ಎಲ್ಲವನ್ನೂ ವಿವರಿಸಿದ್ದಾನೆ. ದೌರ್ಜನ್ಯಕ್ಕೆ ಒಳಗಾದ ಯುವಕನ  ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದಲ್ಲೂ ಗಾಯವಾಗಿದೆ ಎಂದು ವರದಿಯಾಗಿದೆ. ಪೊಲೀಸರು ಹುಡುಗನಿಂದ ದೂರು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ, ವಿಧಾನ ಪರಿಷತ್ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಡಾ. ಸೂರಜ್ ರೇವಣ್ಣ ಅವರ ಪ್ರಕರಣ ಬೆಳಕಿಗೆ ಬಂದಿದ್ದು, ಮುಂದೆ ಏನೇನಾಗಲಿದೆಯೋ ಕಾದು ನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...