ಪ್ರವಾಸಕ್ಕೆ ಬಂದ ಕೇರಳದ ವಿದ್ಯಾರ್ಥಿಗಳಿಗೆ ವಿಧಾನಸೌಧ ವೀಕ್ಷಣೆಗೆ ಅನುವು ಮಾಡಿಕೊಟ್ಟ ಸ್ಪೀಕರ್ ಯು ಟಿ ಖಾದರ್

Date:

ವಿಮಾನ ಯಾನದ ಅನುಭವವನ್ನು ಕಂಡಿರದ ಕೇರಳ ರಾಜ್ಯದ ಕುನ್ನಮಂಗಲಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಮಕ್ಕಳು ಹಾಗೂ ಸ್ಥಳೀಯರು ವಿಧಾನಸೌಧದ ವೀಕ್ಷಣೆಗಾಗಿ ಆಗಮಿಸಿದ ಸಂದರ್ಭದಲ್ಲಿ ಸ್ಪೀಕರ್ ಯು ಟಿ ಖಾದರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಇದೇ ವೇಳೆ ಮಾತನಾಡಿದ ಯು.ಟಿ.ಖಾದರ್, ಕೇರಳದ ಕುನ್ನಮಂಗಲಂ ಗ್ರಾಮ ಪಂಚಾಯಿತಿಯ ಸದಸ್ಯರು ಬಡ ಮಕ್ಕಳು ಹಾಗೂ ಸ್ಥಳೀಯರಿಗೆ ವಿಧಾನಸೌಧದ ವೀಕ್ಷಣೆಗಾಗಿ ಅನುಮತಿ ಕೋರಿ ಪತ್ರವನ್ನು ಬರೆದಿದ್ದರು. ಕರ್ನಾಟಕ ರಾಜ್ಯದ ಪ್ರಮುಖ ಪ್ರವಾಸ ತಾಣವಾದ ವಿಧಾನಸೌಧದ ವೀಕ್ಷಣೆಯನ್ನು ಪ್ರತಿಯೊಬ್ಬರೂ ಮಾಡಲಿ ಎಂದು ಮುಕ್ತವಾಗಿ ಒಪ್ಪಿ, ಅನುಮತಿಯನ್ನು ನೀಡಲಾಯಿತು. ವಿಧಾನಸೌಧದ ಇತಿಹಾಸವನ್ನು ಎಲ್ಲರೂ ಅರಿಯಬೇಕು. ಇತರೆ ರಾಜ್ಯಗಳು ಸೇರಿದಂತೆ ವಿದೇಶದಲ್ಲೂ ಈ ಭವ್ಯ ಸೌಧದ ಕುರಿತು ಮಾಹಿತಿ ಪಸರಿಸಬೇಕು ಎಂದು ಹೇಳಿದರು.

utk 1

ವಿಧಾನಸೌಧದ ವೀಕ್ಷಣೆಗಾಗಿ ಆಗಮಿಸಿದ ಕೇರಳ ರಾಜ್ಯದ ಈ ಬಡಮಕ್ಕಳು ಹಾಗೂ ಸ್ಥಳೀಯರಿಗೆ ಅನುಕೂಲ ಮಾಡಿಕೊಡಲು ಗೈಡ್ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳ ರಾಜ್ಯದ ಕುನ್ನಮಂಗಲಂ ಗ್ರಾಮ ಪಂಚಾಯಿತಿ ಸದಸ್ಯರುಗಳೇ ದೇಣಿಗೆಯ ಮೂಲಕ ಸಂಗ್ರಹಿಸಿದ ಹಣ ಸೇರಿದಂತೆ ಇತರೆ ವಿಶೇಷ ಅನುದಾನದಲ್ಲಿ ವಿಮಾನ ಪ್ರಯಾಣವನ್ನು ಮಾಡದಿರುವ ನೂರೈವತ್ತಕ್ಕೂ ಹೆಚ್ಚು ಬಡ ಮಕ್ಕಳು ಹಾಗೂ ಸ್ಥಳೀಯರಿಗೆ ವಿಮಾನ ಯಾನದ ಉಚಿತ ಪ್ರಯಾಣವನ್ನು ಮಾಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...