ಚನ್ನಪಟ್ಟಣಕ್ಕೆ ₹200 ಕೋಟಿ ವಿಶೇಷ ಅನುದಾನ ತರುವೆ: ಡಿಕೆ ಶಿವಕುಮಾರ್

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸುಮಾರು ₹150 ಕೋಟಿಯಿಂದ ₹200 ಕೋಟಿ ವಿಶೇಷ ಅನುದಾನ ತರುವೆ. ನಿಮಗೆ ಅಭಿವೃದ್ಧಿಯ ಹಸಿವಿನ ಜೊತೆಗೆ ನೋವು ಸಹ ಇದೆ. ಅದನ್ನು ನೀಗಿಸುವ ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಚನ್ನಪಟ್ಟಣ ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, “ಕ್ಷೇತ್ರದ ಹಿಂದಿನ ಶಾಸಕರು ಏನೋ ಲೆಕ್ಕಾಚಾರದ ಮೇಲೆ ನಿಮ್ಮ ಹೃದಯ ಗೆದ್ದಿದ್ದರು. ಈಗ ನಾನು ನಿಮ್ಮ ಹೃದಯ ಗೆಲ್ಲಲು ಬಂದಿದ್ದೇನೆ. ನಮ್ಮ ಕೈ ಬಲಪಡಿಸಿ” ಎಂದು ಮನವಿ ಮಾಡಿದರು.

“ಈ ಬಾರಿ ಚನ್ನಪಟ್ಟಣದಲ್ಲಿ ನಿಮಗೆ ಬೇಕಾದವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಮಾಜಿ ಶಾಸಕರಿಗೆ ನಾವು ಮಾಡುತ್ತಿರುವಂತಹ ಕಾರ್ಯಕ್ರಮಗಳನ್ನು ಮಾಡುವುದರಲ್ಲಿ ಆಸಕ್ತಿ ಇರಲಿಲ್ಲ. ನಾವು ಕನಕಪುರದಲ್ಲೂ ಇದೇ ರೀತಿಯ ಕಾರ್ಯಕ್ರಮ ಮಾಡಿ ಜನರ ಸಮಸ್ಯೆ ಕೇಳಿ ಪರಿಹರಿಸಿದ್ದೆವು. ಅದನ್ನೇ ಇಲ್ಲಿ ಮಾಡುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚನ್ನಪಟ್ಟಣ ಜನತೆ ಜೊತೆ ನನ್ನ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ. ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ. ಬದಲಿಗೆ, ಯಾವಾಗಲೂ ಜೊತೆಗಿರುತ್ತೇನೆ” ಎಂದು ಭರವಸೆ ನೀಡಿದರು.

ಗುಲಾಮಗಿರಿ ಬೇಡ

“ಕುಮಾರಸ್ವಾಮಿ ಅವರು ಅಧಿಕಾರಿಗಳನ್ನು ಗುಲಾಮರು ಎಂದಿದ್ದಾರೆ. ಅಧಿಕಾರಿಗಳು ಯಾರಿಗೂ ಗುಲಾಮರಾಗೋದು ಬೇಡ. ಸರ್ಕಾರದ ಕೆಲಸ ದೇವರ ಕೆಲಸ ಎಂದು ವಿಧಾನಸೌಧದಲ್ಲಿ ಬರೆದಿದೆ. ಅದರಂತೆ, ಅಧಿಕಾರಿಗಳು ಜನರ ಸೇವೆ ಮಾಡಬೇಕು ಎಂದು ಆ ಹುದ್ದೆಗೆ ಬಂದಿದ್ದಾರೆ. ಅವರು ಯಾರಿಗೂ ಗುಲಾಮರಾಗುವುದಿಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದನೆ

ಗ್ರಾಮಕ್ಕೆ ಬಸ್‌ ವ್ಯವಸ್ಥೆ ಸರಿಯಾಗಿಲ್ಲ ಎಂದು ಸಭೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಅಹವಾಲು ಸಲ್ಲಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಸೋಮವಾರದಿಂದ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸ್ಥಳದಲ್ಲಿದ್ದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...