ಸಂಸತ್ ವಿಶೇಷ ಅಧಿವೇಶನ | ಹಿಂದಿ ಕವನ ವಾಚಿಸಿ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Date:

‘ಜಿ 20 ಶೃಂಗಸಭೆಯ’ ಗಣ್ಯರಿಗೆ ಆಯೋಜಿಸಲಾಗಿದ್ದ ಔತಣಕೂಟಕ್ಕೆ ರಾಷ್ಟ್ರಪತಿ ಭವನದಿಂದ ನೀಡಲಾದ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್‌ ಆಫ್‌ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್‌ ಆಫ್‌ ಭಾರತ್‌’ ಎಂದು ಉಲ್ಲೇಖಗೊಂಡ ಬಳಿಕ ಉದ್ಭವಗೊಂಡ ದೇಶದ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ, ಸಂಸತ್ ವಿಶೇಷ ಅಧಿವೇಶನದಲ್ಲಿ ಕೇಂದ್ರಕ್ಕೆ ಹಿಂದಿಯಲ್ಲಿ ಕವನ ವಾಚಿಸುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್ ನೀಡಿದ್ದಾರೆ.

ಹಿಂದಿಯಲ್ಲಿ ಕವನ ವಾಚಿಸಿದ ಮಲ್ಲಿಕಾರ್ಜುನ ಖರ್ಗೆ, ಹೆಸರು ಬದಲಾವಣೆಯಲ್ಲದೆ ನಿರುದ್ಯೋಗ ಸಮಸ್ಯೆ, ದೇಶದಲ್ಲಿ ದ್ವೇಷ ಹೆಚ್ಚುತ್ತಿರುವ ಬಗ್ಗೆ, ಪ್ರಧಾನಿ ಮೋದಿಯವರ ಅಧಿಕಾರದ ಲಾಲಸೆ, ಬೆದರಿಕೆ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಖರ್ಗೆಯವರ ಈ ಕವನಕ್ಕೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನ್‌ಕರ್ ಕೂಡ ಗಮನವಿಟ್ಟು ಕೇಳಿದ್ದು ವಿಶೇಷವಾದರೆ, ವಿಪಕ್ಷಗಳ ಸದಸ್ಯರು, ‘ವಾಹ್, ವಾಹ್’ ಎಂದು ಮೇಜು ಕುಟ್ಟಿ ಮೆಚ್ಚುಗೆ ಸೂಚಿಸಿದರು.

ಸಂಸತ್ತಿನ ವಿಶೇಷ ಅಧಿವೇಶನವು ಹಳೆಯ ಸಂಸತ್ ಕಟ್ಟಡದಲ್ಲಿ ಸೋಮವಾರ ಆರಂಭಗೊಂಡಿದೆ. ನಾಳೆಯಿಂದ(ಸೆ.19) ಹೊಸ ಸಂಸತ್ ಭವನದಲ್ಲಿ ಅಧಿವೇಶನ ಮುಂದುವರಿಯಲಿದೆ. ಸೆ.22ರವರೆಗೆ ವಿಶೇಷ ಅಧಿವೇಶನವು ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಲಿಕಾರ್ಜುನ ಖರ್ಗೆ ವಾಚಿಸಿದ ಹಿಂದಿ ಕವನದ ಕನ್ನಡಾನುವಾದ ಹೀಗಿದೆ

ಬದಲಾಯಿಸುವುದಾದರೆ ಈಗಿನ ಪರಿಸ್ಥಿತಿಯನ್ನು ಬದಲಾಯಿಸಿ,
ಹೀಗೆ ಹೆಸರು ಬದಲಾಯಿಸುವುದರಿಂದ ಏನು ಪ್ರಯೋಜನ?

ಕೊಡುವುದಾದರೆ ಯುವಕರಿಗೆ ಉದ್ಯೋಗ ಕೊಡಿ
ಎಲ್ಲರನ್ನೂ ನಿರುದ್ಯೋಗಿಗಳನ್ನಾಗಿ ಮಾಡುವುದರಿಂದ ಏನು ಪ್ರಯೋಜನ?

ಹೃದಯವನ್ನು ಸ್ವಲ್ಪ ವಿಶಾಲವಾಗಿಸಿ ನೋಡಿ,
ಜನರನ್ನು ಕೊಲ್ಲುವುದರಿಂದ ಏನು ಪ್ರಯೋಜನ?

ಏನೂ ಮಾಡಲು ಸಾಧ್ಯವಾಗದಿದ್ದರೆ, ಕುರ್ಚಿಯನ್ನು ಬಿಟ್ಟು ಬಿಡಿ,
ಮಾತು- ಮಾತಿಗೆ ಹೆದರುವುದರಿಂದ ಏನು ಪ್ರಯೋಜನ?

ನಿಮ್ಮ ಆಡಳಿತದ ಬಗ್ಗೆ ನಿಮಗೆ ಮಾತ್ರ ಹೆಮ್ಮೆ ಇದೆ,
ಜನರನ್ನು ಹೆದರಿಸಿ- ಬೆದರಿಸುವುದರಿಂದ ಏನು ಪ್ರಯೋಜನ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...