ಸಂಸತ್ ವಿಶೇಷ ಅಧಿವೇಶನ | ಹಳೆಯ ಸಂಸತ್ ಕಟ್ಟಡದಲ್ಲಿ ಕೊನೆಯ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ

Date:

  • ಮಂಗಳವಾರ ನೂತನ ಸಂಸತ್ ಭವನಕ್ಕೆ ಸಂಸತ್ ಕಾರ್ಯ ಕಲಾಪಗಳು ವರ್ಗಾವಣೆ
  • ಮಾಜಿ ಪ್ರಧಾನಿಗಳಾದ ನೆಹರೂ, ವಾಜಪೇಯಿ ಸಹಿತ ಹಲವರನ್ನು ಭಾಷಣದಲ್ಲಿ ನೆನೆದ ಮೋದಿ

ಐದು ದಿನಗಳ ಕಾಲ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶನವು ಇಂದು ಸಂಸತ್‌ನ ಹಳೆಯ ಕಟ್ಟಡದಲ್ಲಿ ಆರಂಭವಾಗಿದ್ದು, ಈ ಕಟ್ಟಡದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊನೆಯ ಭಾಷಣಗೈದರು.

ಅಧಿವೇಶನದಲ್ಲಿ ಮಾತನಾಡಿದ ಅವರು, “ಮಂಗಳವಾರದಿಂದ ನೂತನ ಸಂಸತ್ ಭವನಕ್ಕೆ ಸಂಸತ್ತಿನ ಕಾರ್ಯ ಕಲಾಪಗಳು ವರ್ಗಾವಣೆ ಆಗಲಿವೆ. ಹಳೆಯ ಸಂಸತ್ ಭವನವು ಸ್ವಾತಂತ್ರ್ಯ ಸಂಗ್ರಾಮದ ಚಿಹ್ನೆ” ಎಂದು ಹೇಳಿದರು.

“ನಾವೀಗ ನೂತನ ಸಂಸತ್‌ ಭವನಕ್ಕೆ ಸ್ಥಳಾಂತರ ಆಗುವ ಹೊಸ್ತಿಲಲ್ಲಿದ್ದೇವೆ. ಈ ಸಂದರ್ಭದಲ್ಲಿ ನಾವು ಹಳೆಯ ಸಂಸತ್‌ ಭವನದ ಸವಿ ನೆನಪುಗಳು ಹಾಗೂ ಈ ಭವನ ನಮಗೆ ನೀಡಿದ ಸ್ಪೂರ್ತಿಗಳನ್ನು ನೆನಪಿಸಿಕೊಳ್ಳುವ ಸಮಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆ.19ರ ಮಂಗಳವಾರ ನೂತನ ಸಂಸತ್ ಭವನಕ್ಕೆ ಸಂಸದೀಯ ಕಾರ್ಯ ಕಲಾಪಗಳು ಸ್ಥಳಾಂತರ ಆಗಲಿವೆ.

“ಹಳೆಯ ಸಂಸತ್‌ ಭವನವು ಸ್ವಾತಂತ್ರ್ಯ ಪೂರ್ವದಲ್ಲಿ ಸಾಮ್ರಾಜ್ಯಶಾಹಿ ಶಾಸಕಾಂಗ ಭವನವಾಗಿತ್ತು. ಸ್ವಾತಂತ್ರ್ಯಾ ನಂತರ ಈ ಭವನಕ್ಕೆ ಸಂಸತ್‌ ಭವನ ಎಂಬ ಹೊಸ ಅಸ್ತಿತ್ವ ಸಿಕ್ಕಿತು. ನಾವು ಈಗಿರುವ ಹಳೆಯ ಕಟ್ಟಡವನ್ನು ನಿರ್ಮಿಸಿದ್ದು ವಿದೇಶೀ ಆಳ್ವಿಕೆದಾರರು. ಆದರೆ ಈ ಕಟ್ಟಡವನ್ನು ಕಟ್ಟಲು ಬಳಕೆಯಾದ ಹಣ, ಸಂಪನ್ಮೂಲ ಹಾಗೂ ಶ್ರಮ ಎಲ್ಲವೂ ಭಾರತೀಯರದ್ದು” ಎಂದು ಪ್ರಧಾನಿ ಮೋದಿ ಹೇಳಿದರು.

“ಜಿ – 20 ಶೃಂಗಸಭೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದರ ಯಶಸ್ಸು ಇಡೀ ದೇಶಕ್ಕೆ ಸಲ್ಲಬೇಕಾದದ್ದು. ಈ ಶೃಂಗಸಭೆಯಲ್ಲಿ ಭಾರತದ ವೈಭವದ ಅನಾವರಣವಾಯಿತು ಎಂದು ಹೇಳಿದ ಪ್ರಧಾನಿ ಮೋದಿ, ಸಭೆಯ ನಿರ್ಣಯದಲ್ಲಿ ಭಾರತದ ಶಕ್ತಿಯ ಅನಾವರಣವೂ ಆಗಿದೆ ಎಂದು ಹೇಳಿದರು

ಹಳೆಯ ಸಂಸತ್ ಭವನಕ್ಕೆ ವಿದಾಯ ಹೇಳುತ್ತಿರುವುದು ನಿಜಕ್ಕೂ ಭಾವನಾತ್ಮಕ ಸನ್ನಿವೇಶ. ಈ ಕಟ್ಟಡದ ಜೊತೆ ಸಿಹಿ – ಕಹಿ ಅನುಭವಗಳು ಎರಡೂ ಇವೆ. ನಾನು ಈ ಕಟ್ಟಡಕ್ಕೆ ಮೊದಲ ಬಾರಿಗೆ ಸದಸ್ಯನಾಗಿ ಪ್ರವೇಶಿಸಿದಾಗ ದೇಶದ ಜನರು ನನಗೆ ಇಷ್ಟೊಂದು ಪ್ರೀತಿ ಕೊಡುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಹಳೆಯ ಕಟ್ಟಡವು ಮುಂದಿನ ಹಲವು ತಲೆಮಾರುಗಳಿಗೆ ಸ್ಪೂರ್ತಿ ತುಂಬಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಿಸಿದರು.

ಇದೇ ವೇಳೆ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಅವರನ್ನು ನೆನಪಿಸಿದ ಪ್ರಧಾನಿ ಮೋದಿ, ಅವರ ಉಪಕ್ರಮಗಳು ಸಂಸತ್ತಿನಲ್ಲಿ ಹೇಗೆ ಸಾಕ್ಷಿಯಾಯಿತು ಎಂಬುದನ್ನು ಉಲ್ಲೇಖಿಸಿದರು.

ಸಂಸತ್‌ನಲ್ಲಿ ಮೊದಲು ಮಹಿಳಾ ಸದಸ್ಯರ ಸಂಖ್ಯೆ ಕಡಿಮೆ ಇತ್ತು. ಆದರೆ, ನಿಧಾನವಾಗಿ ಈ ಸದನದಲ್ಲಿ ಮಹಿಳಾ ಸಂಖ್ಯಾ ಬಲ ಹೆಚ್ಚಾಗುತ್ತಿದೆ. ಭಾರತದ ಇತ್ತೀಚಿನ ಹಲವು ಸಾಧನೆಗಳು ವಿಶ್ವ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೇಶದ ಸಂಸತ್‌ನ 75 ವರ್ಷಗಳ ಶ್ರಮದ ಪ್ರತಿಫಲ ಇದು ಎಂದು ತಿಳಿಸಿದರು.

ಚಂದ್ರಯಾನ – 3 ಯೋಜನೆ ಯಶಸ್ಸು ಭಾರತ ಮಾತ್ರವಲ್ಲ, ಇಡೀ ವಿಶ್ವಕ್ಕೇ ಹೆಮ್ಮೆ ಮೂಡಿಸಿದೆ. ಭಾರತವು ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಮಾಡುತ್ತಿರುವ ಸಾಧನೆಯ ಪ್ರತೀಕ ಇದು ಎಂದು ಹೇಳಿದ ಪ್ರಧಾನಿ ಮೋದಿ, ದೇಶದ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಿಸುವುದಾಗಿ ಇದೇ ವೇಳೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...