ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Date:

  • ಸೆ.17ರಂದು ನಡೆದ ಸರ್ವಪಕ್ಷ ಸಭೆಯ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ
  • ಸೆಪ್ಟೆಂಬರ್ 19ರಂದು ಹೊಸ ಸಂಸತ್ ಭವನದಲ್ಲಿ ಸಂಸತ್ತಿನ ಅಧಿವೇಶನ

ಇಂದಿನಿಂದ(ಸೆ.18) ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಇಂದು ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, “ಕಾಶ್ಮೀರದಲ್ಲಿ ಹುತಾತ್ಮರಾದ ಸೇನೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಾಳೆಯಿಂದ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದೆ. ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ. ಮೊದಲ ದಿನ ಹಳೆ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ. ಮರುದಿನ ಅಂದರೆ ಸೆ.19ರಂದು ಹಳೆ ಸಂಸತ್ ಭವನದಲ್ಲಿ ಫೋಟೋ ಸೆಷನ್, ನಂತರ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅದರ ನಂತರ ನಾವು ಹೊಸ ಸಂಸತ್ತಿಗೆ ಪ್ರವೇಶಿಸುತ್ತೇವೆ” ಎಂದು ಮಾಹಿತಿ ನೀಡಿದರು.

ಸೆ.18ರಂದು ಹಳೆಯ ಸಂಸತ್ತಿನಲ್ಲಿ ಅಧಿವೇಶನ ನಡೆದರೆ, ಸೆ.19 ರಂದು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. 20ರಿಂದ ಸಾಮಾನ್ಯ ಸರ್ಕಾರಿ ಕೆಲಸಗಳು ಹೊಸ ಸಂಸತ್ ಭವನದಲ್ಲಿ ಪ್ರಾರಂಭವಾಗುತ್ತವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರದಿಂದ ಐದು ದಿನಗಳ ಕಾಲ ಕೇಂದ್ರ ಸರ್ಕಾರ ಕರೆದಿರುವ ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಭಾನುವಾರ ಸಂಜೆ ಸರ್ವ ಪಕ್ಷ ನಾಯಕರೊಂದಿಗೆ ಸಭೆಯನ್ನು ಆಯೋಜಿಸಲಾಗಿತ್ತು.

‘ಸಂವಿಧಾನ ಸಭೆ’ಯಿಂದ ಆರಂಭಿಸಿ ಸಂಸತ್ತಿನ 75 ವರ್ಷಗಳ ಪಯಣ ಕುರಿತ ವಿಶೇಷ ಚರ್ಚೆಯೇ ಸರ್ಕಾರ ಪಟ್ಟಿ ಮಾಡಲಾದ ಪ್ರಮುಖ ಅಜೆಂಡಾವಾದರೂ ಸಾಮಾನ್ಯವಾಗಿ ಅಧಿವೇಶನ ಇಲ್ಲದೆ ಬೇರೆ ಸಂದರ್ಭದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಅಚ್ಚರಿಗೆ ಕಾರಣವಾಗಿದೆ.

ವಿಶೇಷ ಅಧಿವೇಶನದ ಮುನ್ನಾದಿನವಾದ ಭಾನುವಾರದಂದು ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ, ವಿಶೇಷ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳ ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಈಗಾಗಲೇ ವಿತರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...