ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ: ಡಿಸಿಎಂ ಡಿ ಕೆ ಶಿವಕುಮಾರ್

Date:

ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದರು.

“ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು” ಎಂದು ಹೇಳಿದರು.

ಸ್ಕೈ ಡೆಕ್ ನಿರ್ಮಾಣಕ್ಕೆ ಶೀರ್ಘದಲ್ಲೇ ಟೆಂಡರ್

“ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು” ಎಂದರು.

“ಬೃಂದಾವನ ಉದ್ಯಾನವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು. ಇದಕ್ಕೆ ಕಳೆದ ಬಜೆಟ್ ಅಲ್ಲೂ ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತದೆ ಎಂದು ಊರು ಕಟ್ಟಿದ ಕೆಂಪೇಗೌಡರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬ್ರಾಂಡ್ ಬೆಂಗಳೂರು ಯೋಜನೆಯ ಅಡಿ ಕಸ, ನೀರು, ರಸ್ತೆ, ಮೂಲ ಸೌಕರ್ಯ, ಟ್ರಾಫಿಕ್ ಸೇರಿದಂತೆ ಅನೇಕ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಯೋಜನೆ ಹಾಕಿಕೊಂಡಿದ್ದೇವೆ” ಎಂದು ಹೇಳಿದರು.

ಜಿಎಸ್‌ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ

“ಶೇ.18 ಕ್ಕೂ ಹೆಚ್ಚಿನ ಜಿಎಸ್ ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ. ದಕ್ಷಿಣ ಭಾರತೀಯರಾದ ನಾವು ಇದರ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಬೇಕು. ಬ್ಯಾಂಕ್ ಬಡ್ಡಿ ದರ, ಇತರೇ ತೆರಿಗೆಗಳು ಸೇರಿ ಅರ್ಧಕ್ಕೂ ಹೆಚ್ಚು ಹಣ ಕಳೆದುಕೊಂಡರೆ ಹೂಡಿಕೆದಾರರು ಪ್ರವಾಸೋದ್ಯಮದ ಕಡೆ ಗಮನ ಹರಿಸುವುದಿಲ್ಲ. ಆದ ಕಾರಣ ಹೂಡಿಕದಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...