ಮುಸ್ಲಿಮರ ಮೊಹಲ್ಲಾಗಳಲ್ಲಿ ಭಗವದ್ಗೀತೆ ಸಂದೇಶ ಹರಡಿದರೆ ಹಿಂದೂ ರಾಷ್ಟ್ರ ಬಲಗೊಳ್ಳುತ್ತದೆ: ಬಿಜೆಪಿ ಸಚಿವ ರಾಣೆ ಕೋಮುವಾದಿ ಹೇಳಿಕೆ

Date:

ಮುಸ್ಲಿಮರ ಮೊಹಲ್ಲಾಗಳಲ್ಲಿ(ಮುಸ್ಲಿಮರು ಹೆಚ್ಚಾಗಿ ವಾಸವಿರುವ ಪ್ರದೇಶ) ಭಗವದ್ಗೀತೆ ಸಂದೇಶ ಹರಡುವುದರಿಂದ ಹಿಂದೂ ರಾಷ್ಟ್ರ ಬಲಗೊಳ್ಳುತ್ತದೆ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಭಾನುವಾರ ಕೋಮುವಾದಿ ಹೇಳಿಕೆಯನ್ನು ನೀಡಿದ್ದಾರೆ.

ಪುಣೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ “ಭಗವದ್ಗೀತೆ ಎಂದಿಗೂ ದ್ವೇಷವನ್ನು ಬೋಧಿಸುವುದಿಲ್ಲ ಅಥವಾ ಮತಾಂತರಗಳನ್ನು ಪ್ರತಿಪಾದಿಸುವುದಿಲ್ಲ. ಅದರ ಬೋಧನೆಗಳು ಮೊಹಲ್ಲಾಗಳಲ್ಲಿ ಹರಡಿದರೆ ಅವರ ಆಲೋಚನೆಗಳು ಸಹ ಬದಲಾಗುತ್ತದೆ. ಇದು ನಮ್ಮ ಹಿಂದೂ ರಾಷ್ಟ್ರವನ್ನು ಬಲಪಡಿಸುತ್ತದೆ” ಎಂದರು.

ಇದನ್ನು ಓದಿದ್ದೀರಾ? ‘ಟೆರಸ್ಟ್ರಿಯಲ್ ವರ್ಸಸ್’ ಸಿನಿಮಾ: ‘ಹಿಂದೂರಾಷ್ಟ್ರ ಕಟ್ಟುತ್ತೇವೆ’ ಎನ್ನುವವರಿಗೂ ಇಲ್ಲಿದೆ ಪಾಠ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಗವದ್ಗೀತೆಯ ಬೋಧನೆಗಳು ಸಾಮರಸ್ಯ ಮತ್ತು ಚಿಂತನೆಯ ಪರಿವರ್ತನೆಯನ್ನು ಉತ್ತೇಜಿಸುತ್ತವೆ. ಅದರ ಸಂದೇಶವು ದೇಶದ ಪ್ರತಿಯೊಂದು ಮೂಲೆಯನ್ನು ತಲುಪಬೇಕು” ಎಂದೂ ಹೇಳಿದ್ದಾರೆ.

1ನೇ ತರಗತಿಯಿಂದ ಶಾಲಾ ಪಠ್ಯಕ್ರಮದಲ್ಲಿ ಹಿಂದಿಯನ್ನು ಸೇರಿಸುವ ಬಗ್ಗೆ ವಿಪಕ್ಷಗಳ ವಿರೋಧದ ಬಗ್ಗೆಯೂ ಈ ಸಂದರ್ಭದಲ್ಲೇ ರಾಣೆ ಪ್ರತಿಕ್ರಿಯಿಸಿದ್ದಾರೆ. “ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುತ್ತಿಲ್ಲ. ವಿದ್ಯಾರ್ಥಿಗಳು ಬಯಸಿದರೆ ಸಂಸ್ಕೃತವನ್ನು ಮೂರನೇ ಭಾಷೆಯಾಗಿ ಆಯ್ಕೆ ಮಾಡಬಹುದು” ಎಂದರು.

ಹಾಗೆಯೇ, “ಗೀತರಚನೆಕಾರ ಜಾವೇದ್ ಅಖ್ತರ್, ನಟ ಆಮಿರ್ ಖಾನ್ ಅಥವಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮರಾಠಿಯಲ್ಲಿ ಮಾತನಾಡುವುದನ್ನು ನಾನೆಂದು ಕೇಳಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಹಿಂದೂ ರಾಷ್ಟ್ರದ ಉದ್ದೇಶ ಸಾಕಾರಗೊಳಿಸಲು ಸ್ಥಳೀಯ ಸಂಸ್ಕೃತಿ ನಾಶ ಮಾಡಲು ಹೊರಟಿದ್ದಾರೆ: ಎ ನಾರಾಯಣ

ಶಿವಸೇನೆ (ಯುಬಿಟಿ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಜುಲೈ 5 ರಂದು ಹಿಂದೆ ಹೇರಿಕೆ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸುವುದಾಗಿ ಘೋಷಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಣೆ, “ಬೆಹ್ರಂಪಾದ ಅಥವಾ ಮೊಹಮ್ಮದ್ ಅಲಿ ರಸ್ತೆಯಂತಹ ಹಿಂದಿ ಮಾತನಾಡುವ ಪ್ರದೇಶಗಳಲ್ಲಿ ಏಕೆ ಮೆರವಣಿಗೆ ನಡೆಸಬಾರದು? ‘ಆಜಾನ್’ (ಇಸ್ಲಾಮ್ ಪ್ರಾರ್ಥನೆ) ಮರಾಠಿಯಲ್ಲಿ ಕೂಗಿದ ದಿನ ಭಾಷೆಗೆ ನಿಜವಾದ ಗೌರವವಿದೆ ಎಂದು ನಮಗೆ ತಿಳಿಯುತ್ತದೆ” ಎಂದು ಹೇಳುವ ಮೂಲಕ ಬಿಜೆಪಿ ನಾಯಕ ಭಾಷಾ ಹೇರಿಕೆ ವಿವಾದದಲ್ಲೂ ಕೋಮು ಬಣ್ಣ ಬಳಿಯುವ ಯತ್ನ ಮಾಡಿದ್ದಾರೆ.

“ಹಿಂದೂಗಳಲ್ಲಿ ವಿಭಜನೆಯನ್ನು ಹೆಚ್ಚಿಸುವ ಬದಲು, ದಶಕಗಳಿಂದ ಮುಂಬೈನಲ್ಲಿ ವಾಸಿಸುತ್ತಿರುವ ಆದರೆ ಭಾಷೆಯನ್ನು ಸ್ವೀಕರಿಸದವರಿಗೆ ಮರಾಠಿ ಕಲಿಸಲು ಪ್ರಯತ್ನಿಸಬೇಕು” ಎಂದು ರಾಣೆ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...