ಶ್ರೀನಿವಾಸ್ ಪ್ರಸಾದ್ ಎಂದಿಗೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ: ಸಿಎಂ ಸಿದ್ದರಾಮಯ್ಯ ಬಣ್ಣನೆ

Date:

“ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಬಡವರಿಗೆ ಸ್ವಾಭಿಮಾನವಿರಲೇಬೇಕು. ನಮ್ಮಲ್ಲಿ ಸ್ವಾಭಿಮಾನವಿದ್ದರೆ ಮಾತ್ರ ಮನುಷ್ಯರಾಗಿ ಬಾಳಲು ಸಾಧ್ಯ, ಇಲ್ಲದಿದ್ದರೆ ಗುಲಾಮಗಿರಿಗೆ ಗುರಿಯಾಗಬೇಕಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ” ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶನಿವಾರ ನಡೆದ ಹಿರಿಯ ರಾಜಕಾರಣಿ, ಸಂಸದ ಶ್ರೀನಿವಾಸ್ ಪ್ರಸಾದ್ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ, “ಶ್ರೀನಿವಾಸ್ ಪ್ರಸಾದ್ ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಿದವರು. ಹಳೆಯ ತಲೆಮಾರಿನ ಈ ರಾಜಕೀಯ ಮುತ್ಸದ್ದಿಯ ನಿಧನದಿಂದ ಮಹತ್ತರವಾದ ರಾಜಕೀಯ ಕೊಂಡಿ ಕಳಚಿದಂತಾಗಿದೆ. ಅವರ ವಿಚಾರಧಾರೆಗಳು ಇಂದಿನ ಯುವಜನರಿಗೆ ಆದರ್ಶವಾಗಿರಬೇಕು” ಎಂದರು.

“ಮೊದಲು ಜನತಾ ದಳ ಪಕ್ಷದಿಂದ ಶ್ರೀನಿವಾಸ್ ಪ್ರಸಾದ್ ರವರು ಲೋಕಸಭೆ ಹಾಗೂ ನಂತರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಂಡು ಗೆಲುವು ಸಾಧಿಸಿದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ ಶ್ರೀನಿವಾಸ್ ಪ್ರಸಾದ್ ಹಾಗೂ ನಾನು ಬೇರೆ ಪಕ್ಷಗಳಲ್ಲಿದ್ದರೂ, ನಮ್ಮಲ್ಲಿ ಪರಸ್ಪರ ಸ್ನೇಹ ಹಾಗೂ ಗೌರವಗಳಿದ್ದವು. ಅವರು ವಿವಿಧ ಪಕ್ಷಗಳಲ್ಲಿ ಹಲವು ನಾಯಕರೊಂದಿಗೆ ಸ್ನೇಹ ಹಾಗೂ ಒಡನಾಟವನ್ನು ಹೊಂದಿದ್ದರು. ಮನುಷ್ಯತ್ವದಿಂದ ಕೂಡಿದ ಸಜ್ಜನರು. ಅವರು ಯಾವುದೇ ಪಕ್ಷದಲ್ಲಿದ್ದರೂ, ಡಾ. ಅಂಬೇಡ್ಕರ್‌ ಅವರ ವಿಚಾರಧಾರೆಗಳ ಅನುಯಾಯಿಯಾಗಿದ್ದರು” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಸಂವಿಧಾನದ ಬಗ್ಗೆ ಅಪಾರ ಗೌರವ

“ಸಂವಿಧಾನದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಅವಕಾಶ ವಂಚಿತರಿಗೆ ಜಾತ್ಯತೀತವಾಗಿ ಸಮಾನ ಅವಕಾಶವನ್ನು ನೀಡಬೇಕೆಂಬುದನ್ನು ನಂಬಿ ಸಂವಿಧಾನದ ಬಗ್ಗೆ ಬದ್ಧತೆಯನ್ನು ಹೊಂದಿದ್ದರು. ಬುದ್ಧ, ಬಸವಣ್ಣ, ಗಾಂಧೀಜಿಯವರ ವಿಚಾರಧಾರೆಗಳನ್ನು ನಂಬಿ ನಡೆಯುವವರು ಎಂದಿಗೂ ಮನುಷ್ಯತ್ವವನ್ನು ಪಾಲಿಸುವವರಾಗಿರುತ್ತಾರೆ. ಮನುಷ್ಯ ಮನುಷ್ಯನನ್ನು ಪರಸ್ಪರ ಗೌರವಿಸಬೇಕೇ ಹೊರತು ದ್ವೇಷಿಸಬಾರದು. ರಾಜಕೀಯ ವೈರುದ್ಯಗಳಿಂದಾಗಿ ಪರಸ್ಪರ ಟೀಕಿಸುವುದು ಸ್ವಾಭಾವಿಕವಾಗಿದ್ದರೂ, ನಮ್ಮ ಸ್ನೇಹಕ್ಕೆಂದೂ ಧಕ್ಕೆ ಬಂದಿಲ್ಲ” ಎಂದರು.

“ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ನನ್ನ ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು, ರಾಜಕೀಯದಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು” ಎಂದು ನೆನಪಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...