ಎಸ್‌ಎಸ್‌ಎಲ್‌ಸಿ ಪರೀಕ್ಷೆ | ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

Date:

  • ವಿದ್ಯಾರ್ಥಿಗಳು ಕಲಿತ ಮೊರಾರ್ಜಿ ವಸತಿ ಶಾಲೆ ಅಭಿವೃದ್ಧಿಗೆ 1.50 ಕೋಟಿ ಅನುದಾನ
  • ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವು ಘೋಷಿಸಿದ ಸಿಎಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸನ್ಮಾನಿಸಿದರು.

ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿ, ಇಬ್ಬರೂ ಓದಿದ ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿಗೆ ಒಂದೂವರೆ ಕೋಟಿ ರೂ. ಅನುದಾನದ ಘೋಷಣೆ ಮಾಡಿದರು.

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಕುಮಾರಿ ಅಂಕಿತ

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರಿ ಅಂಕಿತ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು.

ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...