ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಧನ್ಯವಾದ ಅರ್ಪಿಸಿದ ಎಸೆಸೆಲ್ಸಿ ಟಾಪರ್ ವಿದ್ಯಾರ್ಥಿನಿ ಅಂಕಿತಾ ಬಸಪ್ಪ

Date:

ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾಳೆ.

ಪತ್ರದಲ್ಲಿ ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದು, ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿವೆ ಎಂದು ಬಣ್ಣಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಂಕಿತಾಳನ್ನು ಬೆಂಗಳೂರಿಗೆ ಆಹ್ವಾನಿಸಿ, ಸನ್ಮಾನಿಸಿದ್ದಲ್ಲದೆ, ಮುಂದಿನ ಶಿಕ್ಷಣಕ್ಕೆ ಬೆಂಬಲ ನೀಡುವುದಾಗಿಯೂ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಅಂಕಿತಾ ಮುಖ್ಯಮಂತ್ರಿಗಳಗೆ ತನ್ನ ಮನದಾಳದಿಂದ ಅಭಿನಂದನೆ ವ್ಯಕ್ತಪಡಿಸಿ ಪತ್ರ ಬರೆದಿದ್ದಾಳೆ.

ಅಂಕಿತಾ ಸಿಎಂಗೆ ಬರೆದ ಪತ್ರದಲ್ಲಿ ಏನಿದೆ?

ಮಾನ್ಯ ಮುಖ್ಯಮಂತ್ರಿಗಳಿಗೆ ನಾನು ಮಾಡುವ ಸಾಷ್ಟಾಂಗ ನಮಸ್ಕಾರಗಳು. ಈ ಬಾರಿ ಅಂದರೆ 2023-24ನೇ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ (ಶೇ.100) ಸ್ಥಾನ ಬಂದಿದ್ದು, ಇಡೀ ರಾಜ್ಯಕ್ಕೆ ಸಂತಸಕರವಾದ ಸಂಗತಿಯಾಗಿದೆ. ಅದರಲ್ಲೂ ಪ್ರತೀ ಬಾರಿ ಫಲಿತಾಂಶ ಎಂದೊಡನೆ ದಕ್ಷಿಣ ಕರ್ನಾಟಕದೆಡೆ ಮುಖ ಮಾಡುತ್ತಿದ್ದ ಜನರ ದೃಷ್ಟಿ ಈ ಬಾರಿ ಬದಲಾಯಿತು. ಉತ್ತರ ಕರ್ನಾಟಕದ ಒಟ್ಟು ಸಾಮಾನ್ಯ ಹುಡುಗಿಯೂ ಸಹ ತಾನಂದುಕೊಂಡಿದ್ದನ್ನು ಸಾಧಿಸಬಲ್ಲಳು ಎಂದು ಆರಿಸಿಕೊಟ್ಟಿದ್ದಕ್ಕೆ ತುಂಬಾ ಹೆಮ್ಮೆ ಇದೆ

ನನ್ನನ್ನು ಬೆಂಗಳೂರಿಗೆ ಆಹ್ವಾನಿಸಿ, ತಮ್ಮ ಸ್ವ-ಗೃಹದವರೆಗೂ ಕರೆದು ಸನ್ಮಾನಿಸಿ, ಅಭಿನಂದಿಸಿ ನನ್ನ ಮುಂದಿನ ಓದಿನ ಭವಿಷ್ಟಕ್ಕೆ ನೆರವು ನೀಡಿದ್ದೀರಿ. ಅಷ್ಟೇ ಅಲ್ಲದೇ, ತುಂಬು ಹೃದಯದಿಂದ ನನ್ನನ್ನು ಸತ್ಕರಿಸಿ, ಹರಸಿ, ಆಶೀರ್ವದಿಸಿದ್ದೀರಿ. ನಿಮ್ಮಿಂದಲೇ ಪ್ರಾರಂಭವಾದ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು. ಈ ಸಂಸ್ಥೆ ಅಡಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೆಳ್ಳಿಗೇರಿಯಲ್ಲಿ ನಾನು ಓದಿದ್ದು. ಈ ಎಲ್ಲ ವಸತಿ ಶಾಲೆಗಳ ಪ್ರಾರಂಭಿಕ ಕಾರಣೀಭೂತರು ತಾವೆಂದು ತಿಳಿದು ಬಹಳ ಸಂತಸವಾಗಿದೆ. ಸಾಕಷ್ಟು ಸುವ್ಯವಸ್ಥೆಯುಳ್ಳ ಈ ಶಾಲೆಗಳು ಸರ್ಕಾರಿ ಶಾಲೆಗಳು ಎಂದು ಸಾಕಷ್ಟು ಜನರಿಗೆ ಇವುಗಳ ಬಗ್ಗೆ ತಪ್ಪು ಕಲ್ಪನೆಯಿರುತ್ತದೆ. ಈ ಶಾಲೆಗಳಿಂದ ಸಾಕಷ್ಟು ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿವೆ.

Letter 1

ನಿಮ್ಮನ್ನು ಭೇಟಿ ಆಗುವುದು ಎಂದರೆ ಜನಸಾಮಾನ್ಯರಿಗೆ ಎಟುಕದ ಮಾತು. ಅಂತಹ ಸೌಭಾಗ್ಯ ನಮಗೆ ಒದಗಿ ಬಂದಿರುವುದಕ್ಕೆ ಬಹಳ ಸಂತೋಷವಿದೆ. ನಿಮ್ಮ ಆಶೀರ್ವಾದ ನನ್ನೊಂದಿಗೆ ಇರಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...