ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

Date:

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ವಾಗ್ದಾಳಿ ನಡೆಸಿದರು.

ಶ್ರೀಪೆರಂಬದೂರಿನ ಡಿಎಂಕೆ ಅಭ್ಯರ್ಥಿ ಟಿ ಆರ್ ಬಾಲು ಮತ್ತು ಕಾಂಚೀಪುರಂ ಅಭ್ಯರ್ಥಿ ಜಿ ಸೆಲ್ವಂ ಪರ ಪ್ರಚಾರದ ವೇಳೆ ಚೆನ್ನೈ ಬಳಿಯ ಪಡಪ್ಪೈ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸ್ಟಾಲಿನ್, “ಪ್ರಧಾನಿ ಮೋದಿ ಅವರು ರಾಜ್ಯಗಳಿಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

“12 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು ಪ್ರಧಾನಿಯಾದ ನಂತರ ರಾಜ್ಯಗಳನ್ನು ಇಷ್ಟಪಡುವುದಿಲ್ಲ. ಪ್ರಧಾನಿಯಾದಾಗ ಹೇಳಿದ್ದೇನು, ಈಗ ಮಾಡುತ್ತಿರುವುದೇನು” ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಆರೆಸ್ಸೆಸ್‌ ಸಿದ್ಧಾಂತಕ್ಕೆ ಇಂದು ಮೋದಿ ಮುಖ – ನಾಳೆ ಮತ್ತೊಬ್ಬರ ಮುಖ: ಸ್ಟಾಲಿನ್

“ಮೋದಿ ಪ್ರಧಾನಿಯಾದಾಗ ಹೇಳಿರುವುದೇನು? ಅವರು ಸಿಎಂ ಆಗಿದ್ದರಿಂದ ರಾಜ್ಯಗಳು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಷ್ಟ್ರದ ಸಮಸ್ಯೆಗಳ ಬಗ್ಗೆಯೂ ತಿಳಿದಿದ್ದರು. ಆದರೆ ಈಗ ಅವರು ಏನು ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಬಳಸಿಕೊಂಡು ಪ್ರಧಾನಿ ಮೋದಿ ಅವರು ರಾಜ್ಯಗಳಿಗೆ ತೊಂದರೆ ಮಾಡುತ್ತಿದ್ದಾರೆ. ಇಡೀ ರಾಷ್ಟ್ರಕ್ಕೆ ಮೋದಿಯೇ ದೊಡ್ಡ ಸಮಸ್ಯೆ” ಎಂದು ಸಿಡಿಮಿಡಿಗೊಂಡರು.

“ಮೋದಿ ಆಡಳಿತದಲ್ಲಿ ಜನರ ಬದುಕು ದುಸ್ತರವಾಗಿದೆ” ಎಂದು ಹೇಳಿದ ಸ್ಟಾಲಿನ್, “ಇಂತಹ ಉನ್ನತ ಸ್ಥಾನದಲ್ಲಿರುವ ಮೋದಿಯವರು ಒಡೆದು ಆಳುವ ರಾಜಕಾರಣ ಮಾಡುತ್ತಿದ್ದಾರೆ. ಮೋದಿ ಎಂದಾದರೂ ಜನರ ಕಲ್ಯಾಣಕ್ಕಾಗಿ ಸಮಯ ನೀಡಿದ್ದಾರಾ? ಜನರಿಗೆ ಸಮಸ್ಯೆಗಳಿರುತ್ತವೆ ಆದರೆ ಮೋದಿಯವರ ಆಡಳಿತದಲ್ಲಿ ಜನರ ಇಡೀ ಜೀವನವೇ ಸಮಸ್ಯೆಯಾಗಿದೆ” ಎಂದು ವಾಗ್ದಾಳಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...