ರಾಜಕೀಯ ಪ್ರೇರಿತ ರಿವರ್ಸ್ ಗೇರ್ ಬಜೆಟ್: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ

Date:

  • ಬಜೆಟ್ ನಲ್ಲಿಯೂ ದ್ವೇಷದ ರಾಜಕಾರಣ, ನಮ್ಮ ಯೋಜನೆಗಳ ಬಗ್ಗೆ ಪ್ರಸ್ತಾಪವಿಲ್ಲ
  • ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಕಡಿಮೆ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತಿನ ಹಣಕಾಸಿನ ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳುತ್ತಾರೆ ಎಂದರೆ, ಅವರು ಭೂತಕಾಲದಲ್ಲಿದ್ದಾರೆ. ಇದು ರಾಜಕೀಯ ಬಜೆಟ್. ಹಲವಾರು ಅಂಕಿ ಅಂಶಗಳನ್ನು ಆ ಸಂದರ್ಭಕ್ಕೆ ವಾಸ್ತವಾಂಶಕ್ಕೆ ತಕ್ಕಂತೆ ಎಲ್ಲ ಸರ್ಕಾರಗಳು ಮಾಡಿವೆ. ಪ್ರತಿಯೊಂದಕ್ಕೂ 2013 ಕ್ಕೆ ಹೋಲಿಕೆ ಮಾಡಿದ್ದಾರೆ. ಅದನ್ನು ನೋಡಿದರೆ ಅವರು ಹೆಚ್ಚು ಸಾಲ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ಭಾಷಣ ಮತ್ತು ಬಜೆಟ್ ವ್ಯತ್ಯಾಸ ನೋಡಿದರೆ ಇದೊಂದು ಸುಳ್ಳು ಹೇಳುವ ಸರ್ಕಾರ ಅಂತ ಗೊತ್ತಾಗುತ್ತಿದೆ. ಕೊವಿಡ್ ನಿರ್ವಹಣೆಯ ಬಗ್ಗೆ ಇಡೀ ವಿಶ್ವವೇ ಕೊಂಡಾಡಿದೆ. ನಮ್ಮ ರಾಜ್ಯದ ಕೊವಿಡ್ ನಿರ್ವಹಣೆಯ ಬಗ್ಗೆ ದೇಶವೇ ಕೊಂಡಾಡಿದೆ. ಕೇಂದ್ರ ಸರ್ಕಾರ ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ಸಹಾಯ ಮಾಡಿದೆ. ನಮ್ಮ ಸರ್ಕಾರ ಕೂಡ ಸುಮಾರು 2000 ಕೋಟಿ ರೂ. ಕೊವಿಡ್ ನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ನೀಡಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಎಷ್ಟು ಹೆಚ್ಚು ತೆರಿಗೆ ಸಂಗ್ರಹ ಮಾಡಿದ್ದೇವೆ. ಕೇಂದ್ರ ಎಷ್ಟು ಅನುದಾನ ನೀಡಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಅನುದಾನ ಕಡಿಮೆ ಆಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಎರಡು ರೀತಿಯಲ್ಲಿ ಅನುದಾನ ನೀಡಲಿದೆ. ಕೆಲವು ಯೋಜನೆಗಳಲ್ಲಿ ನೇರವಾಗಿ ಫಲಾನುಭವಿಗಳಿಗೆ ಅನುದಾನ ದೊರೆಯುತ್ತದೆ ಅದನ್ನು ಮರೆಮಾಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಬಜೆಟ್ ನೋಡಿದರೆ ಟೀಕೆ ಮಾಡುವುದಕ್ಕೆ ಹೆಚ್ಚಿನ ಸ್ಥಾನ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಈಗಾಗಲೇ 6 ತಿಂಗಳು ಕಳೆದಿದೆ. ಈ ವರ್ಷ ಸುಮಾರು 25 ಸಾವಿರ ಕೊಟಿ ಮಾತ್ರ ಹೆಚ್ಚಿಗೆ ಬೇಕಾಗುತ್ತದೆ. ತೆರಿಗೆ ಹೆಚ್ಚಳ ಮಾಡುವ ಅಗತ್ಯವಿರಲಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 | ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ನಿಧಿ 4,079 ಕೋಟಿ ರೂ. ಹೆಚ್ಚಳ

ಬಜೆಟ್ ನಲ್ಲಿಯೂ ದ್ವೇಷದ ರಾಜಕಾರಣ ಮಾಡಿದ್ದಾರೆ. ನಮ್ಮ ಯೋಜನೆಗಳ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ನಾವು ಎಲ್ಲರಿಗೂ ಉಚಿತ ಶಿಕ್ಷಣ ಪ್ರಸ್ತಾಪ ಮಾಡಿದ್ದೆವು. ಸ್ತ್ರೀ ಸಾಮರ್ಥ್ಯ, ಯುವ ನಿಧಿ ಯೋಜನೆ ಮಾಡಿದ್ದೆವು. ಅವುಗಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಇದೊಂದು ಜನ ವಿರೋಧಿ, ಅಭಿವೃದ್ಧಿ ಮಾರಕವಾಗುವಂತಹ ಯಾವುದೇ ಹೊಸ ಭರವಸೆ ನೀಡದಿರುವ, ದುಡಿಯುವ ವರ್ಗ, ಪರಿಶಿಷ್ಟ ಜನರಿಗೆ ಯಾವುದೇ ಅನುಕೂಲಕರವಲ್ಲದ ಬಜೆಟ್ ಇದಾಗಿದೆ ಎಂದು ಅಭಿಪ್ರಾಯಪಟ್ಟರು.

ಕೊವಿಡ್ ಸಂದರ್ಭದಲ್ಲಿ ಏನೂ ಅಗಿಲ್ಲ ಎನ್ನುವಂತೆ ಭಾವಿಸಿದ್ದಾರೆ. ಕೊವಿಡ್ ಇಲ್ಲದ ಸಂದರ್ಭದಲ್ಲಿ ಇವರು ಸಾಲ ಮಾಡಿದ್ದಾರೆ. ಕೇಂದ್ರದಿಂದ ಬರುವ ಅನುದಾನ ಬರುತ್ತಿದೆ. ಜಿಎಸ್‌ಟಿ ಪರಿಹಾರ ಐದು ವರ್ಷ ಬರುತ್ತದೆ ಎಂದು ಸಂವಿಧಾನದಲ್ಲಿಯೇ ಇದೆ. ಅದನ್ನು ಕಾಂಗ್ರೆಸ್ ಅವರು ಒಪ್ಪಿಕೊಂಡು ಬಂದಿದ್ದಾರೆ. ಗ್ಯಾರಂಟಿ ಯೋಜನೆಗಳ ಭಾರ ಸಾಮಾನ್ಯ ಜನರ ಮೇಲೆ ಹಾಕಿದ್ದಾರೆ. ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಸಚಿವರಿಗೆ ಅಧಿಕಾರದ ಮದ ಏರಿದೆ. ಇಷ್ಟು ಬೇಗ ಅಧಿಕಾರದ ಮದ ಏರಬಾರದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರಾದ ಬೈರತಿ ಬಸವರಾಜ, ಸಿ ಸಿ ಪಾಟೀಲ್, ಎಸ್ ಟಿ ಸೋಮಶೇಖರ, ಶಾಸಕ ಸುರೇಶಗೌಡ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...