ರಾಜ್ಯ ಬಜೆಟ್‌ 2024-25 | ಸಿದ್ದರಾಮಯ್ಯರಿಂದ 3,71,383 ಕೋಟಿ ರೂ. ಗಾತ್ರದ ಆಯವ್ಯಯ ಮಂಡನೆ

Date:

ಈವರೆಗೂ 14 ಬಜೆಟ್‌ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ 2024-25ನೇ ಸಾಲಿನ ಆಯವ್ಯಯವನ್ನು ಶುಕ್ರವಾರ 10.15ಕ್ಕೆ ಮಂಡಿಸಲು ಆರಂಭಿಸಿದರು. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್‌ ಇದಾಗಿದೆ.

ಸಹಜವಾಗಿ ಬಜೆಟ್ ಮಂಡನೆ ಮುನ್ನ ಮುಖ್ಯಮಂತ್ರಿಗಳು ದೇವರಿಗೆ ವಿಶೇಷ ಪೂಜೆ, ಪುನಸ್ಕಾರದಲ್ಲಿ‌ ಭಾಗಿಯಾಗತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಈ ಬಾರಿಯೂ ಯಾವುದೇ ಪೂಜೆ ಪುರಸ್ಕಾರ, ದೇವಸ್ಥಾನ ಭೇಟಿ ನೀಡದೇ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವರು ಸೂಟ್ ಕೇಸ್ ನೊಂದಿಗೆ ಆಗಮಿಸಿವುದು ಸಂಪ್ರದಾಯವಾಗಿತ್ತು. ಈ ವಿಚಾರದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇದಕ್ಕೆ ತಿಲಾಂಜಲಿ ಹಾಡಿ ಬಹಿಖಾತಾದೊಂದಿಗೆ ಆಗಮಿಸಿದರು. ಈ ಬಾರಿ ಟ್ಯಾಬ್‌ನೊಂದಿಗೆ ಆಗಮಿಸಿ ಬಜೆಟ್‌ ಮಂಡಿಸಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಲಿಡ್ಕರ್ ಬ್ಯಾಗ್ ನೊಂದಿಗೆ ಆಗಮಿಸುವ ಮೂಲಕ ಚರ್ಮ ಕೈಗಾರಿಕೆಯನ್ನು ಪ್ರೋತ್ಸಾಹವನ್ನು ಪ್ರತಿಬಿಂಬಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

10.15ಕ್ಕೆ ಬಜೆಟ್‌ ಓದಲು ಆರಂಭಿಸಿದ ಸಿದ್ದರಾಮಯ್ಯ ಅವರು, “ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡಿಸುತ್ತಿರುವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ” ಎಂದರು.

“ಪ್ರಸಕ್ತ ಸಾಲಿನ ಬಜೆಟ್‌ ಗಾತ್ರ 3,71,383 ಕೋಟಿ ರೂ. ಆಗಿದ್ದು, ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ. ಐದು ಗ್ಯಾರಂಟಿಗಳ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...