‌ಸದ್ಯದಲ್ಲೇ ರಾಜ್ಯ ಸರ್ಕಾರದಿಂದ `ಶುದ್ಧ ಇಂಧನ ನೀತಿ’ ಜಾರಿ: ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌

Date:

ಯುನೈಟೆಡ್ ಕಿಂಗ್ಡಮ್ ಕಾರ್ಯದರ್ಶಿ (ವೇಲ್ಸ್) ಡೇವಿಡ್ ಡೇವಿಸ್ ಅವರು ಸೋಮವಾರ ಇಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದೊಂದಿಗೆ ಹೆಚ್ಚಿನ ಕೈಗಾರಿಕಾ ಸಹಭಾಗಿತ್ವ ಹೊಂದುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ನಡೆದ ವಿಚಾರ ವಿನಿಮಯದ ಸಂದರ್ಭದಲ್ಲಿ ಅವರು, “ಸೆಮಿಕಂಡಕ್ಟರ್, ವೈಮಾಂತರಿಕ್ಷ, ಆಟೋಮೋಟೀವ್ ಆಹಾರ ಮತ್ತು ಪಾನೀಯ, ಮೆಡ್-ಟೆಕ್, ಫಿನ್-ಟೆಕ್ ಹಾಗೂ ಮರುಬಳಕೆ ಇಂಧನ ಮುಂತಾದ ಕ್ಷೇತ್ರಗಳಲ್ಲಿ ವೇಲ್ಸ್ ಪರಿಣತಿ ಹೊಂದಿದೆ. ಮುಂಬರುವ ದಿನಗಳಲ್ಲಿ ತಮ್ಮಲ್ಲಿನ ಕಂಪನಿಗಳು ಕರ್ನಾಟಕದಲ್ಲಿ ಹೆಚ್ಚು ಹೂಡಿಕೆ ಮಾಡಲು ಮತ್ತು ಸಹಭಾಗಿತ್ವ ಹೊಂದಲು ಉತ್ಸುಕವಾಗಿವೆ” ಎಂದು ತಿಳಿಸಿದರು.

ಸಚಿವ ಪಾಟೀಲ್ ಮಾತನಾಡಿ, “ಬೆಂಗಳೂರಿನ ಸಮೀಪದಲ್ಲಿ ಜಾಗತಿಕ ದರ್ಜೆಯ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರವು (ಕೆಎಚ್ಐಆರ್ ಸಿಟಿ) 2,000 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರುತ್ತಿದೆ. ವೇಲ್ಸ್ ನ ಕಂಪನಿಗಳು ಇಲ್ಲಿ ಹೂಡಿಕೆ ಮಾಡುವ ಮೂಲಕ, ಈ ಸದವಕಾಶವನ್ನು ಬಳಸಿಕೊಳ್ಳಬೇಕು. ಜೊತೆಗೆ ರಾಜ್ಯದಲ್ಲಿ ಏರೋಸ್ಪೇಸ್, ರಕ್ಷಣೆ ಮತ್ತು ಮಶೀನ್ ಟೂಲ್ಸ್ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಗೆ ಅವಕಾಶವಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದಲ್ಲದೆ, ರಾಜ್ಯ ಸರಕಾರವು ಸದ್ಯದಲ್ಲೇ ʼಶುದ್ಧ ಇಂಧನ ನೀತಿ’ಯನ್ನು ಜಾರಿಗೆ ತರುತ್ತಿದೆ. ಇದು ಪ್ರವರ್ಧಮಾನಕ್ಕೆ ಬರುತ್ತಿರುವ ಕ್ಷೇತ್ರವಾಗಿದ್ದು, ಮುಂದಿನ ದಿನಗಳಲ್ಲಿ ಭಾರೀ ಬೇಡಿಕೆ ಕಾಣಲಿದೆ. ನಮ್ಮಲ್ಲಿ ಸರಕಾರಗಳು ಬದಲಾದರೂ ಕೈಗಾರಿಕೆಗಳ ಬೆಳವಣಿಗೆ ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿದೆ. ಇಲ್ಲಿ ಹೂಡಿಕೆಸ್ನೇಹಿ ವಾತಾವರಣವಿದ್ದು, ಅತ್ಯುತ್ತಮ ನೀತಿಗಳಿವೆ” ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

“ಕೋವಿಡ್ ಸಂದರ್ಭದಲ್ಲಿ ಭಾರತ ಮತ್ತು ಯುನೈಟೆಡ್ ಕಿಂಗ್ಡಂ ಜತೆಗೂಡಿ ಕೆಲಸ ಮಾಡಿವೆ. ರಾಜ್ಯದಲ್ಲಿ ಉತ್ಪಾದನಾ ಕ್ಷೇತ್ರ, ಫಿನ್ಟೆಕ್, ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ವಿಪುಲ ಅವಕಾಗಳಿವೆ. ಯುನೈಟೆಡ್ ಕಿಂಗ್ಡಂನಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ಆ ದೇಶವು ತನ್ನ ಅಗತ್ಯವೇನೆಂದು ತಿಳಿಸಿದರೆ ಅದಕ್ಕೆ ತಕ್ಕಂತೆ ತರಬೇತಿ ಕೊಟ್ಟು, ಇಲ್ಲಿ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲಾಗುವುದು” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಟೆಸ್ಕೋ, ಎ.ಆರ್.ಎಂ., ಮೈಕ್ರಾನ್ ಕ್ಲೀನ್, ರೋಲ್ಸ್ ರಾಯ್, ಎಚ್ ಎಸ್ ಬಿಸಿ ಮತ್ತು ರೆವೊಲಟ್ ಮುಂತಾದ ಕಂಪನಿಗಳ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...